Wednesday, February 20, 2013

ಚುನಾವಣಾ ವೀಕ್ಷಕರ ನೇಮಕ

ಮಂಗಳೂರು,ಫೆಬ್ರವರಿ,20: ದಕ್ಷಿಣ ಕನ್ನಡ ಜಿಲ್ಲೆ ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಚುನಾವಣಾ ವೀಕ್ಷಕರನ್ನು ನೇಮಿಸಲಾಗಿದೆ.
ಮಂಗಳೂರು ಮಹಾನಗರಪಾಲಿಕೆಗೆ ಚುನಾವಣಾ ವೀಕ್ಷಕರಾಗಿ ಶ್ರೀ ಶಿವಲಿಂಗ ಮೂರ್ತಿ, (ಭಾಆಸೇ) ಸರ್ಕಾರದ ಅಪರ ಕಾರ್ಯದರ್ಶಿಗಳು, ಸಿಆಸುಇ ಬೆಂಗಳೂರು, ಮೂಡಬಿದ್ರಿ, ಉಳ್ಳಾಲ, ಬಂಟ್ವಾಳಕ್ಕೆ ಮೈಸೂರು ಅಭಿವೃದ್ಧಿ ಪ್ರಾಧಿಕಾರದ ಆಯುಕ್ತರಾದ ಬೆಟಸೂರ್ ಮಠ್, ಪುತ್ತೂರು, ಬೆಳ್ತಂಗಡಿ, ಸುಳ್ಯಕ್ಕೆ ಮಂಗಳೂರು ಮಹಾನಗರಪಾಲಿಕೆ ಆಯುಕ್ತರಾದ ಡಾ ಹರೀಶ್ ಕುಮಾರ್ ಅವರನ್ನು ನೇಮಿಸಿ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.