Monday, October 3, 2011

ಕೆಎಸ್ಆರ್ ಟಿಸಿ ಬಳಿ ಮಾರಾಟ ಮಳಿಗೆ: ಯೋಗೀಶ್ ಭಟ್

ಮಂಗಳೂರು,ಅಕ್ಟೋಬರ್.03: ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಹಯೋಗದಲ್ಲಿ ಉದ್ಯೋಗಿನಿ ಯೋಜನೆಯ ಫಲಾನುಭವಿಗಳು, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಸದಸ್ಯರು ಹಾಗೂ ಮಹಿಳಾ ಉದ್ಯಮಿಗಳು ತಯಾರಿಸಿದ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ ಮೇಳದ ಉದ್ಘಾಟನೆಯನ್ನು ಇಂದು ವಿಧಾನಸಭೆ ಉಪ ಸಭಾಧ್ಯಕ್ಷರಾದ ಎನ್. ಯೋಗೀಶ್ ಭಟ್ ಉದ್ಘಾಟಿಸಿದರು. ಮಹಿಳೆಯರು ಆರ್ಥಿಕವಾಗಿ ಸ್ವಾಲಂಬಿ ಗಳಾಗಲು ನಿಗಮ ಸ್ವ ಉದ್ಯೋಗ ಯೋಜನೆ ಗಳಿಗೆ ಪ್ರೋತ್ಸಾಹ ನೀಡುತ್ತಿದೆ ಎಂದರು. ಮಹಿಳಾ ಉದ್ಯಮಿ ಗಳು ತಯಾ ರಿಸುವ ಉತ್ಪನ್ನ ಗಳಿಗೆ ಮಾರುಕಟ್ಟೆ ಒದಗಿಸುವ ನಿಟ್ಟಿನಲ್ಲಿ ನಿಗಮದ ವತಿಯಿಂದ 65 ಲಕ್ಷ ವೆಚ್ಚದಲ್ಲಿ ನಗರದ ಬಿಜೈಕೆಎಸ್ಆರ್ ಟಿಸಿ ಬಳಿ ಮಾರಾಟ ಮಳಿಗೆಯನ್ನು ಆರಂಭಿಸುವುದಾಗಿ ತಿಳಿಸಿದರು. ಕಮಲಾ ಭಟ್, ದ.ಕ. ಜಿಲ್ಲಾ ಪಂಚಾಯತ್ ನ ಉಪಾಧ್ಯಕ್ಷರಾದ ಧನಲಕ್ಷ್ಮಿ ಜನಾರ್ಧನ, ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಜನಾರ್ದನ ಗೌಡ, ಮನಪಾ ಉಪ ಮೇಯರ್ ಗೀತಾ ಎನ್. ನಾಯಕ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಶಕುಂತಳಾ ಮೊದಲಾದವರು ಉಪಸ್ಥಿತರಿದ್ದರು.