Tuesday, December 27, 2011

ರಾಷ್ಟ್ರೀಯ ಯುವಜನೋತ್ಸವ;ಎಲ್ಲಾ ಅಧಿಕಾರಿಗಳು ಕೇಂದ್ರ ಸ್ಥಾನದಲ್ಲಿರಲು ಸೂಚನೆ

ಮಂಗಳೂರು,ಡಿಸೆಂಬರ್.27:ಪ್ರಥಮ ಬಾರಿಗೆ ಮಂಗಳೂರಿನಲ್ಲಿ 2012 ನೇ ಜನವರಿ 12 ರಿಂದ 16 ರ ವರೆಗೆ ನಡೆಯುತ್ತಿರುವ ರಾಷ್ಟ್ರೀಯ ಯುವಜನೋತ್ಸವ ಯಶಸ್ಸಿಗಾಗಿ ಎಲ್ಲಾ ಅಧಿಕಾರಿಗಳು ಇಂದಿನಿಂದ ಜನವರಿ 17 ರ ವರೆಗೆ ರಜೆ ಹಾಕದೇ ಕೇಂದ್ರಸ್ಥಾನದಲ್ಲಿಯೇ ಇರಬೇಕೆಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿ ಡಾ.ಎನ್.ಎಸ್.ಚನ್ನಪ್ಪ ಗೌಡ ಆದೇಶ ಹೊರಡಿಸಿದ್ದಾರೆ.