Saturday, January 7, 2012

ರಾಷ್ಟ್ರೀಯ ಯವಜನೋತ್ಸವ ಉದ್ಘಾಟನೆಗೆ ಮುಖ್ಯಮಂತ್ರಿ

ಮಂಗಳೂರು,ಜನವರಿ.07: ಮಂಗಳೂರು ನಗರದಲ್ಲಿ ಜ.12 ರಿಂದ 16 ರವರೆಗೆ ಜರುಗಲಿರುವ 17ನೇ ರಾಷ್ಟ್ರೀಯ ಯುವಜನೋತ್ಸವವನ್ನು ಜ.12ರ ಸಂಜೆ 5.30ಕ್ಕೆ ಮಂಗಳಾ ಕ್ರೀಡಾಂಗಣದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಉದ್ಘಾಟಿಸಲಿದ್ದಾರೆ.ಉದ್ಘಾಟನಾ ಸಮಾರಂಭ ಅದ್ಧೂರಿಯಾಗಿ ನಡೆಯಲಿದ್ದು,ಸಾಂಸ್ಕೃತಿಕ ಕಾರ್ಯಕ್ರಮಗಳು, ಲೇಸರ್ ಮತ್ತು ಸುಡುಮದ್ದು ಪ್ರದರ್ಶನ ಸಮಾರಂಭದ ಮೆರುಗನ್ನು ಇಮ್ಮಡಿಗೊಳಿಸಲಿವೆ.ಭಾರತ ಸರಕಾರದ ಕಾರ್ಪೋ ರೇಟ್ ವ್ಯವ ಹಾರಗಳ ಸಚಿವ ರಾದ ಎಂ.ವೀರಪ್ಪ ಮೊಯಿಲಿ ಮುಖ್ಯ ಅತಿಥಿ ಯಾಗಿ ಪಾಲ್ಗೊ ಳ್ಳುವರು. ಕೇಂದ್ರದ ಯುವಜನ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ಅಜಯ್ ಮಾಕನ್ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವಿರೇಂದ್ರ ಹೆಗ್ಗಡೆ ಗೌರವ ಅತಿಥಿಯಾಗಿ,ಕರ್ನಾಟಕ ವಿಧಾನ ಸಭೆಯ ಉಪಸಭಾಪತಿ ಎನ್.ಯೋಗೀಶ್ ಭಟ್,ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ.ಪಾಲೆಮಾರ್, ಉಡುಪಿ ಜಿಲ್ಲಾ ಉಸ್ತುವಾರಿ ಸಚಿವ ಡಾ| ವಿ.ಎಸ್.ಆಚಾರ್ಯ, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್,ಸಂಸದ ನಳಿನ್ ಕುಮಾರ್ ಕಟೀಲ್,ಶಾಸಕರಾದ ಬಿ.ರಮಾನಾಥ ರೈ, ಅಭಯಚಂದ್ರ, ವಸಂತ ಬಂಗೇರ, ಎಸ್.ಅಂಗಾರ, ಮಲ್ಲಿಕಾ ಪ್ರಸಾದ್, ಯು.ಟಿ.ಖಾದರ್, ವಿಧಾನ ಪರಿಷತ್ ಸದಸ್ಯ ಪ್ರತಾಪಚಂದ್ರ ಶೆಟ್ಟಿ ,ಕೋಟ ಶ್ರೀನಿವಾಸ ಪೂಜಾರಿ, ಕ್ಯಾ.ಗಣೇಶ ಕಾರ್ಣಿಕ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ.ನಾಗರಾಜ ಶೆಟ್ಟಿ,ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಶೈಲಜಾ ಭಟ್, ತಾಲೂಕ್ ಪಂಚಾಯತ್ ಅಧ್ಯಕ್ಷೆ,ಪಾಲಿಕೆಯ ಮೇಯರ್,ಕರ್ನಾಟಕದ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷ ಗಿರೀಶ್ ಪಟೇಲ್, ಅರ್ಜುನ ಪ್ರಶಸ್ತಿ ವಿಜೇತ ಕ್ರೀಡಾ ತಾರೆಯರಾದ ಅಶ್ವಿನಿ ನಾಚಪ್ಪ, ವಂದನಾ ರಾವ್ ಸಹಿತ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿರುವರು.
ಜ.16.ಸಮಾರೋಪ ಸಮಾರಂಭ:ಜ.16ರ ಸಂಜೆ 4.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು, ಕರ್ನಾಟಕದ ಗೌರವ್ವನಿತ ರಾಜ್ಯಪಾಲರಾದ ಹಂಸರಾಜ ಭಾರದ್ವಾಜ್ ಅಧ್ಯಕ್ಷತೆ ವಹಿಸಲಿರುವರು.ಮುಖ್ಯಮಂತ್ರಿ ಸದಾನಂದ ಗೌಡ ಬಹುಮಾನ ವಿತರಿಸುವರು. ಕೇಂದ್ರ ಯುವ ವ್ಯವಹಾರ ಮತ್ತು ಕ್ರೀಡಾ ರಾಜ್ಯ ಸಚಿವ ಅಜಯ್ ಮಾಕನ್ ಮುಖ್ಯ ಅತಿಥಿಯಾಗಿ ಭಾಗವಹಿಸಿ ಸಮಾರೋಪ ಭಾಷಣ ಮಾಡುವರು. ವಿಧಾನ ಪರಿಷತ್ ಸಭಾಪತಿ ಡಿ.ಎಚ್.ಶಂಕರ ಮೂರ್ತಿ ಗೌರವ ಅತಿಥಿಯಾಗಿ ಪಾಲ್ಗೊಳ್ಳುವರು.
ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೃಷ್ಣ ಜೆ.ಪಾಲೆಮಾರ್, ವಿಧಾನ ಸಭೆಯ ಉಪ ಸಭಾಪತಿ ಎನ್.ಯೋಗೀಶ್ ಭಟ್, ರಾಜ್ಯಸಭಾ ಸದಸ್ಯ ಆಸ್ಕರ್ ಫೆರ್ನಾಂಡಿಸ್,ಸಂಸದ ನಳಿನ್ ಕುಮಾರ್ ಕಟೀಲ್,ಅರ್ಜುನ ಪ್ರಶಸ್ತಿ ವಿಜೇತ ಎಂ.ಪಿ.ಗಣೇಶ್, ಧ್ಯಾನ್ಚಂದ್ ಪ್ರಶಸ್ತಿ ವಿಜೇತ ಉದಯ ಕೆ.ಪ್ರಭು ಮತ್ತು ಅಂತಾರಾಷ್ಟ್ರೀಯ ಕ್ರೀಡಾಪಟು ಅರ್ಜುನ್ ದೇವಯ್ಯ ಸಮಾರೋಪ ಸಮಾರಂಭದಲ್ಲಿ ಉಪಸ್ಥಿತರಿರುವರು.