Thursday, June 21, 2012

'ಸಕಾಲ' ಬೀದಿ ನಾಟಕಕ್ಕೆ ಚಾಲನೆ

ಮಂಗಳೂರು, ಜೂನ್ 21: ಜನರಲ್ಲಿ ಸಕಾಲ ಯೋಜನೆ ಕುರಿತಂತೆ ಜಾಗೃತಿ ಮೂಡಿಸುವ ಸಲುವಾಗಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ `` ಸಂಸಾರ '' ನಾಟಕ ತಂಡದ ಮೂಲಕ ಜಿಲ್ಲೆಯ ಆಯ್ದ ಗ್ರಾಮಗಳಲ್ಲಿ ದಿನಾಂಕ 21-6-12 ರಿಂದ ಬೀದಿ ನಾಟಕ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ಈ ಸಂಬಂಧ ಇಂದು ಗ್ರಾಮದ ಡಾ.ಅಂಬೇಡ್ಕರ್ ಭವನದಲ್ಲಿ ಸಕಾಲ ಬೀದಿ ನಾಟಕ ಕಾರ್ಯಕ್ರಮಕ್ಕೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಡಾ.ಕೆ.ಎನ್.ವಿಜಯಪ್ರಕಾಶ್ ರವರು ಚಾಲನೆ ನೀಡಿದರು.