Saturday, December 31, 2011

ಯುವಜನೋತ್ಸವ: ಕಟ್ಟಡಗಳ ದೀಪಾಲಂಕಾರ

ಮಂಗಳೂರು,ಡಿಸೆಂಬರ್.31:ದಕ್ಷಿಣಕನ್ನಡ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ್,ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆ, ನೆಹರು ಯುವ ಕೇಂದ್ರ,ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ 17 ನೇ ರಾಷ್ಟ್ರೀಯ ಯುವಜನೋತ್ಸವವನ್ನು ದಿನಾಂಕ 12-1-12 ರಿಂದ 16-1-12 ರ ವರೆಗೆ ಮಂಗಳೂರಿನಲ್ಲಿ ಏರ್ಪಡಿಸಲಾಗಿದೆ. ಈ ಸಂದರ್ಭದಲ್ಲಿ ಮಂಗಳೂರು ನಗರದಲ್ಲಿ ಅತೀ ವಿಜೃಂಭಣೆಯಿಂದ ಆಚರಿಸುವ ಸಲುವಾಗಿ ನಗರವನ್ನು ಸೌಂದರೀಕರಣಗೊಳಿಸಲು ತಮ್ಮ ಕಟ್ಟಡಗಳನ್ನು ದೀಪಾಲಂಕಾರದಿಂದ ಅಲಂಕರಿಸಲು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.