ಮಂಗಳೂರು,ಜೂನ್.04 : ತಿಳುವಳಿಕೆಯಿಂದ ಭಯಮುಕ್ತ ವಾತಾವರಣ ನಿರ್ಮಾಣ ಸಾಧ್ಯ; ಕಾನೂನಿನ ಬಗ್ಗೆ ತಿಳುವಳಿಕೆಯಿಲ್ಲದಿದ್ದರೆ ಸ್ವಯಂ ರಕ್ಷಣೆ ಸಾಧ್ಯವಿಲ್ಲ ಎಂದು ನ್ಯಾಯವಾದಿಗಳಾದ ಶ್ರೀಮತಿ ಗೌರಿ ಕೆ ಎಸ್ ಅವರ ಹೇಳಿದರು.
ಜೀವನದಲ್ಲಿ ಸಂಕಷ್ಟಗಳು ಎದುರಾದಾಗ ಕಾನೂನು ನೆರವು ಪಡೆದುಕೊಳ್ಳುವ ಬಗ್ಗೆ, ಬಾಲ್ಯ ವಿವಾಹದಿಂದಾಗುವ ತೊಂದರೆಗಳ ಬಗ್ಗೆ, ಹೆಣ್ಣು ಮಕ್ಕಳಿಗೆ ಶಿಕ್ಷಣ ನೀಡುವ ಅಗತ್ಯದ ಬಗ್ಗೆ ಅವರು ವಿವರಿಸಿದರು.
ಕಾರ್ಯಕ್ರಮವನ್ನು ವಾರ್ತಾಧಿಕಾರಿ ರೋಹಿಣಿ ಉದ್ಘಾಟಿಸಿದರು. ಗ್ರಾಮಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಯಶೋದಾ ಅಧ್ಯಕ್ಷತೆ ವಹಿಸಿದ್ದರು. ಗ್ರಾಮಪಂಚಾಯತ್ ಸದಸ್ಯ ಸುನಿಲ್ ಉಪಸ್ಥಿತರಿದ್ದರು. ಸಹಾಯಕ ಶಿಶು ಅಭಿವೃದ್ಧಿ ಅಧಿಕಾರಿಗಳಾದ ಶ್ರೀಮತಿ ಶೋಭ ಮತ್ತು ಮೆಹರುನ್ನಿಸಾ ವೇದಿಕೆಯಲ್ಲಿದ್ದರು. ಭಾರತಿ ಕಾರ್ಯಕ್ರಮ ನಿರೂಪಿಸಿದರು.