Friday, May 3, 2013

ಜಿಲ್ಲೆಯಾದ್ಯಂತ ಕಲಂ 144 ರನ್ವಯ ನಿಷೇದಾಜ್ಞೆ ಜಾರಿ -ಹರ್ಷಗುಪ್ತ


ಮಂಗಳೂರು,ಮೇ.03 :-ಜಿಲ್ಲೆಯಲ್ಲಿ ಶಾಂತಿ ಸುವ್ಯವಸ್ಥೆಯನ್ನು ಕಾಪಾಡುವ ಮೂಲಕ ಶಾಂತ ಮತ್ತು ಮುಕ್ತ ಮತದಾನಕ್ಕೆ ಅವಕಾಶ ಕಲ್ಪಿಸುವ  ದೃಷ್ಟಿಯಿಂದ ಸಿಆರ್ ಪಿಸಿ ಕಲಂ 144 ರನ್ವಯ ಪ್ರತಿಬಂಧಕಾಜ್ಞೆಯನ್ನು ಹೊರಡಿಸುವುದು ಆವಶ್ಯವೆಂದು ಪರಿಗಣಿಸಿ ದಿನಾಂಕ 03-5-13 ರ ಅಪರಾಹ್ನ 5.00 ಗಂಟೆಯಿಂದ ದಿನಾಂಕ 06-5-13 ರ ಪೂರ್ವಾಹ್ನ 6.00 ಗಂಟೆ ವರೆಗೆ ದಕ್ಷಿಣಕನ್ನಡ ಜಿಲ್ಲಾ ದಂಡಾಧಿಕಾರಿ ಹಾಗೂ  ಜಿಲ್ಲಾಧಿಕಾರಿಗಳಾದ  ಹರ್ಷಗುಪ್ತರವರು ನಿಷೇಧಾಜ್ಞೆಯನ್ನು ವಿಧಿಸಿ ಆದೇಶಿಸಿರುತ್ತಾರೆ.
           ಅದರಂತೆ ವಿಧಾನಸಭಾ ಚುನಾವಣೆ 2013 ಅಂಗವಾಗಿ ಯಾವುದೇ ಅಹಿತಕಾರಿ ಘಟನೆಗಳು ನಡೆಯದಂತೆ ಹಾಗೂ ಗುಂಪು ಗುಂಪಾಗಿ ರ್ಯಾಲಿ ಮೂಲಕ ಮತಯಾಚಿಸುವುದನ್ನು ತಡೆಯಲಾಗಿದೆ. ದಕ್ಷಿಣಕನ್ನಡ ಜಿಲ್ಲೆಯಾದ್ಯಂತ ಮೇಲೆ ತಿಳಿಸಿದ ಅವಧಿಯಲ್ಲಿ ಸಾರ್ವಜನಿಕರು 5 ಅಥವಾ ಹೆಚ್ಚಿನ ಸಂಖ್ಯೆಯಲ್ಲಿ ರಸ್ತೆ,ಬೀದಿ,ಓಣೆ ಕೇರಿಗಳಲ್ಲಿ ಸಾರ್ವಜನಿಕ ಸ್ಥಳ,ಕಟ್ಟಡ ಮತ್ತು ಮತದಾನ ಕೇಂದ್ರಗಳ ಸುತ್ತಮುತ್ತ ಗುಂಪು ಸೇರುವುದನ್ನು ನಿಷೇಧಿಸಿದೆ. ಯಾವುದೇ ಆಯುಧ,ಕುಡುಗೋಲು, ಖಡ್ಗ, ಭರ್ಚಿ,ಮುಂತಾದ ಮಾರಕಾಯುಧಗಳನ್ನು ಹೊಂದುವುದನ್ನು ನಿಷೇಧಿಸಿದೆ. ಜಿಲ್ಲಾ ಚುನಾವಣಾಧಿಕಾರಿಯವರ ಪೂರ್ವಾನುಮತಿ ಪಡೆಯದೇ ಯಾವುದೇ ರೀತಿಯ ಮೆರವಣಿಗೆ, ಸಾರ್ವಜನಿಕ ಸಭೆ ಸಮಾರಂಭಗಳನ್ನು ನಡೆಸಬಾರದು.ಅಲ್ಲದೆ ಯಾವುದೇ ಕೂಗನ್ನು ಉಚ್ಚರಿಸುವುದು ಯಾ ಪದ ಹಾಡುವುದು, ಚೇಷ್ಟೆ ಮಾಡುವುದು, ಸಂಜ್ಞೆಗಳನ್ನು ಉಪಯೋಗಿಸುವುದು ಮತ್ತು ಚಿತ್ರಗಳ ಮೂಲಕ ಪ್ರಸಾರ ಮಾಡುವುದು,ಪ್ರಕಟಣಾ ಪತ್ರಿಕೆಗಳ ಯಾ ಇತರೆ ಯಾವುದೇ ವಸ್ತುಗಳ ಪ್ರದರ್ಶನ ಬಿತ್ತಿ ಪತ್ರಗಳನ್ನು ಅಂಟಿಸುವುದರಿಂದ ಸಭ್ಯತನ ಸದಾಚಾರ ಸಾರ್ವಜನಿಕ ಭದ್ರತೆ ಶಿಥಿಲಗೊಳ್ಳುವಂತಹ ಯಾವುದೇ ರೀತಿಯ ಅಪರಾಧ ಎಸಗುವರೇ ಪ್ರೇರೇಪಿಸುವ ಕ್ರಮವನ್ನು ನಿಷೇಧಿಸಿದೆ. ನಾಲ್ಕು ಅಥವಾ ಅದಕ್ಕಿಂತ ಕಡಿಮೆ ಜನರು ಮನೆಮನೆಗೆ ತೆರಳಿ ಮತಯಾಚನೆ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ.
ಈ ಆದೇಶವು ಸರ್ಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ ಸಭೆ ಸಮಾರಂಭಗಳಿಗೆ ಅಸನ್ವಯಿಸುವುದಿಲ್ಲ ಮತ್ತು ಅರಕ್ಷಕ ಸಿಬ್ಬಂದಿಗಳು ಕಾರ್ಯ ನಿರ್ವಹಣೆ ವೇಳೆ  ಲಾಠಿಗಳನ್ನು ಉಪಯೋಗಿಸುವುದಕ್ಕೆ ಅನ್ವಯಿಸುವುದಿಲ್ಲ ಹಾಗೂ ಚುನಾವಣಾ ಕರ್ತವ್ಯದಲ್ಲಿ ನಿರತರಾಗಿರುವ  ಸಿಬ್ಬಂದಿಗಳು ಅವರ ಚುನಾವಣಾ ಕರ್ತವ್ಯ ನಿರ್ವಹಿಸುವ ಸ್ಥಳಕ್ಕೆ ಅನ್ವಯಿಸುವುದಿಲ್ಲ ಎಂದು ದಕ್ಷಿಣಕನ್ನಡ ಜಿಲ್ಲಾ ದಂಡಾಧಿಕಾರಿ ಹರ್ಷಗುಪ್ತ ತಿಳಿಸಿದ್ದಾರೆ.
  ಚುನಾವಣಾ ಪೂರ್ವ ಸಮೀಕ್ಷೆಗಳು ಮೇ5 ರೊಳಗೆ ನಿಷೇಧ
  ಭಾರತೀಯ ಚುನಾವಣಾ ಆಯೋಗ ಪ್ರಜಾಪ್ರತಿನಿಧಿ ಕಾಯ್ದೆ 1951 ಸೆಕ್ಷನ್ 126ಎ ಹಾಗೂ ಉಪ ಸೆಕ್ಷನ್ (1) ಅನ್ವಯ ಯಾವುದೇ ಚುನಾವಣಾ ಪೂರ್ವ ಸಮೀಕ್ಷೆಗಳನ್ನು ಮುದ್ರಣ/ದೃಶ್ಯ ಮಾಧ್ಯಮಗಳ ಮೂಲಕ ಪ್ರಕಟಿಸುವ ಬಗ್ಗೆ ಆದೇಶ ಹೊರಡಿಸಿ,ವಿಧಾನಸಭಾ ಚುನಾವಣೆಗಳು ಮೇ5 ರ ಬೆಳಿಗ್ಗೆ 7 ರಿಂದ ಸಂಜೆ 5.30 ರ ವರೆಗೆ ನಿಷೇಧಿಸಲಾಗಿದೆಯೆಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ  ತಿಳಿಸಿದ್ದಾರೆ.
 ಮತದಾನ  ಶಾಯಿ ಗುರುತು ಉಂಗುರ ಬೆರಳಿಗೆ
ಮೇ 5ರಂದು  ರಾಜ್ಯ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮತದಾರರಿಗೆ ಎಡಗೈ ಉಂಗುರದ ಬೆರಳಿಗೆ ಅಳಿಸಲಾಗದ ಶಾಯಿ ಗುರುತನ್ನು ಮಾಡುವಂತೆ ಭಾರತ ಚುನಾವಣಾ ಆಯೋಗವು ಆದೇಶಿಸಿದೆ. ಕಳೆದ ಮಾರ್ಚ್ 2013 ರಲ್ಲಿ ನಡೆದ ಸ್ಥಳೀಯ ಸಂಸ್ಥೆ ಚುನಾವಣೆ ಸಂದರ್ಭದಲ್ಲಿ ಮತದಾರರ ಎಡಗೈ ತೋರು ಬೆರಳಿಗೆ ಅಳಿಸಲಾಗದ ಶಾಯಿ ಗುರುತನ್ನು ಹಾಕಲಾಗಿದ್ದು,ಅದರ ಗುರುತು ಇನ್ನು ಇರುವುದರಿಂದ ಚುನಾವಣಾ ಆಯೋಗವು ಈ ನಿರ್ಧಾರವನ್ನು ಕೈಗೊಂಡಿದೆ.
 ಮತದಾನಕ್ಕೆ ಈ ದಾಖಲೆಗಳಿರಲಿ
ಮತದಾರರು ಮತಪಟ್ಟಿಯಲ್ಲಿ ತಮ್ಮ ಹೆಸರನ್ನು ದೃಢಪಡಿಸಿಕೊಂಡು,ಮತದಾನ ಮಾಡುವ ಸಂದರ್ಭದಲ್ಲಿ ಅವರನ್ನು ಗುರುತಿಸಲು ಅವರು ನೀಡಬೇಕಾದ ಗುರುತಿನ ದಾಖಲೆಗಳನ್ನು ಭಾರತ ಚುನಾವಣಾ ಆಯೋಗವು ಮತದಾರರ ಭಾವಚಿತ್ರದ ಗುರುತಿನ ಚೀಟಿ ಅಥವಾ 23 ದಾಖಲೆಗಳ ಪೈಕಿ ಯಾವುದಾದರೊಂದನ್ನು ಹಾಜರುಪಡಿಸುವುದನ್ನು ಕಡ್ಡಾಯ ಮಾಡಿದೆ. ಮತಪತ್ರವನ್ನು ಮತದಾರರಿಗೆ ನೀಡುವ ಮುನ್ನ ಅವರು ತಮ್ಮ ಗುರುತನ್ನು ಸಾಬೀತು ಪಡಿಸತಕ್ಕದ್ದು.ಕುಟುಂಬದ ಮುಖ್ಯಸ್ಥರ ಹೆಸರಿನಲ್ಲಿ ನೀಡಲಾಗಿರುವ ಈ ಕೆಳಕಂಡ 23 ದಾಖಲೆಗಳ ಪೈಕಿ ಯಾವುದಾದರೊಂದು ದಾಖಲೆಯನ್ನು ಆ ಕುಟುಂಬದ ಇನ್ನಿತರ ಸದಸ್ಯರು ಗುರುತಿಗೆ ಬಳಸಬಹುದಾಗಿದೆ.
ಅಧಿಕೃತ ಫೊಟೋ ಹೊಂದಿರುವ ಮತದಾನ ಚೀಟಿ/ಪಾಸ್ ಪೋರ್ಟ್/ಡ್ರೈವಿಂಗ್ ಲೈಸನ್ಸ್/ಆದಾಯತೆರಿಗೆ ಗುರುತಿನ ಚೀಟಿ/ರಾಜ್ಯ:ಕೇಂದ್ರ ಸರ್ಕಾರ ಹಾಗೂ ಸಾರ್ವಜನಿಕ ಉದ್ದಿಮೆಗಳು ಅಥವಾ ಇತರೆ ಖಾಸಗಿ ಔದ್ಯಮಿಕ ಸಂಸ್ಥೆಗಳು ಅವರ ಕೆಲಸಗಾರರಿಗೆ ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು/ಸಾರ್ವಜನಿಕ ವಲಯದ ಬ್ಯಾಂಕ್/ಕಿಸಾನ್ ಮತ್ತು ಅಂಚೆ ಕಚೇರಿ ನೀಡಿರುವ ಭಾವಚಿತ್ರವಿರುವ ಪಾಸ್ ಪುಸ್ತಕ/31-3-13 ರೊಳಗೆ ಮಾನ್ಯತೆ ಪಡೆದ ನೋಂದಾಯಿತ ವಿದ್ಯಾ ಸಂಸ್ಥೆಗಳು ವಿದ್ಯಾಥರ್ಿಗಳಿಗೆ ಕೊಟ್ಟಿರುವ ಗುರುತಿನ ಚೀಟಿಗಳು/ಭಾವಚಿತ್ರವಿರುವ ನೋಂದಾಯಿತ ಡೀಡ್ ಗಳು/ಪಟ್ಟಾಗಳು ಮುಂತಾದ ಆಸ್ತಿ ದಾಖಲೆಗಳು/ಭಾವಚಿತ್ರವಿರುವ ಪಡಿತರ ಚೀಟಿಗಳು/ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಪಿಂಚಣಿ ಪಾವತಿ ಆದೇಶಗಳು ಅಥವಾ ಮಾಜಿ ಯೋಧರ ಪಿಂಚಣಿ ಪುಸ್ತಕ/ಪಿಂಚಣಿ ಸಂದಾಯ ಆದೇಶಗಳಂತಹ ಪಿಂಚಣಿ ದಾಖಲೆಗಳು,ವೃದ್ಧಾಪ್ಯ ವೇತನ ಆದೇಶಗಳು,ವಿಧವಾ ವೇತನ ಆದೇಶಗಳು/ಭಾವಚಿತ್ರವಿರುವ ಸ್ವಾತಂತ್ರ್ಯ ಯೋಧರ ಗುರುತಿನ ಚೀಟಿಗಳು/ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಶಸ್ತ್ರ ಪರವಾನಗಿ/ಅಂಗವಿಕಲರಿಗೆ ಸಕ್ಷಮ ಪ್ರಾಧಿಕಾರ ನೀಡಿರುವ ಭಾವಚಿತ್ರವಿರುವ ಗುರುತಿನ ಚೀಟಿಗಳು/ಮಾಜಿ ಯೋಧರ ಭಾವಚಿತ್ರವಿರುವ ಸಿ.ಎಸ್.ಡಿ ಕ್ಯಾಂಟೀನ್ ಕಾರ್ಡ್/ಸಂಧ್ಯಾ ಸುರಕ್ಷಾ ಯೋಜನೆಯ ಭಾವಚಿತ್ರವಿರುವ ಗುರುತಿನ ಚೀಟಿ/ಎನ್ಆರ್ಇಜಿ ಯೋಜನೆಯಡಿಯಲ್ಲಿ  ನೀಡಿರುವ ಭಾವಚಿತ್ರವಿರುವ ಉದ್ಯೋಗ ಕಾರ್ಡ್/ಭಾವಚಿತ್ರವಿರುವ ಯಶಸ್ವಿನಿ ಕಾರ್ಡ್/ಮಹಾನಗರಪಾಲಿಕೆ,ನಗರಸಭೆ,ಪುರಸಭೆ,ಗ್ರಾಮ ಪಂಚಾಯತಿಗಳು ಇತ್ಯಾದಿ ಸ್ಥಳೀಯ ಸಂಸ್ಥೆಗಳು  ನೀಡಿರುವ ಭಾವಚಿತ್ರವಿರುವ ಸೇವಾ ಗುರುತಿನ ಚೀಟಿಗಳು/ಸರ್ಕಾರಿ ಇಲಾಖೆ ನೀಡಿರುವ ಭಾವಚಿತ್ರವಿರುವ ಹಿರಿಯ ನಾಗರೀಕರ ಗುರುತಿನ ಚೀಟಿ/ಕರ್ನಾಟಕ ಸರ್ಕಾರದ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ನೀಡಿರುವ ಕುಟುಂಬದ ಸದಸ್ಯರ ಹೆಸರು ಮತ್ತು ವಯಸ್ಸು ಹಾಗೂ ಕುಟುಂಬದ ಯಜಮಾನನೊಂದಿಗೆ ಹೊಂದಿರುವ ಸದಸ್ಯರ ಸಂಬಂಧ ಒಳಗೊಂಡ ಭಾವಚಿತ್ರ ಇರುವ ತಾತ್ಕಾಲಿಕ/ಮೂಲ ಪಡಿತರ ಚೀಟಿ/ಆಧಾರ್ ಕಾರ್ಡ್,ಭಾವಚಿತ್ರವಿರುವ ಆರೋಗ್ಯ ವಿಮಾ ಯೋಜನೆಯ ಸ್ಮಾರ್ಟ್  ಕಾರ್ಡ್ ಗಳು ಸೂಕ್ತ ಪ್ರಾಧಿಕಾರ ಮಾರ್ಚ್ 2013ರೊಳಗೆ ನೀಡಿರುವ ಭಾವಚಿತ್ರ ಸಹಿತ ಎಸ್ಸಿ/ಎಸ್ಟಿ/ಒಬಿಸಿ/ದೃಢೀಕರಣ ಪತ್ರಗಳು ಮತದಾನ ಸಂದರ್ಭದಲ್ಲಿ ಗುರುತಿನ ದಾಖಲೆಗೆ ನೀಡಬಹುದಾಗಿದೆ.