Saturday, November 24, 2012

ಗೋಕುಲ್ ದಾಸ್ ಗೆ ವಾಲ್ಮೀಕಿ ಪ್ರಶಸ್ತಿ ಪ್ರದಾನ

ಮಂಗಳೂರು, ನವೆಂಬರ್.24: ಕೊರಗ ಸಮುದಾಯದ ಅಭಿವೃದ್ಧಿಗಾಗಿ ಶ್ರಮಿಸಿದ ಸಮುದಾಯದ ಹಿರಿಯ ಮುಖಂಡ ಗೋಕುಲ್ದಾಸ್ರಿಗೆ ರಾಜ್ಯ ವಾಲ್ಮೀಕಿ ಪ್ರಶಸ್ತಿಯನ್ನು ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಟಿ. ರವಿ ಪ್ರದಾನ ಮಾಡಿದರು.
ಬೆಂಗ ಳೂರಿ ನಲ್ಲಿ ಮುಖ್ಯ ಮಂತ್ರಿ ಯಿಂದ ಸ್ವೀಕ ರಿಸ ಬೇಕಿದ್ದ ಪ್ರಶಸ್ತಿ ಯನ್ನು ಗೋಕುಲ್ ದಾಸ ಅವರ ಅನಾ ರೋಗ್ಯದ ಹಿನ್ನೆಲೆಯಲ್ಲಿ ಇಂದು ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿಂದು ಪ್ರದಾನ ಮಾಡಲಾಯಿತು. ಈ ಸಂದರ್ಭ ವಿಧಾನ ಸಭಾ ಉಪಸಭಾಪತಿ ಎನ್. ಯೋಗೀಶ್ ಭಟ್, ಸಂಸದ ನಳಿನ್ ಕುಮಾರ್ ಕಟೀಲ್, ಜಿ.ಪಂ. ಅಧ್ಯಕ್ಷ ಕೊರಗಪ್ಪ ನಾಯ್ಕ, ಉಪಾಧ್ಯಕ್ಷ ರಿತೇಶ್ ಶೆಟ್ಟಿ, ಜಿಲ್ಲಾಧಿಕಾರಿ ಡಾ.ಎನ್.ಎಸ್. ಚನ್ನಪ್ಪ ಮತ್ತಿರರು ಉಪಸ್ಥಿತರಿದ್ದರು.