Thursday, March 10, 2011

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆಡಳಿತ ಮಂಡಳಿಗೆ ಚುನಾವಣೆ

ಮಂಗಳೂರು,ಮಾರ್ಚ್.10:ದಕ್ಷಿಣಕನ್ನಡ ಜಿಲ್ಲೆಯ ಮಂಗಳೂರು,ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕುಗಳ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಆಡಳಿತ ಮಂಡಳಿಯ ಒಟ್ಟು 14 ಸ್ಥಾನಗಳಿಗೆ ಎಪ್ರಿಲ್, 24 ರಂದು ಚುನಾವಣೆ ನಡೆಸುವ ಕುರಿತು ಜಿಲ್ಲಾಧಿಕಾರಿ ದಕ್ಷಿಣಕನ್ನಡ ಜಿಲ್ಲೆ ಮಂಗಳೂರು ಇವರು ಅಧಿಸೂಚನೆ ಹೊರಡಿಸಿರುತ್ತಾರೆ.
ಮಂಗಳೂರು,ಬಂಟ್ವಾಳ ಮತ್ತು ಬೆಳ್ತಂಗಡಿ ಮಾರುಕಟ್ಟೆ ಪ್ರದೇಶದ ಕೃಷಿಕರ ಕ್ಷೇತ್ರದಿಂದ ಒಟ್ಟು 11 ಸ್ಥಾನಕ್ಕೆ ಮಾರುಕಟ್ಟೆ ಪ್ರದೇಶದ ವರ್ತಕರ ಕ್ಷೇತ್ರದಿಂದ,ಸಹಕಾರಿ ಸಂಘಗಳ ಕ್ಷೇತ್ರದಿಂದ ಹಾಗೂ ಕೃಷಿ ಹುಟ್ಟುವಳಿಗಳ ಮಾರಾಟ ವ್ಯವಹಾರದಲ್ಲಿ ತೊಡಗಿರುವ ಸಂಸ್ಕರಣ ಸಹಕಾರಿ ಸಂಘಗಳ ಕ್ಷೇತ್ರದಿಂದ ತಲಾ ಒಂದೊಂದು ಸ್ಥಾನಕ್ಕಾಗಿ ಚುನಾವಣೆ ನಡೆಯಲಿದೆ. ನಾಮ ಪತ್ರ ಸಲ್ಲಿಸಲು 25-3-11 ಕೊನೆಯ ದಿನ.ನಾಮಪತ್ರ ಪರಿಶೀಲನೆ 28-3-11,ಉಮೇದುವಾರಿಕೆ ಹಿಂತೆಗೆದುಕೊಳ್ಳಲು 31-3-11 ಹಾಗೂ ಅಗತ್ಯವಿದ್ದಲ್ಲಿ 24-4-11 ರಂದು ಬೆಳಿಗ್ಗೆ 7 ರಿಂದ ಸಂಜೆ 5 ಗಂಟೆ ತನಕ ಚುನಾವಣೆ ನಡೆಯಲಿದೆ.ನಾಮಪತ್ರಗಳನ್ನು ಬೆಳಿಗ್ಗೆ 11 ರಿಂದ 3 ಗಂಟೆಯ ವರೆಗೆ ಮಂಗಳೂರು,ಬಂಟ್ವಾಳ ಮತ್ತು ಬೆಳ್ತಂಗಡಿ ತಾಲ್ಲೂಕುಗಳ ತಹಶೀಲ್ದಾರರಿಗೆ ಸಲ್ಲಿಸಬಹುದಾಗಿದೆ.