Friday, March 25, 2011

ಎ.05 ಬಾಬು ಜಗಜೀವನರಾಂ & ಎ.14 ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆ

ಮಂಗಳೂರು,ಮಾರ್ಚ್.25:2011 ನೇ ಸಾಲಿನಲ್ಲಿ ಎಪ್ರಿಲ್ 5 ರಂದು ಬಾಬು ಜಗಜೀವನ ರಾಂ ರವರ 104ನೇ ಜನ್ಮ ದಿನಾಚರಣೆಯನ್ನು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ,
ಎಪ್ರಿಲ್ 14 ರಂದು ಡಾ,ಬಿ.ಆರ್.ಅಂಬೇಡ್ಕರ್ ಅವರ 120 ನೇ ಜನ್ಮ ದಿನಾಚರಣೆಯನ್ನು ನಗರದ ಪುರಭವನದಲ್ಲಿ ಏರ್ಪಡಿಸುವಂತೆ ನಿರ್ಧರಿಸಲಾಯಿತು.
ಇಂದು ದಿನಾಂಕ (25-3-11) ರಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾರವರ ಅಧ್ಯಕ್ಷತೆಯಲ್ಲಿ ನಡೆದ ಡಾ.ಬಿ.ಆರ್.ಅಂಬೇಡ್ಕರ್ ದಿನಾಚರಣೆ ಮತ್ತು ಬಾಬು ಜಗಜೀವನ್ ರಾಂ ಜನ್ಮ ದಿನಾಚರಣೆ ಕುರಿತ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಯಿತು. ಡಾ.ಬಿ.ಆರ್ ಅಂಬೇಡ್ಕರ್ ದಿನಾಚರಣೆಯ ಸಂದರ್ಭದಲ್ಲಿ,ಸರಕಾರದ ವಿವಿಧ ಇಲಾಖೆಗಳಿಂದ ಕೊಡಲ್ಪಡುವ ಕೆಲವೊಂದು ಫಲಾನುಭವಿಗಳಿಗೆ ಸವಲತ್ತುಗಳನ್ನು ವಿತರಣೆ ಮಾಡಲು, ಇಲಾಖಾಧಿಕಾರಿಗಳು ಎಪ್ರಿಲ್ 10 ರೊಳಗೆ ವರದಿ ನೀಡುವಂತೆ ಸೂಚಿಸಲಾಯಿತು.ನಗರದ ಎಲ್ಲಾ ಅಧಿಕಾರಿಗಳು ತಮ್ಮ ಸಿಬ್ಬಂದಿಗಳೊಂದಿಗೆ ಉತ್ಸಾಹದಿಂದ ಈ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಅಪರ ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಮಟ್ಟದ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.