Saturday, July 28, 2012

ರಸ್ತೆ ನಿಯಮ ಪಾಲಿಸದ ವಾಹನಗಳನ್ನು ಮುಟ್ಟುಗೋಲು ಹಾಕಿ: ಜಿಲ್ಲಾಧಿಕಾರಿ

ಮಂಗಳೂರು,ಜುಲೈ.28 : ರಾಷ್ಟ್ರೀಯ ಹೆದ್ದಾರಿ 66 ಬದಿಯಲ್ಲಿ ಅನಧಿಕೃತವಾಗಿ ನಿಲುಗಡೆ ಗೊಳಿಸಿ ಸುಗಮ ರಸ್ತೆ ಸಂಚಾರಕ್ಕೆ ಅಡಚಣೆಯೊಡ್ಡುವ ಟ್ರಕ್ಕುಗಳನ್ನು, ಬುಲೆಟ್ ಟ್ಯಾಂಕರ್ ಗಳನ್ನು ಮುಟ್ಟುಗೋಲು ಹಾಕಿ ಎಂದು ಜಿಲ್ಲಾಧಿಕಾರಿಗಳು ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಲಾದ ರಸ್ತೆ ಸುರಕ್ಷತಾ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದ ಅವರು, ಪ್ರಯಾಣಿಕರು, ಚಾಲಕರು, ಕಾನೂನು ಪಾಲಕರು ತಮ್ಮ ಕರ್ತವ್ಯ ಮತ್ತು ಹಕ್ಕುಗಳನ್ನು ಪಾಲಿಸುವುದರಿಂದ ಎಲ್ಲರಿಗೂ ಅನುಕೂಲ. ಇಲ್ಲದಿದ್ದರೆ ಕಠಿಣ ಕಾನೂನು ಮತ್ತು ಶಿಕ್ಷೆಗಳ ಮೂಲಕವೇ ನಿಯಮ ಪಾಲನೆ ಮಾಡಬೇಕಾಗುತ್ತದೆ ಎಂದರು.
ಪ್ರಯಾಣಿಕರು ಎಲ್ಲೆಂದರಲ್ಲಿ ಕೈತೋರಿಸುವುದು, ಇವರು ಕೈತೋರಿಸಿದೆಡೆಯೆಲ್ಲ ಚಾಲಕರು ಬಸ್ ನಿಲ್ಲಿಸುವುದರಿಂದ ಆಗುವ ಅನಾಹುತಗಳ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಸುಗಮ ಸಂಚಾರಕ್ಕೆ ರಸ್ತೆ ನಿಯಮ ಪಾಲಿಸಿ ಎಂದ ಜಿಲ್ಲಾಧಿಕಾರಿಗಳು, ರಸ್ತೆ ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ಮಾಹಿತಿ ಫಲಕ ಹಾಗೂ ಮಾರ್ಗದರ್ಶನ ಫಲಕಗಳನ್ನು ಕಡ್ಡಾಯವಾಗಿ ಹಾಕಬೇಕೆಂದು ಎಂದು ಕಾಮಗಾರಿ ನಡೆಸುವ ಸಂಸ್ಥೆಗಳಿಗೆ ಸೂಚಿಸಿದರು.
ಪಾಣೆ ಮಂಗಳೂರು ಹಳೆ ಸೇತುವೆಯಲ್ಲಿ ಬಸ್ಸು ಸಂಚಾರ ನಿರ್ಬಂಧಿಸಲಾಗಿದ್ದು, ಈ ಬಗ್ಗೆ ಯವುದೇ ಗೊಂದಲವಿಲ್ಲ. ಇಲ್ಲಿ ಅನಾಹುತ ಸಂಭವಿಸಿದರೆ ಬಸ್ ಮಾಲೀಕರೆ ಹೊಣೆ ಎಂದೂ ಜಿಲ್ಲಾಧಿಕಾರಿಗಳು ನುಡಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಹೆಚ್ಚಿನ ರಸ್ತೆಗಳಲ್ಲಿ ಪೊಲೀಸ್ ಇಲಾಖೆ ಸೂಚಿಸಿದ ಸ್ಥಳಗಳಲ್ಲಿ ಸ್ಪೀಡ್ ಬ್ರೇಕರ್ ಗಳನ್ನು ವೈಜ್ಞಾನಿಕವಾಗಿ ಅಳವಡಿಸಲಾಗಿದೆ. ಇನ್ನೂ ಅಗತ್ಯವಿದ್ದಲ್ಲಿ ನಿರ್ಮಿಸಲಾಗುವುದು ಎಂಬ ಭರವಸೆ ನೀಡಿದ ಜಿಲ್ಲಾಧಿಕಾರಿಗಳು, ಆಟೋ ರಿಕ್ಷಾ ತಂಗುದಾಣ ಮತ್ತು ಬಸ್ ಬೇ ಗಳನ್ನು ನಿರ್ಮಿಸುವ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು.
ಪಡೀಲ್ ಬಳಿ ಇರುವ ರೈಲ್ವೇ ಕ್ರಾಸಿಂಗ್ನಲ್ಲಿ ಓವರ್ ಬ್ರಿಡ್ಜ್ ನಿರ್ಮಿಸುವ ಕುರಿತು ಕಾಮಗಾರಿಯ ಶೇ. 50 ವೆಚ್ಚವನ್ನು ರಾಜ್ಯ ಸಕರ್ಾರದಿಂದ ಭರಿಸಲು ಸಕರ್ಾರದ ಅನುಮೋದನೆ ದೊರಕಿದ್ದು, ಶಿಘ್ರದಲ್ಲೇ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ರಸ್ತೆ ಅಗಲೀಕರಣ ಮತ್ತು ಕಾಂಕ್ರೀಟೀಕರಣಗಳ ಸಮಸ್ಯೆಯ ಬಗ್ಗೆ ಸಾಮಾಜಿಕ ಕಾರ್ಯಕರ್ತ ಹನುಮಂತ ಕಾಮತ್ ಅವರು ಜಿಲ್ಲಾಧಿಕಾರಿಗಳ ಗಮನಸೆಳೆದರು. ಕಪಿತಾನಿಯೋ ವಿದ್ಯಾಸಂಸ್ಥೆಯ ಮಕ್ಕಳು ರಸ್ತೆ ದಾಟಲು ಅನುಕೂಲವಾಗುವಂತೆ ಝೀಬ್ರಾ ಕ್ರಾಸಿಂಗ್ ಹಾಕಿಸಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ನಗರದಲ್ಲಿ ಖಾಸಗಿ ಬಸ್ಸುಗಳು ನಿಯಮಪಾಲಿಸದಿರುವುದನ್ನು ಗಂಭೀರವಾಗಿ ಪರಿಗಣಿಸಿದ ಜಿಲ್ಲಾಧಿಕಾರಿಗಳು, ಇತ್ತೀಚೆಗೆ ಇವರ ಜೊತೆಗೆ ಕನರ್ಾಟಕ ರಸ್ತೆ ಸಾರಿಗೆ ಸಂಸ್ಥೆಯ ಬಸ್ಸುಗಳ ಚಾಲಕರು ನಿಗದಿತ ಸ್ಥಳಗಳಲ್ಲಿ ಬಸ್ ನಿಲ್ಲಿಸದೆ ಅಡ್ಡಾದಿಡ್ಡಿ ನಿಲ್ಲಿಸಿ ರಸ್ತೆ ಸಂಚಾರಕ್ಕೆ ತೊಡಕುಂಟು ಮಾಡುವ ಬಗ್ಗೆ ತಾನೆ ದೂರು ನೀಡಿರುವುದಾಗಿ ಹೇಳಿದರಲ್ಲದೆ, ಇಂತಹ ಸಂದರ್ಭಗಳಲ್ಲಿ ಸಂಚಾರಿ ಪೊಲೀಸರು ನಿದರ್ಾಕ್ಷಿಣ್ಯವಾಗಿ ಚಾಲಕರ ಪರವಾನಿಗೆಯನ್ನು ಅಮಾನತ್ತಿನಲ್ಲಿಡಿ ಎಂದರು. ಪಂಪ್ವೆಲ್ ಬಲ್ಮಠಗಳಲ್ಲಿ ತಾವೆ ಇಂತಹ ಪ್ರಕರಣ ನೋಡಿರುವುದಾಗಿಯೂ ಹೇಳಿದರು.
ಸಭೆಯಲ್ಲಿ ಉಪಸ್ಥಿತರಿದ್ದ ಕೆ.ಎಸ್.ಆರ್.ಟಿ.ಸಿ ಡಿಪ್ಪೋ ಮ್ಯಾನೇಜರ್ ಅವರಿಗೆ ಸಂಸ್ಥೆಯ ಚಾಲಕರಿಗೆ ತರಬೇತಿ ನೀಡಲು ಸೂಚಿಸಿದರು.
ರಾಷ್ಟ್ರೀಕೃತ ಹೆದ್ದಾರಿಗಳಲ್ಲಿ ನಿರ್ಮಿಸಲಾಗಿರುವ ಅನಧಿಕೃತ ಬಸ್ಸು ತಂಗುದಾಣಗಳನ್ನು ತೆರವುಗೊಳಿಸಲಾಗುವುದು. ಕದ್ರಿ, ಕೆ ಪಿ ಟಿ ಬಳಿ ಮತ್ತು ನಂತೂರು ಬಿಕರ್ನಕಟ್ಟೆ ಕ್ರಾಸ್ ರೋಡ್ ನಲ್ಲಿ ಹೊಸದಾಗಿ ಟ್ರಾಫಿಕ್ ಸಿಗ್ನಲ್ ಲೈಟ್ ಅಳವಡಿಸುವುದು ಹಾಗೂ ನಂತೂರು ಜಂಕ್ಷನ್ ನಲ್ಲಿನ ರಸ್ತೆ ಗುಂಡಿಯನ್ನು ಒಂದು ವಾರದೊಳಗೆ ಮುಚ್ಚಲು ಸೂಚನೆ ನೀಡಿದರು. ಸಭೆಯಲ್ಲಿ ಮೂಡಾ ಕಮಿಷನರ್ ಅಜಿತ್ ಹೆಗಡೆ, ಪಾಲಿಕೆ ಇಂಜಿನಿಯರ್ ರಾಜಶೇಖರ್,ಪೋಲಿಸ್ ಅಧಿಕಾರಿಗಳು, ಬಸ್ ಮಾಲಿಕರು, ಕೆನರಾ ಚೇಂಬರ್ಸ್ ಪ್ರತಿನಿಧಿಗಳು ಉಪಸ್ಥಿತರಿದ್ದರು.