Tuesday, September 18, 2012

ಮುಷ್ಕರ ಸಮಸ್ಯೆ ನಿರ್ವಹಣೆಗೆ ಕಂಟ್ರೋಲ್ ರೂಂ

ಮಂಗಳೂರು, ಸೆಪ್ಟೆಂಬರ್.18 : ಸೆಪ್ಟೆಂಬರ್ 19ರಂದು ಮಧ್ಯರಾತ್ರಿಯಿಂದ ಅಖಿಲ ಭಾರತ್ ಮೋಟಾರ್ ಟ್ರಾನ್ಸ್ ಪೋರ್ಟ್ ಕಾಂಗ್ರೆಸ್ ನಡೆಸಲು ಉದ್ದೇಶಿಸಿರುವ ಲಾರಿ ಮಷ್ಕರದ ಸಂದರ್ಭದಲ್ಲಿ ಸಾರ್ವಜನಿಕರಿಗೆ ದಿನಬಳಕೆ ವಸ್ತು ಪೂರೈಕೆಗಳಲ್ಲಿ ಅಡಚಣೆ ಆಗದಂತೆ ನೋಡಿಕೊಳ್ಳಲು ಜಿಲ್ಲಾಡಳಿತ ಹಾಗೂ ಜಿಲ್ಲಾ ಟಾಸ್ಕ್ ಫೋರ್ಸ್ ವತಿಯಿಂದ 18.9.12ರಂದು ಸಭೆ ನಡೆಸಿ ದಿನಬಳಕೆ ವಸ್ತುಗಳ ಸಾಗಾಣೆಯಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲು ವಿವಿಧ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿ ಮಲ್ಲಿಕಾರ್ಜುನ್ ಅವರು ತಿಳಿಸಿದ್ದಾರೆ.
ಲಾರಿ ಮುಷ್ಕರದ ಸಮಯದಲ್ಲಿ 24 ಗಂಟೆ ಕಾರ್ಯನಿರ್ವಹಿಸಲು ಕಂಟ್ರೋಲ್ ರೂಂ ಆರಂಭಿಸಲಾಗಿದೆ. ಸಾರ್ವಜನಿಕರು ಮುಷ್ಕರದಿಂದಾಗಿ ತೊಂದರೆಯಾದಲ್ಲಿ ಜಿಲ್ಲಾಧಿಕಾರಿಗಳ ಕಚೇರಿ 1077, ಪೊಲೀಸ್ ಇಲಾಖೆ 100 ಮತ್ತು ಪ್ರಾದೇಶಿಕ ಸಾರಿಗೆ ಅಧಿಕಾರಿ ಕಚೇರಿ 2220577 ಇಲ್ಲಿಗೆ ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.