Wednesday, September 12, 2012

ಪುತ್ತೂರಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಜಿಲ್ಲಾ ಉಸ್ತುವಾರಿ ಸಚಿವರಿಂದ ಚಾಲನೆ

ಮಂಗಳೂರು, ಸೆಪ್ಟೆಂಬರ್.12: ಪುತ್ತೂರು ತಾಲೂಕಿನ ವಿವಿಧ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಕಾರ್ಯಕ್ರಮ ನೆರವೇರಿಸಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಅವರು ತಾಲೂಕು ಅಭಿವೃದ್ಧಿಗೆ ಸರ್ಕಾರ ಹೆಚ್ಚು ಅನುದಾನ ನೀಡಿದೆ ಎಂದರು.
ಪುತ್ತೂರು ತಾಲೂಕಿನ ಮಿನಿ ವಿಧಾನಸೌಧ ಕಟ್ಟಡ ನಿರ್ಮಾಣ ಎರಡನೇ ಹಂತಕ್ಕೆ 450.00 ಲಕ್ಷ ರೂ, ಪುತ್ತೂರು ತಾಲೂಕಿನ ಹಂಟ್ಯಾರು ಬೆಟ್ಟಂಪಾಡಿ ರಸ್ತೆ ಅಗಲೀಕರಣ ಮತ್ತು ಡಾಮರೀಕರಣ ಕಾಮಗಾರಿಗೆ 185 ಲಕ್ಷ ರೂ., ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಪೆರ್ನಾಜೆ, ಸಜ್ಜಮೂಲೆ, ಅಲೆಪ್ಪಾಡಿ, ನೂಜಿಬೈಲು ರಸ್ತೆ ಅಭಿವೃದ್ದಿ ಕಾಮಗಾರಿಗೆ 60 ಲಕ್ಷ ರೂ., ಬಿಡುಗಡೆ ಮಾಡಲಾಗಿದ್ದು, ಸಚಿವರು ಶಂಕು ಸ್ಥಾಪನೆ ನೆರವೇರಿಸಿದರು.
ಪುತ್ತೂರು ತಾಲೂಕು ಬನ್ನೂರು ಗ್ರಾಮಪಂಚಾಯತ್ ನ ಕಟ್ಟಡ 15 ಲಕ್ಷ ರೂ., ಹಾಗೂ 20.75 ಲಕ್ಷ ರೂ. ಗಳ ಪುತ್ತೂರು ತಾಲೂಕಿನ ನೆಟ್ಟಣಿಗೆ ಮುಡ್ನೂರು ಗ್ರಾಮದ ಸರ್ಕಾರಿ ಪ್ರೌಢಶಾಲೆ ಕಟ್ಟಡವನ್ನು ಉದ್ಘಾಟಿಸಿದರು.