Saturday, May 18, 2013

ಸಂಪುಟ ವಿಸ್ತರಣೆ : 28 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಬೆಂಗಳೂರು, ಮೇ.18 : ಸನ್ಮಾನ್ಯ ಮುಖ್ಯಮಂತ್ರಿ  ಸಿದ್ಧರಾಮಯ್ಯ ನೇತೃತ್ವದ ವಿಸ್ತರಣೆಯಲ್ಲಿ ಸಂಪುಟ ದರ್ಜೆ ಸಚಿವರಾಗಿ 20 ಹಾಗೂ ರಾಜ್ಯ ಸಚಿವರಾಗಿ ಎಂಟು ಮಂದಿ ಸೇರ್ಪಡೆಯಾಗುವುದರೊಂದಿಗೆ ರಾಜ್ಯ ಸಚಿವ ಸಂಪುಟದ ಗಾತ್ರ 29 ಕ್ಕೆ ಏರಿಕೆಯಾಗಿದೆ.
      ರಾಜ ಭವನದ ಗಾಜಿನ ಮನೆಯಲ್ಲಿ ಕಿಕ್ಕಿರಿದ ಜನಸ್ತೋಮದ ನಡುವೆ ಶನಿವಾರ ನಡೆದ ವಿಶೇಷ ಸಮಾರಂಭದಲ್ಲಿ ರಾಜ್ಯಪಾಲ  ಹಂಸರಾಜ ಭಾರಧ್ವಾಜ್ ಅವರು ನೂತನ ಸಚಿವರಿಗೆ ಅಧಿಕಾರಪದ ಹಾಗೂ ಗೌಪ್ಯತಾ ಪ್ರಮಾಣ ವಚನ ಬೋಧಿಸಿದರು.
 ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದ್ರೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಭಯಚಂದ್ರ ಜೈನ್, ಬಂಟ್ವಾಳವಿಧಾನ ಸಭಾ ಕ್ಷೇತ್ರದ ಶಾಸಕರಾದ ಬಿ. ರಮನಾಥ ರೈ, ಹಾಗೂ ಮಂಗಳೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ  ಯು.ಟಿ. ಖಾದರ್ ಅವರು ಸಚಿವರುಗಳಾಗಿ ಪ್ರಮಾಣ ವಚನ ಸ್ವೀಕರಿಸಿದರು.