Saturday, May 5, 2012

ಸೊಳ್ಳೆ ಉತ್ಪತ್ತಿಯಾಗದಂತೆ ಜಾಗ್ರತೆ ವಹಿಸಲು ಮನವಿ

ಮಂಗಳೂರು, ಮೇ.0 5: ನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಅಂಗಡಿಗಳಲ್ಲಿ ,ಗೂಡಂಗಡಿಗಳಲ್ಲಿ ಬಸ್ ನಿಲ್ದಾಣ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಎಳನೀರು ವ್ಯಾಪಾರ ಮಾಡುವವರು ಕಡ್ಡಾಯವಾಗಿ ಗಿರಾಕಿಗಳಿಗೆ ನೀಡಿದ ಎಳನೀರಿನ ಚಿಪ್ಪುಗಳನ್ನು ಗೋಣಿಚೀಲಗಳಲ್ಲಿ ತುಂಬಿಸಿಡತಕ್ಕದ್ದು. ಅದು ತುಂಬಿದಂತೆಯೇ ತಮ್ಮ ಸ್ವಂತ ಖರ್ಚಿನಲ್ಲಿ ಮನೆಯ ಆವರಣಕ್ಕೆ/ ಸಾರ್ವಜನಿಕರಿಗೆ ತೊಂದರೆಯಾಗದಂತೆ ಸಾಗಿಸಿ ಮಳೆನೀರು ಅವುಗಳಲ್ಲಿ ಸೇರದಂತೆ ಸೂಕ್ತ ವ್ಯವಸ್ಥೆ ಮಾಡತಕ್ಕದ್ದು. ಅಪಾರ್ಟ್ ಮೆಂಟ್, ನಿರ್ಮಾಣ ಹಂತದ ಕಟ್ಟಡ ಮಾಲೀಕರು ಯಾವುದೇ ರೀತಿಯ ನೀರು 7 ದಿನಕ್ಕಿಂತ ಹೆಚ್ಚು ದಿನಗಳ ಕಾಲ ನಿಲ್ಲದಂತೆ ಮತ್ತು ಸೊಳ್ಳೆಗಳ ಉತ್ಪತ್ತಿಯಾಗದಂತೆ ನೋಡಿಕೊಳ್ಳತಕ್ಕದ್ದು. ಇದಕ್ಕೆ ತಪ್ಪಿದಲ್ಲಿ ತನಿಖಾ ಸಂದರ್ಭದಲ್ಲಿ ನಗರಪಾಲಿಕೆ ಅಧಿಕಾರಿಗಳು ಬಂದಲ್ಲಿ ಕಾನೂನಿನಂತೆ ರೂ.1000/- ದಂಡ ವಿಧಿಸಲಾಗುವುದೆಂದು ನಗರಪಾಲಿಕೆ ಆರೋಗ್ಯಾಧಿಕಾರಿಗಳು ತಿಳಿಸಿರುತ್ತಾರೆ.