Friday, August 17, 2012

ಡಿಸೆಂಬರ್ ನಲ್ಲಿ ಕರಾವಳಿ ಉತ್ಸವ

ಮಂಗಳೂರು,ಆಗಸ್ಟ್.17:ಪ್ರತೀ ವರ್ಷದಂತೆ ವ್ಯವಸ್ಥಿತವಾಗಿ ಹಾಗೂ ಸಂಭ್ರಮದಿಂದ ಕರಾವಳಿ ಉತ್ಸವ ಆಚರಿಸಿ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಹೇಳಿದರು.
ಆಗಸ್ಟ್ 14ರಂದು ಜಿಲ್ಲಾ ಪಂಚಾಯತ್ ಮಿನಿಹಾಲ್ ನಲ್ಲಿ ಕರಾವಳಿ ಉತ್ಸವ ಸಂಬಂಧ ಆಯೋಜಿಸಿದ್ದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಉತ್ಸವದ ರೂಪು ರೇಷೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಜಿಲ್ಲಾ ಉತ್ಸವವನ್ನು ಅರ್ಥಪೂರ್ಣವಾಗಿ ಆಚರಿಸಿ ಎಂದು ಸಲಹೆ ಮಾಡಿದರು. ಸಭೆಯಲ್ಲಿ ಉಪಸಭಾಧ್ಯಕ್ಷರಾದ ಎನ್ ಯೋಗೀಶ್ ಭಟ್,ಜಿಲ್ಲಾಧಿಕಾರಿ ಡಾ ಎನ್ ಎಸ್ ಚನ್ನಪ್ಪ ಗೌಡ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಕೆ ಟಿ ಶೈಲಜಾ ಭಟ್, ಸಿಇಒ ಡಾ ಕೆ ಎನ್ ವಿಜಯಪ್ರಕಾಶ್, ಪಾಲಿಕೆ ಆಯುಕ್ತರಾದ ಡಾ ಹರೀಶ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ ಎ ದಯಾನಂದ ಅವರನ್ನೊಳಗೊಂಡಂತೆ ಹಿರಿಯ ಅಧಿಕಾರಿಗಳು ಪಾಲ್ಗೊಂಡಿದ್ದರು.