Thursday, January 20, 2011

ಸಿಸಿಟಿವಿ ಅಳವಡಿಸಲು ಸೂಚನೆ

ಮಂಗಳೂರು, ಜನವರಿ.20 : ಧಾರ್ಮಿಕ ದತ್ತಿ ಇಲಾಖಾ ವ್ಯಾಪ್ತಿಗೆ ಒಳಪಡುವ ಪ್ರಮುಖ ದೇವಾಲಯಗಳಲ್ಲಿ ಸಿಸಿಟಿವಿ ಅಳವಡಿಸಿ ಪಾಲನಾ ವರದಿ ನೀಡಲು ಜಿಲ್ಲಾಧಿಕಾರಿ ಸುಬೋಧ್ ಯಾದವ್ ಅವರು ನಿರ್ದೇಶನ ನೀಡಿದ್ದಾರೆ.
ದೇವಾಲಯಗಳಲ್ಲಿ ಬೆಲೆಬಾಳುವ ಆಭರಣಗಳು, ಕಾಣಿಕೆ ಹುಂಡಿಗಳನ್ನು ಕಾಪಾಡಲು, ಮುಂಜಾಗ್ರತಾ ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದ್ದು, ಕನ್ನಗಳ್ಳ ಕರೆಗಂಟೆ (ಬರ್ಗಲರ್ ಅಲಾರಂ) ನ್ನು ಕಡ್ಡಾಯವಾಗಿ ಅಳವಡಿಸಬೇಕಿಂದಿದ್ದಾರೆ. ಆದುದರಿಂದ ಜಿಲ್ಲೆಯ ಪ್ರವರ್ಗ ಎ ಮತ್ತು ಬಿ ಸೇರಿದ ಎಲ್ಲಾ ದೇವಾಲಯಗಳಲ್ಲಿ ಹೆಚ್ಚಿನ ಭದ್ರತೆ ಕಾಯ್ದುಕೊಳ್ಳುವ ದೃಷ್ಟಿಯಿಂದ ಈ ಆದೇಶ ಹೊರಡಿಸಲಾಗಿದ್ದು, ಈ ಸಂಬಂಧ ತಗುಲುವ ಖರ್ಚನ್ನು ದೇವಾಲಯದ ನಿಧಿಯಿಂದ ಭರಿಸಿ ಖರ್ಚಿನ ಮಂಜೂರಾತಿಗೆ ಜಿಲ್ಲಾಧಿಕಾರಿಗಳ ಕಚೇರಿಗೆ ಪ್ರಸ್ತಾವನೆ ಸಲ್ಲಿಸಲು ಸೂಚಿಸಲಾಗಿದೆ.