
ಹೋಬಳಿಯನ್ನು ಘಟಕವಾಗಿ ಪರಿಗಣಿಸಿ ಹೋಬಳಿವಾರು ಬೆಳೆ ಕಟಾವು ಪ್ರಯೋಗಗಳ ಮೂಲಕ ವಾಸ್ತವಿಕ ಇಳುವರಿ ಲೆಕ್ಕಾಚಾರ ಮಾಡಲಾಗುವುದು. ಶೇ.60ಕ್ಕಿಂತ ಕಡಿಮೆ ವಾಸ್ತವಿಕ ಇಳುವರಿ ಬಂದಲ್ಲಿ ಇಡೀ ಪ್ರದೇಶದ ರೈತರು ಇಳುವರಿ ಕಡಿತಕ್ಕೆ ಒಳಗಾಗಿರುವರೆಂದು ಭಾವಿಸಿ ಸೂಕ್ತ ಪರಿಹಾರ ನೀಡಲಾಗುವುದು.
ಪ್ರಕೃತಿ ವಿಕೋಪಗಳಾದ ಪ್ರವಾಹ, ಆಲಿಕಲ್ಲು ಮಳೆ, ಭೂಕಂಪ, ಚಂಡಮಾರುತಗಳಿಂದ ಉಂಟಾಗುವ ನಷ್ಟದ ನಿರ್ಧರಣೆಯನ್ನು ವೈಯಕ್ತಿಕ ಎಂದು ಪರಿಗಣಿಸಿ ಪರಿಹಾರ ನೀಡಲಾಗುವುದು. ಈ ರೀತಿ ಬೆಳೆ ನಷ್ಟ ಸಂಭವಿಸಿದರೆ ವಿಮೆ ಮಾಡಿಸಿದ ರೈತರು 48 ಗಂಟೆಗಳೊಳಗಾಗಿ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ಅಗ್ರಿಕಲ್ಚರ್ ಇನ್ಷೂರೆನ್ಸ್ ಕಂಪೆನಿ ಆಫ್ ಇಂಡಿಯಾ, ಬೆಂಗಳೂರು ಈ ಕಚೇರಿಗೆ (080 25322860) ವಿವರಗಳನ್ನು ಸಲ್ಲಿಸತಕ್ಕದ್ದು. ಹೆಚ್ಚಿನ ರೈತರು ಈ ಯೋಜನೆಯ ಪ್ರಯೋಜನ ಪಡೆಯುವಂತೆ ಜಂಟಿ ನಿರ್ದೇಶಕರಾದ ಪದ್ಮಯ್ಯ ನಾಯಕ್ ಅವರು ಕೋರಿರುತ್ತಾರೆ.