Wednesday, January 4, 2012

ದ.ಕ.ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ

ಮುಖ್ಯಮಂತ್ರಿ ಡಿ.ವಿ.ಸದಾನಂದ ಗೌಡ ಅವರು ಬುಧವಾರ ದ.ಕ.ಜಿಲ್ಲೆಗೆ ಭೇಟಿ ನೀಡಿ ದಿನಪೂರ್ತಿ ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡರು. ಬೆಂಗಳೂರಿನಿಂದ ಮಂಗಳೂರಿಗೆ ವಿಮಾನದ ಮೂಲಕ ಆಗಮಿಸಿದ ಮುಖ್ಯಮಂತ್ರಿಗಳು ಸರ್ಕ್ಯೂಟ್ ಹೌಸ್ ನಲ್ಲಿ ನಡೆದ 17ನೇ ರಾಷ್ಟ್ರೀಯ ಯುವಜನೋತ್ಸವದ ಸಭೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆ ನೀಡಿದರು. ಮಂಗಳೂರಿನ ಟಿ.ವಿ.ರಮಣ ಪೈ ಸಭಾಂಗಣದಲ್ಲಿ ನಡೆದ ಕರಾವಳಿ ವ್ಯಾಪಾರ ಅಭಿವೃದ್ಧಿ ಶೃಂಗ ಸಭೆಯ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಂಡ ಮುಖ್ಯಮಂತ್ರಿಗಳು, ಕಸ್ತೂರ್ಬಾ ಮೆಡಿಕಲ್ ಕಾಲೇಜು ಆವರಣದಲ್ಲಿ ನೂತನವಾಗಿ ಅಳವಡಿಸಿರುವ ವಿಕಿರಣ ಚಿಕಿತ್ಸಾ ಯಂತ್ರ ಉದ್ಘಾಟಿಸಿ ಗುರುಪುರ ಶ್ರೀ ರಾಮಾಂಜನೇಯ ವಜ್ರದೇಹೀ ಮಠದ ಆಶ್ರಯದಲ್ಲಿ ಆಯೋಜಿಸಿರುವ ಧಾರ್ಮಿಕ ಕಾರ್ಯಕ್ರಮ ಹಾಗೂ ಸಮುದಾಯ ಭವನ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಪಾಲ್ಗೊಂಡರು.