Thursday, September 13, 2012

ಸುಳ್ಯದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಿಂದ ಪ್ರಗತಿ ಪರಿಶೀಲನೆ

ಮಂಗಳೂರು,ಸೆಪ್ಟೆಂಬರ್.13 : ಸುಳ್ಯ ತಾಲೂಕು ಪಂಚಾಯತಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ ಟಿ ರವಿ ಅಧ್ಯಕ್ಷತೆಯಲ್ಲಿ ಕೆಡಿಪಿ ಸಭೆ ಜರುಗಿದ್ದು, ತಾಲೂಕಿನ ವಿವಿಧ ಇಲಾಖೆ ಪ್ರಗತಿ ಪರಿಶೀಲನೆ ನಡೆಸಲಾಯಿತು.
ತಾಲೂಕು ಮಟ್ಟದಲ್ಲಿ ಸರ್ವೇ ಇಲಾಖೆಯ ವಿರುದ್ಧ ಸಾರ್ವಜನಿಕರಿಂದ ದೂರುಗಳು ಬಂದಿದ್ದು, ಇಲಾಖಾಧಿಕಾರಿಗಳು ಸಮಸ್ಯೆ ಪರಿಹರಿಸಲು ತುರ್ತು ಗಮನಹರಿಸಬೇಕೆಂದು ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೊಲೀಸ್ ಇಲಾಖೆಯ ಕಾರ್ಯನಿರ್ವಹಣೆಯನ್ನು ಶ್ಲಾಘಿಸಿದ ಅವರು, ವಸತಿ ರಹಿತರಿಗೆ, ನಿವೇಶನ ರಹಿತರಿಗೆ ಹಾಗೂ ಸಮಾಜ ಸುರಕ್ಷಾ ಯೋಜನೆಗಳಡಿ ಅರ್ಹರಿಗೆ ಸೌಲಭ್ಯ ನೀಡುವಲ್ಲಿ ವ್ಯತ್ಯಯ ಉಂಟಾಗಬಾರದು ಎಂದು ಎಚ್ಚರಿಕೆ ನೀಡಿದರು.