Saturday, August 25, 2012

ಎಂಡೋ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್: ಮುಖ್ಯಮಂತ್ರಿ ಜಗದೀಶ್ ಶೆಟ್ಟರ್

ಮಂಗಳೂರು, ಆ.25: ಎಂಡೋ ಸಲ್ಫಾನ್ ಸಂತ್ರಸ್ತರಿಗೆ ವಿಶೇಷ ಪ್ಯಾಕೇಜ್ನ ಮೂಲಕ ಪರಿಹಾರ ನೀಡುವ ಜೊತೆಗೆ ಈ ಸಮಸ್ಯೆಯನ್ನು ಶಾಶ್ವತವಾಗಿ ಬಗೆಹರಿಸಲು ರಾಜ್ಯಸರಕಾರ ಗಂಭೀರ ಚಿಂತನೆ ನಡೆಸಲಿದೆ ಎಂದು ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಇಂದು ಮಂಗಳೂರಿಗೆ ಆಗಮಿಸಿ ವಿವಿಧ ಕಾರ್ಯ ಕ್ರಮ ಗಳಲ್ಲಿ ಭಾಗ ವಹಿಸಿದ ಬಳಿಕ ಸುದ್ದಿ ಗೋಷ್ಠಿಯಲ್ಲಿ ಮಾತ ನಾಡಿದ ಅವರು, ಯಡಿಯೂರಪ್ಪನವರು ಮುಖ್ಯ ಮಂತ್ರಿಯಾಗಿದ್ದ ಸಂದರ್ಭ ಎಂಡೋ ಸಂತ್ರಸ್ತರಿಗೆ ಪರಿಹಾರ ನೀಡುವ ಕಾರ್ಯ ನಡೆದಿದೆ ಮತ್ತು ಎಂಡೋಸಲ್ಫಾನ್ ಬಳಕೆಯನ್ನು ನಿಷೇಧ ಮಾಡಲಾಗಿದೆ. ಪರಿಹಾರದ ಜೊತೆಗೆ ಶಾಶ್ವತವಾಗಿ ಈ ಸಮಸ್ಯೆಯನ್ನು ಬಗೆಹರಿಸುವ ನಿಟ್ಟಿನಲ್ಲಿ ರಾಷ್ಟ್ರಮಟ್ಟದಲ್ಲಿಚಿಂತನೆ ಆಗಬೇಕಾಗಿದೆ. ರಾಜ್ಯ ಸರಕಾರದಿಂದ ಈ ನಿಟ್ಟಿನಲಿ ಬೇಕಾದ ಅಗತ್ಯ ಕ್ರಮವನ್ನು ಶೀಘ್ರದಲ್ಲೇ ಕೈಗೊಳ್ಳಲಾಗುವುದು ಎಂದರು.
ಕುದುರೆಮುಖ ಸಂತ್ರಸ್ತರಿಗೆ ಪುನರ್ವಸತಿ ಬಗ್ಗೆ ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜನಪ್ರತಿನಿಧಿಗಳ ಜೊತೆ ಮಾತುಕತೆ ನಡೆಸಲಾಗಿದೆ. ಪುನರ್ವಸತಿ, ಪರಿಹಾರ ಮತ್ತು ಸ್ಥಳಾಂತರದ ಬಗ್ಗೆ ಸಮಗ್ರ ಚಿಂತನೆ ನಡೆಸಿ, ಸಂಬಂಧಪಟ್ಟ ದ.ಕ., ಚಿಕ್ಕಮಗಳೂರು ಮತ್ತು ಉಡುಪಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಜೊತೆ ಈ ಬಗ್ಗೆ ಶೀಘ್ರದಲ್ಲಿ ಪ್ರತ್ಯೇಕ ಸಭೆ ಕರೆದು ಪರಿಹಾರ ಕಂಡುಕೊಳ್ಳಲಾಗುವುದು ಎಂದು ಅವರು ಭರವಸೆ ನೀಡಿದರು.
ನವೀಕೃತ ಸಭಾಂಗಣ ಮಂಗಳೂರು ಅಭಿವೃದ್ಧಿಗೆ ಕಿರೀಟಪ್ರಾಯ ಎಂದು ಬಣ್ಣಿಸಿದ ಅವರು, ನಿರಂತರ ಕುಡಿಯುವ ನೀರಿನ ಯೋಜನೆ ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಜಾರಿಯಾದರೆ ನೀರಿನ ದರವೂ ಕಡಿಮೆಯಾಗಲಿದೆ ಎಂದವರು ಆಶಯ ವ್ಯಕ್ತಪಡಿಸಿದರು.
ಬರ ಪರಿಹಾರದ ಬಗ್ಗೆ ಕೇಂದ್ರ ತಂಡದ ಭೇಟಿಯ ಕುರಿತಂತೆ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಕಳೆದ ವಾರ ಕೇಂದ್ರ ಸರಕಾರದ ಸಚಿವರುಗಳಾದ ಶರದ್ ಪವಾರ್, ಜಯರಾಂ ರಮೇಶ್ ಬರಗಾಲ ಪರಿಸ್ಥಿತಿ ಬಗ್ಗೆ ಪರಿಶೀಲನಾ ಸಭೆ ನಡೆಸಿದಾಗ ದೀಘರ್ಾವಧಿ ಮತ್ತು ಅಲ್ಪಕಾಲಿಕ ಪರಿಹಾರ ಕ್ರಮಗಳ ಬಗ್ಗೆ ವರದಿ ನೀಡುವಂತೆ ಸೂಚಿಸಿದ್ದರು. ಅದರಂತೆ 7,000 ಕೋಟಿ ರೂ.ಗಳ ಅಲ್ಪಕಾಲಿಕ ಹಾಗೂ 4,400 ಕೋಟಿ ರೂ.ಗಳ ದೀರ್ಘವಧಿ ಯೋಜನೆ ಸೇರಿದಂತೆ ಒಟ್ಟು 11,400 ಕೋಟಿ ರೂ.ಗಳ ಪ್ಯಾಕೇಜ್ ಪರಿಹಾರ ನೀಡಲು ಕೇಂದ್ರವನ್ನು ಒತ್ತಾಯಿಸಲಾಗಿದೆ.
ಬರ ಪರಿಹಾರ ಮಾತ್ರವಲ್ಲ, ರೈತರಿಗೆ ನೆರವು ನೀಡುವ ನೀಟ್ಟಿನಲಿ ್ಲಕಳೆದ ಅಧಿವೇಶನದಲ್ಲಿ ದೃಢವಾದ ನಿಧರ್ಾರ ಕೈಗೊಳ್ಳಲಾಗಿದೆ. ಬಜೆಟ್ನಲ್ಲಿ 25,000 ಕೃಷಿ ಸಾಲ ಮನ್ನಾ ಮಾಡಲಾಗಿದೆ. ಇದುರಿಂದ 16,000 ಲಕ್ಷ ರೈತರಿಗೆ ಅನುಕೂಲವಾಗಿದೆ. ಇದರಿಂದ ರಾಜ್ಯ ಬಜೆಟ್ನ ಮೇಲೆ 3,600 ಕೋಟಿ ರೂ.ಗಳ ಭಾರ ಬೀಳಲಿದೆ. ಈ ಬಗ್ಗೆ ಈಗಾಗಲೇ ನಿರ್ಣಯವಾಗಿದ್ದು, ಸಾಲ ಮನ್ನಾ ಬಗ್ಗೆ ಒಂದೆರಡು ದಿನಗಳಲ್ಲಿ ಅಧಿಕೃತ ಸುತ್ತೋಲೆಯನ್ನು ಹೊರಡಿಸಲಾಗುವುದು ಎಂದರು.
ಕೇಂದ್ರ ಸರಕಾರಕ್ಕೆ ಬರಪರಿಹಾರಕ್ಕಾಗಿ 11,400 ಕೋಟಿ ರೂ.ಗಳ ಬೇಡಿಕೆಯಲ್ಲಿ ಈ ಸಾಲ ಮನ್ನಾ ಯೋಜನೆಗೂ ಕೇಂದ್ರದ ಸಹಕಾರ ನೀಡುವಂತೆ ಕೋರಲಾಗಿದೆ. ಜೊತೆಗೆ ಬಿತ್ತನೆ ಆಗಿರದ ಕಡೆಗಳಲ್ಲಿ ಪರಿಹಾರ ಹಾಗೂ ಬಿತ್ತನೆ ಆಗಿ ಬೆಳೆ ನಾಶ ಆಗಿರುವಲ್ಲಿಯೂ ಪರಿಹಾರಕ್ಕೆ ಕೇಂದ್ರವನ್ನು ಕೋರಲಾಗಿದೆ. ಕೇಂದ್ರ ಸರಕಾರ ಸಹಾಯ ಹಸ್ತ ನೀಡಬೇಕು ಎಂದು ಜಗದೀಶ್ ಶೆಟ್ಟರ್ ಹೇಳಿದರು. ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ, ವಿಧಾನ ಸಭಾ ಉಪ ಸಭಾಪತಿ ಎನ್. ಯೋಗಿಶ್ ಭಟ್, ನಗರಾಭಿವೃದ್ದಿ ಮತ್ತು ಕಾನೂನು ಸಚಿವ ಸುರೇಶ್ ಕುಮಾರ್ ಸುದ್ದಿಗೋಷ್ಟಿಯಲ್ಲಿ ಉಪಸ್ಥಿತರಿದ್ದರು.