Monday, August 20, 2012

ಮಂಗಳೂರಿನಲ್ಲಿ ಡಿ.ದೇವರಾಜ ಅರಸರ 97ನೇ ಜನ್ಮದಿನಾಚರಣೆ

ಮಂಗಳೂರು, ಆಗಸ್ಟ್.20: ಹಿಂದುಳಿದ ವರ್ಗಗಳ ನೇತಾರ ಪರಿವರ್ತನೆಯ ಹರಿಕಾರ ಡಿ.ದೇವರಾಜ ಅರಸರ 97ನೇ ಜನ್ಮದಿನಾಚರಣೆಯನ್ನು ಇಂದು ಮಂಗಳೂರಿನಲ್ಲಿ ಆಚರಿಸಲಾಯಿತು. ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಸಭಾ ಉಪ ಸಭಾಪತಿ ಎನ್.ಯೋಗಿಶ್ ಭಟ್, ಜಿಲ್ಲಾಪಂಚಾಯತ್ ಅಧ್ಯಕ್ಷೆ ಶ್ರೀಮತಿ ಕೆ.ಟಿ.ಶೈಲಜಾ ಭಟ್, ಶಾಸಕರಾದ ಯು.ಟಿ.ಖಾದರ್, ಜಿ.ಪಂ. ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಜನಾರ್ಧನ ಗೌಡ, ಜಿ.ಪಂ.ಸದಸ್ಯರಾದ ಮಮತ ಗಟ್ಟಿ,ಚನ್ನಪ್ಪ ಕೋಟ್ಯಾನ್, ಸಿಇಓ ಡಾ. ಕೆ.ಎನ್. ವಿಜಯ ಪ್ರಕಾಶ್,ಅಪರ ಜಿಲ್ಲಾಧಿಕಾರಿ ಕೆ.ದಯಾನಂದ ಅವರು ಪಾಲ್ಗೊಂಡಿದ್ದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾಧಿಕಾರಿ ಅರುಣ್ ಫುರ್ಟಡೋ ಅವರು ಅತಿಥಿಗಳನ್ನು ಸ್ವಾಗತಿಸಿದರು. ಇದೇ ಸಂದರ್ಭದಲ್ಲಿ ವಸತಿ ನಿಲಯಗಳಲ್ಲಿ ವಾಸ್ತವ್ಯ ಹೂಡಿ ಕಲಿತು ಶೇಕಡ 100 ರಷ್ಟು ಅಂಕಗಳನ್ನು ಗಳಿಸಿದ ವಿದ್ಯಾರ್ಥಿಗಳಿಗೆ ಸನ್ಮಾನ, ಹಾಗೂ ಪ್ರಬಂಧ ಸ್ಪರ್ಧೆಮತ್ತು ಭಾಷಣ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ಥಿಗಳನ್ನು ಅತಿಥಿಗಳು ಪ್ರದಾನ ಮಾಡಿದರು.