Saturday, August 31, 2013

ಸೆ.4ರಿಂದ 6ರವರೆಗೆಮಂಗಳೂರು ವಿವಿ ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಉತ್ಸವ

ಮಂಗಳೂರು,ಆಗಸ್ಟ್.31: ಮಂಗಳೂರು ವಿಶ್ವವಿದ್ಯಾನಿಲಯವು ಅಂತರ್ ಕಾಲೇಜು ಮಟ್ಟದ ಸಾಂಸ್ಕೃತಿಕ ಉತ್ಸವನ್ನು ಸೆ.4ರಿಂದ 6ರವರೆಗೆ ಆಯೋಜಿಸಿದೆ ಎಂದು ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಟಿ.ಸಿ.ಶಿವಶಂಕರ ಮೂರ್ತಿ ಹೇಳಿದ್ದಾರೆ.
ಇಂದು ನಗರದ ವಿಶ್ವವಿದ್ಯಾನಿಲಯ ಕಾಲೇಜಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ  ಉತ್ಸವದ ಕುರಿತು ಮಾಹಿತಿ ನೀಡಿದರು.

   ಸೆಪ್ಟೆಂಬರ್ 4ರಂದು ಪೂರ್ವಾಹ್ನ 10 ಗಂಟೆಗೆ ಪದ್ಮಶ್ರೀ ಡಾ.ಬಿ.ಜಯಶ್ರೀ ಅವರು ಸಾಂಸ್ಕೃತಿಕ ಉತ್ಸವಕ್ಕೆ ಚಾಲನೆ ನೀಡುವರು. ಸೆ.6ರಂದು ಅಪರಾಹ್ನ 2.30ಕ್ಕೆ ಸಮಾರೋಪ ಸಮಾರಂಭ ನಡೆಯಲಿದ್ದು ನಿವೃತ್ತ ಏರ್ ಮಾರ್ಷಲ್ ಮಡಿಕೇರಿಯ ಕೆ.ಸಿ.ಕಾರ್ಯಪ್ಪ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ ಎಂದರು.
    ಮಂಗಳೂರು ವಿಶ್ವ ವಿದ್ಯಾನಿಲಯ ಅಧೀನದ 67 ಕಾಲೇಜುಗಳ ಸುಮಾರು 1600 ವಿದ್ಯಾರ್ಥಿಗಳು ಈ ಉತ್ಸವದಲ್ಲಿ ಪಾಲ್ಗೊಳ್ಳಲಿದ್ದು, ಮೂರು ದಿನಗಳ ಈ ಕಾರ್ಯಕ್ರಮ ಬಹಳ ವಿಜೃಂಭಣೆಯಿಂದ ನಡೆಯಲಿದೆ. ವಿವಿಯ 5 ಸಭಾಂಗಣದಲ್ಲಿ ಸ್ಪರ್ಧೆಗಳು ನಡೆಯಲಿವೆ. ಪ್ರತಿ ಸ್ಪರ್ಧೆಯನ್ನು ಆಯೋಜಿಸುವಲ್ಲಿ ಪ್ರಾಧ್ಯಾಪಕರನ್ನೊಳಗೊಂಡ ತಂಡಗಳನ್ನು ಈಗಾಗಲೇ ರಚಿಸಲಾಗಿದೆ. ಫಲಿತಾಂಶ ನಿರ್ಧರಿಸಲು ಪರಿಣತ ತೀರ್ಪುಗಾರರನ್ನು ನಿಯೋಜಿಸಲಾಗಿದೆ ಎಂದು ಕುಲಪತಿಗಳು ಮಾಹಿತಿ ನೀಡಿದರು. ಉತ್ತಮ ಸಾಧನೆ ತೋರುವ ತಂಡ ಅಂತರ್ ವಿಶ್ವ ವಿದ್ಯಾನಿಲಯ ಮಟ್ಟ ಮತ್ತು ತದನಂತರ ರಾಷ್ಟ್ರೀಯ ಮಟ್ಟದಲ್ಲಿ ಸ್ಪರ್ಧಿಸಲಿದೆ. ಮೊದಲನೇ ದಿನ ಸಮೂಹ ಗಾಯನ, ಮಿಮಿಕ್ರಿ, ರಂಗೋಲಿ,  ಜಾನಪದ ಗೀತೆ, ಕ್ಲಾಸಿಕಲ್ ಇನ್ಸ್ಟ್ರುಮೆಂಟಲ್ ಮುಂತಾದ ಸ್ಪರ್ಧೆಗಳು ನಡೆದರೆ,2ನೇ ದಿನ ಜಾನಪದ ನೃತ್ಯ, ಕ್ಲಾಸಿಕಲ್ ಡ್ಯಾನ್ಸ್, ಕ್ವಿಜ್, ಸ್ಕಿಟ್,  ಡಿಬೇಟ್ ಮತ್ತಿತತ ಸ್ಪರ್ಧೆಗಳು ನಡೆಯಲಿವೆ.  ಎಂದು ಕುಲಪತಿಗಳು ವಿವರಿಸಿದರು.
           ಕುಲಸಚಿವ ಪ್ರೊ.ಪಿ.ಎಸ್.ಯಡಪಡಿತ್ತಾಯ, ಸಮೂಹ ಸಂವಹನ ಮತ್ತು ಪತ್ರಿಕೋದ್ಯಮ ವಿಭಾಗದ ಪ್ರಾಧ್ಯಾಪಕ ಪ್ರೊ.ಜಿ.ಪಿ.ಶಿವರಾಂ, ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಘಟಕದ ನಿರ್ದೇಶಕ ಪ್ರೊ.ಪಿ.ಎಲ್.ಧರ್ಮ, ಮಂಗಳೂರು ವಿವಿ ಕಾಲೇಜಿ ಉಪ ಪ್ರಾಂಶುಪಾಲೆ ಪಾರ್ವತಿ ಅಪ್ಪಯ್ಯ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Friday, August 30, 2013

ಮಾಹಿತಿ ತಂತ್ರಜ್ಞಾನ; ರಾಜ್ಯದಲ್ಲಿ 40 ಲಕ್ಷ ಉದ್ಯೋಗ ಸೃಷ್ಠಿ -ಎಸ್.ಆರ್.ಪಾಟೀಲ್

ಮಂಗಳೂರು,ಆಗಸ್ಟ್. 30: ಮುಂದಿನ ದಿನಗಳಲ್ಲಿ ಕರ್ನಾಟಕ ರಾಜ್ಯದಲ್ಲಿ ಮಾಹಿತಿ ತಂತ್ರಜ್ಞಾನದ  ಕ್ಷೇತ್ರದಲ್ಲಿ ಅಪಾರ0 ಬಂಡವಾಳ ಹೂಡಿಕೆಯಾಗಲಿದ್ದು, ಈ ಮೂಲಕ ಮಂಗಳೂರು,ಮೈಸೂರು,ಹುಬ್ಬಳ್ಳಿ-ಧಾರಾವಾಡ, ಗುಲ್ಬರ್ಗಾ, ಬೆಳಗಾವಿ, ತುಮುಕೂರು ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ನೇರವಾಗಿ 12 ಲಕ್ಷ ಜನರಿಗೆ ಹಾಗೂ ಪರೋಕ್ಷವಾಗಿ 28 ಲಕ್ಷ ಜನರಿಗೆ ಉದ್ಯೋಗ ಭಾಗ್ಯ ಒದಗಲಿದೆ ಎಂದು  ರಾಜ್ಯ ಮಾಹಿತಿ ತಂತ್ರಜ್ಞಾನ,ಜೈವಿಕ ತಂತ್ರಜ್ಞಾನ,ಯೋಜನೆ ಹಾಗೂ ಅಂಕಿ ಸಂಖ್ಯೆಗಳ ಖಾತೆ ಸಚಿವರಾದ  ಎಸ್. ಆರ್.ಪಾಟೀಲ್ ತಿಳಿಸಿದ್ದಾರೆ.
ಅವರು ಇಂದು ಮಂಗಳೂರಿನಲ್ಲಿ ಕರ್ನಾಟಕ ಸರ್ಕಾರ ,ಬೆಂಗಳೂರಿನ ಇನ್ ಫರ್ಮೇಷನ್ ಟೆಕ್ನಾಲಜಿ ಬಿಜ್ ವತಿಯಿಂದ ಆಯೋಜಿಸಿದ್ದ ಹೊಸ ಪ್ರದೇಶಗಳಿಗೆ ಮಾಹಿತಿ ತಂತ್ರಜ್ಞಾನ ಕುರಿತ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕ ರಾಜ್ಯದ ಮಾಹಿತಿ ತಂತ್ರಜ್ಞಾನ ರಫ್ತಿನಿಂದ 2012-13 ನೇ ಸಾಲಿನಲ್ಲಿ ರೂ.1.35 ಲಕ್ಷ ಕೋಟಿವಿದೇಶಿ ವಿನಿಮಯ ಗಳಿಸಿದ್ದು, ಎರಡನೇ ಪಂಕ್ತಿ ನಗರಗಳಾದ ಮೈಸೂರು,ಮಂಗಳೂರು ಮತ್ತು ಹುಬ್ಬಳ್ಳಿ,ಧಾರವಾಡ ನಗರಗಳ ಪಾಲು ರೂ.2,680 ಕೋಟಿಗಳಾಗಿದೆ. ಎರಡನೇ ಪಂಕ್ತಿ ನಗರಗಳು ಮುಂದಿನ ದಿನಗಳಲ್ಲಿ ಮಾಹಿತಿ ತಂತ್ರಜ್ಞಾನ ರಫ್ತಿನಿಂದ ಸುಮಾರು ರೂ.4,000 ಕೋಟಿ ಆದಾಯ ಗಳಿಸುವ ವಿಶ್ವಾಸ ಹೊಂದಿರುವುದಾಗಿ ಸಚಿವರು ಆಶಾಭಾವ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಉಪಸ್ಥಿತರಿದ್ದ ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಅವರು ಮಾತನಾಡಿ, ಜಿಲ್ಲೆಯ ಜನ ಅತ್ಯಂತ ಉದ್ಯಮಶೀಲರಾಗಿದ್ದು,ದೇಶದಲ್ಲೇ ಅಲ್ಲದೆ ವಿದೇಶಗಳಲ್ಲಿ ಕೈಗಾರಿಕೆ ಬ್ಯಾಂಕುಗಳನ್ನು ಸ್ಥಾಪಿಸಿದ್ದಾರೆ. ಆದ್ದರಿಂದ ಈ ಜಿಲ್ಲೆ ಮಾಹಿತಿ ತಂತ್ರಜ್ಞಾನ ಪಾರ್ಕ್  ಆಗುವುದರಿಂದ ಜಿಲ್ಲೆಯ ಜನತೆಗೆ ಹೆಚ್ಚಿನ ಉದ್ಯೋಗಾವಕಾಶಗಳು ಲಭಿಸಲಿವೆ ಎಂದರು.
              ರಾಜ್ಯ ಮೀನುಗಾರಿಕೆ ಹಾಗೂ ಯುವಜನ ಸೇವಾ ಮತ್ತು ಕ್ರೀಡಾ ಸಚಿವರಾದ ಕೆ.ಅಭಯಚಂದ್ರ ಜೈನ್ ಅವರು ಮಾತನಾಡಿ ಬೆಂಗಳೂರು ನಂತರ ಅತ್ಯಂತ ಹೆಚ್ಚಿನ ಇಂಜಿನಿಯರ್ ಗಳು ಅವಿಭಾಜಿತ ದಕ್ಷಿಣ ಕನ್ನಡ ಜಿಲ್ಲೆಯ  ಕಾಲೇಜುಗಳಲ್ಲಿ ಪದವಿ ಪಡೆದು ಹೊರಬರುತ್ತಿದ್ದಾರೆ. ಆದ್ದರಿಂದ ಇಂತಹ ವಿದ್ಯಾವಂತ ನಿರದ್ಯೋಗಿಗಳಿಗೆ ಮಾಹಿತಿ ತಂತ್ರಜ್ಞಾನ ಕಂಪೆನಿಗಳು ಉದ್ಯೋಗ ಒದಗಿಸುವ ತಾಣಗಳಾಗಬೇಕೆಂದರು.
 ಆರೋಗ್ಯ ಸಚಿವ ಯು.ಟಿ,ಖಾದರ್ ಅವರು ಮಾತನಾಡಿದರು. ಜಿಲ್ಲೆಯಲ್ಲಿ ಮಾಹಿತಿ ತಂತ್ರಜ್ಞಾನ ಪಾರ್ಕಿಗೆ ವಿಪುಲ ಅವಕಾಶಗಳಿದ್ದು, ಕೈಗಾರಿಕೆ ಸ್ಥಾಪಿಸಲು ಭೂಮಿಯನ್ನು ಪಡೆದು ಹಲವಾರು ವರ್ಷಗಳ ವರೆಗೂ ಜಮೀನನ್ನು ಹಾಗೇ ಬಿಡುತ್ತಿರುವುದು ಉದ್ಯಮಿಗಳಿಂದ ನಡೆಯುತ್ತಿದೆ. ಇದು ತಪ್ಪಿ ಉದ್ಯಮಪತಿಗಳು ತಮ್ಮ ಉದ್ಯಮವನ್ನು ಅತೀ ಶೀಘ್ರವಾಗಿ ಆರಂಭಿಸುವ ಮೂಲಕ ಜಿಲ್ಲೆಯ ಜನರಿಗೆ ಉದ್ಯೋಗಾವಕಾಶಗಳನ್ನು ಸೃಷ್ಠಿ ಮಾಡಬೇಕೆಂದರು.
ಮಾಹಿತಿ ತಂತ್ರಜ್ಞಾನ ಹಾಗೂ ವಿಜ್ಞಾನ ತಂತ್ರಜ್ಞಾನ ಇಲಾಖೆ ಮುಖ್ಯಕಾರ್ಯದರ್ಶಿ ಎನ್.ಎಸ್.ಪ್ರಸಾದ್ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಚಾರ ಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಭಾಗವಹಿಸಿ ಮಾತನಾಡಿದ ಇನ್ಫೋಸಿಸ್  ಉಪಾಧ್ಯಕ್ಷ  ಕ್ರಿಸ್ ಗೋಪಾಲಕೃಷ್ಣ ಅವರು ಮಾಹಿತಿ ತಂತ್ರಜ್ಞಾನ ಭವಿಷ್ಯದಲ್ಲಿ ದೇಶದ ಆರ್ಥಿಕತೆಗೆ ಬಹು ದೊಡ್ಡ ಪಾಲನ್ನು ನೀಡಲಿದ್ದು, ಸರ್ಕಾರವೂ ಇದಕ್ಕೆ ಬೇಕಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದರು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಎನ್. ಪ್ರಕಾಶ್, ಕೆನರ ವಾಣಿಜ್ಯ ಮತ್ತು ಕೈಗಾರಿಕ ಸಂಸ್ಥೆಯ ಅಧ್ಯಕ್ಷ ಮೊಹಮ್ಮದ್ ಅಮೀನ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.ಬೆಂಗಳೂರಿನ  ಎಸ್ ಟಿಪಿಐ ಸಂಸ್ಥೆ ನಿರ್ದೇಶಕ ಪಿ.ಕೆ ದಾಸ್ ವಂದಿಸಿದರು. ವಿದ್ಯಾದಿನಾಕರ್ ಕಾರ್ಯಕ್ರಮ ನಿರೂಪಣೆ ಮಾಡಿದರು.

Monday, August 26, 2013

ಗ್ರಾಮೀಣ ಪ್ರದೇಶಗಳಲ್ಲಿ ಪಿಂಚಣಿ ಅದಾಲತ್ -ರಮಾನಾಥ ರೈ

ಮಂಗಳೂರು ಆಗಸ್ಟ್ 26:- ಸಾಮಾಜಿಕ ಭದ್ರತಾ ಯೊಜನೆಗಳಲ್ಲಿ ಮಾಸಾಶನ ಪಡೆಯುತ್ತಿರುವ ನಿರ್ಗತಿಕರು, ಬಡವರಿಗೆ ಕ್ರಮಬದ್ಧವಾಗಿ ಪ್ರತೀ ತಿಂಗಳು ಮಾಸಾಶನ-ಪಿಂಚಣಿ ದೊರಕಿಸುವ ಉದ್ದೇಶದಿಂದ ಕರ್ನಾಟಕ ರಾಜ್ಯ ಸರಕಾರ ಎಲ್ಲಾ ಹೋಬಳಿ ಮಟ್ಟದಲ್ಲಿ ಪಿಂಚಣಿ ಅದಾಲತ್ ಗಳನ್ನು ನಡೆಸಲು ಉಪ ವಿಭಾಗಾಧಿಕಾರಿಗಳಿಗೆ ಸೂಕ್ತ ನಿರ್ದೇಶನಗಳನ್ನು ನೀಡಲಾಗಿದೆ ಎಂದು ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಶ್ರೀ ಬಿ.ರಮಾನಾಥ ರೈ ಅವರು ತಿಳಿಸಿದ್ದಾರೆ.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದ್ದ ಕರ್ನಾಟಕ ಸರಕಾರದ ಸಾಧನೆಗಳನ್ನು ಬಿಂಬಿಸುವ  ``ನೂರು ದಿನಗಳು ನೂರಾರು ನಿರ್ಣಯಗಳು'' ಹೊತ್ತಗೆಯನ್ನು ಬಿಡುಗಡೆಗೊಳಿಸಿ ಮಾತನಾಡಿದರು.
ಕರ್ನಾಟಕ ಸರಕಾರ ಜಾರಿಗೆ ತಂದಿರುವ ಅನ್ನಭಾಗ್ಯ ಯೋಜನೆಯಡಿ ದಕ್ಷಿಣಕನ್ನಡ ಜಿಲ್ಲೆಯಲ್ಲಿ  511 ನ್ಯಾಯಬೆಲೆ ಅಂಗಡಿಗಳ ಮೂಲಕ 1.79 ಲಕ್ಷ  ಬಿಪಿಎಲ್ ಕಾಡರ್್ದಾರರು ಹಾಗೂ 21079 ಅಂತ್ಯೋದಯ ಕಾರ್ಡ್ ದಾರರು ರೂ.1/-ರ ದರದಲ್ಲಿ ಒಂದು ಕೆಜಿ ಅಕ್ಕಿಯಂತೆ 30 ಕೆಜಿ ಅಕ್ಕಿ ಪಡೆಯುತ್ತಿದ್ದಾರೆ ಎಂದ ಸಚಿವರು, ಕಳೆದ ನೂರು ದಿನಗಳಲ್ಲಿ ಮಾನ್ಯ ಮುಖ್ಯ ಮಂತ್ರಿಗಳ ನೇತೃತ್ವದಲ್ಲಿ ಮಕ್ಕಳಿಗೆ ಪೌಷ್ಠಿಕ ಆಹಾರ ಒದಗಿಸುವ ಕ್ಷೀರಭಾಗ್ಯ, ಪರಿಶಿಷ್ಟರು ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ಸಾಲ ಮನ್ನಾ, ಭಾಗ್ಯಜ್ಯೋತಿ ಕುಟೀರಗಳು ಬಳಸಿದ್ದ ಹೆಚ್ಚುವರಿ ವಿದ್ಯುತ್ ಬಿಲ್ ಪಾವತಿಸದೆ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದವರ ಶುಲ್ಕ ಮನ್ನಾ ಮಾಡಿ ಮರುಸಂಪರ್ಕ ಕಲ್ಪಿಸಿದ್ದು, ಕೃಷಿ ಉತ್ಪನ್ನಗಳಿಗೆ ನ್ಯಾಯಯುತ ಬೆಲೆ ನಿಗಧಿಗೆ  ಕೃಷಿ ಆಯೋಗ ರಚನೆ, ಸ್ತ್ರೀಶಕ್ತಿ ಸ್ವಸಹಾಯ ಸಂಘಗಳ ಆವರ್ತ ನಿಧಿಯನ್ನು ರೂ.5000/-ಗಳಿಂದ ರೂ.20,000ಗೆ ಏರಿಸಿದ್ದು, ಬಡವರಿಗೆ  ವಸತಿ ಯೋಜನೆಯಲ್ಲಿ  ನೀಡಲಾಗುತ್ತಿದ್ದ ರೂ.75,000/- ಅನುದಾನದ ಬದಲಾಗಿ ರೂ.1.20 ಲಕ್ಷಕ್ಕೆ ಹೆಚ್ಚಿಸಲಾಗಿದೆ. ಹೀಗೆ ಸರಕಾರ ಜನತೆಗೆ ನೀಡಿದ್ದ 160 ಭರವಸೆಗಳಲ್ಲಿ ಕೇವಲ 100 ದಿನಗಳಲ್ಲೇ 60 ಭರವಸೆಗಳನ್ನು ಈಡೇರಿಸಿ ಜನಪರ ಸರಕಾರವಾಗಿದೆ ಎಂದು ಸಚಿವರು ತಿಳಿಸಿದರು. ಮನಸ್ವಿನಿ-40 ವರ್ಷ ಮೇಲ್ಪಟ್ಟ ವಿಚ್ಚೇದಿತ ಮಹಿಳೆ ಅಥವಾ ವಿಧವೆಯರಿಗೆ ರೂ.500/- ನೀಡುವ ಮಾಸಾಶನ ಹಾಗೂ (ಮಂಗಳಮುಖಿಯರು) ಲೈಂಗಿಕ ಅಲ್ಪಸಂಖ್ಯಾತರಿಗೆ ಮಾನವೀಯತೆಯಿಂದ ನೀಡುವ ಮಾಸಾಶನ ಮೈತ್ರಿ ಯೋಜನೆಗಳನ್ನು ಸರಕಾರ ಹೊಸದಾಗಿ ಜಾರಿಗೆ ತಂದಿದೆ ಎಂದು ಸಚಿವರು ತಿಳಿಸಿದರು.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎನ್.ಪ್ರಕಾಶ್, ಮಂಗಳೂರು ಮಹಾನಗರಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ,ಅಪರ ಜಿಲ್ಲಾಧಿಕಾರಿ ದಯಾನಂದ ಹಾಜರಿದ್ದರು.  

Friday, August 23, 2013

ಸಮಾಜ ಕಲ್ಯಾಣ ಇಲಾಖೆ ಹಾಸ್ಟೆಲ್ ಗಳು ಸುಸ್ಥಿತಿಯಲ್ಲಿ- ಎಂ.ಶಿವಣ್ಣ

ಮಂಗಳೂರು, ಆಗಸ್ಟ್. 23:- ಇತರೆ ರಾಜ್ಯಗಳು ಹಾಗೂ ಕರ್ನಾಟಕದ ಇತರೆ ಜಿಲ್ಲೆಗಳಿಗೆ ಹೋಲಿಸಿದರೆ. ದಕ್ಷಿಣಕನ್ನಡ ಜಿಲ್ಲೆಯಲ್ಲಿ ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸುತ್ತಿರುವ ಹಾಸ್ಟೆಲ್ ಗಳು ಅತ್ಯುತ್ತಮವಾಗಿವೆಯೆಂದು ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ಸದಸ್ಯರಾದ ಮಾನ್ಯ  ಎಂ.ಶಿವಣ್ಣ ಅವರು ತಮ್ಮ ಅಭಿಪ್ರಾಯ ತಿಳಿಸಿದರು.
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರಿಶಿಷ್ಟ ಜಾತಿಯವರಿಗೆ ಸಂವಿಧಾನಾತ್ಮಕವಾಗಿ ವಿವಿಧ ಇಲಾಖೆಗಳ ಮುಖೇನ ನೀಡಲಾಗಿರುವ ವಿವಿಧ ಸವಲತ್ತುಗಳ ಅನುಷ್ಟಾನ ಪ್ರಗತಿ ಪರಿಶೀಲನೆ ನಡೆಸಿ ತಮ್ಮ ಅಭಿಪ್ರಾಯ ತಿಳಿಸಿದರು.
ಜಿಲ್ಲೆಯಲ್ಲಿ ಒಟ್ಟು 32 ವಿದ್ಯಾರ್ಥಿ ನಿಲಯಗಳು ಸಮಾಜ ಕಲ್ಯಾಣ ಇಲಾಖೆಯಿಂದ ನಿರ್ವಹಿಸಲ್ಪಡುತ್ತಿದ್ದು,ಇವುಗಳಲ್ಲಿ 3018 ವಿದ್ಯಾರ್ಥಿಗಳಿಗೆ ಅವಕಾಶವಿದ್ದು. 2615 ವಿದ್ಯಾರ್ಥಿಗಳು ಸೌಲಭ್ಯ ಪಡೆಯುತ್ತಿದ್ದಾರೆ. 30 ವಿದ್ಯಾರ್ಥಿನಿಲಯಗಳು ಇಲಾಖೆಯ ಸ್ವಂತ ಕಟ್ಟಡ ಹೊಂದಿವೆ ಎಂದು ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅರುಣ್ ಪುರ್ಟಾಡೋ ಮಾನ್ಯ ಸದಸ್ಯರಿಗೆ ಮಾಹಿತಿ ಒದಗಿಸಿ,2012-13 ನೇ ಸಾಲಿನಲ್ಲಿ ಈ ವಿದ್ಯಾರ್ಥಿ ನಿಲಯಗಳಲ್ಲಿ ಕಲಿಯುತ್ತಿದ್ದ 191 ವಿದ್ಯಾರ್ಥಿಗಳು ಎಸ್ಎಸ್ಎಲ್ಸಿ ಪರೀಕ್ಷೆಗೆ ಹಾಜರಾಗಿದ್ದು ಅವರಲ್ಲಿ 161 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶೇಕಡಾ 84.29 ಫಲಿತಾಂಶ ಬಂದಿದೆ.
ಪಿಯುಸಿ ಪರೀಕ್ಷೆಗೆ 52 ವಿದ್ಯಾರ್ಥಿಗಳು ಹಾಜರಾಗಿದ್ದು ಅವರಲ್ಲಿ 48 ವಿದ್ಯಾರ್ಥಿಗಳು ಉತ್ತೀರ್ಣರಾಗಿ ಶೇಕಡಾ 92 ರಷ್ಟು ಫಲಿತಾಂಶ ಬಂದಿದೆ ಎಂದರು. ಈ ಸಂದರ್ಭದಲ್ಲಿ ಮಾತನಾಡಿದ ಮಾನ್ಯ ಶಿವಣ್ಣನವರು ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಂಗ್ಲೀಷ್ ಹಾಗೂ ಗಣಿತ ವಿಷಯಗಳಲ್ಲಿ  ಸ್ವಲ್ಪ ಹಿಂದಿದ್ದು, ಅಂತಹ ವಿದ್ಯಾರ್ಥಿಳಿಗೆ ವಿಶೇಷ ಟ್ಯೂಷನ್ ಮೂಲಕ ಎರಡೂ ವಿಷಯಗಳನ್ನು ಕಲಿಸುವಂತೆ ಹಾಗೂ ವಿದ್ಯಾ ರ್ಥಿನಿಲಯದ ಮಕ್ಕಳಿಗೆ ಉತ್ತಮ ಹಾಸಿಗೆ ಹಾಗೂ ಹೊದಿಕೆಗಳನ್ನು ಸರಬರಾಜು ಮಾಡುವಂತೆ ತಿಳಿಸಿದರು.
ಸ್ಥಳೀಯ ಸಂಸ್ಥೆಗಳ ಅನುದಾನದಲ್ಲಿ ಪರಿಶಿಷ್ಟರಿಗಾಗಿ ಮೀಸಲಿರುವ ಶೇಕಡಾ 22.75 ಅನುದಾನವನ್ನು ಆಯಾ ಸ್ಥಳೀಯ ಸಂಸ್ಥೆಗಳ ಪರಿಶಿಷ್ಟ ಕಾಲೊನಿಗಳಲ್ಲಿ ರಸ್ತೆ, ಚರಂಡಿ,ಶಾಲಾ ಕಟ್ಟಡ ಇನ್ನಿತರೆ ಮೂಲಭೂತ ಸೌಲಭ್ಯಗಳನ್ನು ಒದಗಿಸಲು ಮಾತ್ರ ಬಳಸಬೇಕೆಂದು ಶಿವಣ್ಣನವರು ಅಧಿಕಾರಿಗಳಿಗೆ ತಿಳಿಸಿದರು. ಜಿಲ್ಲೆಯಲ್ಲಿರುವ ಸ್ಥಳೀಯ ಸಂಸ್ಥೆಗಳು ಶೇಕಡಾ 22.75 ರ ಅನುದಾನದಲ್ಲಿ ಶೇಕಡಾ 62.08 ರಷ್ಟು 1249.87 ಲಕ್ಷದಲ್ಲಿ ರೂ.775.95 ಲಕ್ಷ ಅನುದಾನ ವೆಚ್ಚ ಮಾಡಲಾಗಿದೆ. ಅದೇ ರೀತಿ ಗ್ರಾಮ ಪಂಚಾಯತ್ ಗಳ ಅನುದಾನದಲ್ಲಿ ಮೀಸಲಿಟ್ಟಿರುವ ಶೇಕಡಾ 25 ಅನುದಾನ 2,09,00,984 ರೂ.ಗಳಲ್ಲಿ ರೂ.1,75,18,961 ರೂ.ಗಳನ್ನು ವೆಚ್ಚ ಮಾಡುವ ಮೂಲಕ ಶೇಕಡಾ 84 ಸಾಧನೆ ಮಾಡಲಾಗಿದೆ. ಒಂದನೇ ತರಗತಿಯಿಂದ ಎಂಟನೇ ತರಗತಿಗಳಲ್ಲಿ ಕಲಿಯುತ್ತಿರುವ 11,117 ಪ್ರೀ ಮೆಟ್ರಿಕ್  ವಿದ್ಯಾರ್ಥಿಗಳಿಗೆ  ರೂ.36.94 ಲಕ್ಷ,9 ಮತ್ತು 10ನೇ ತರಗತಿಯಲ್ಲಿ ಕಲಿಯುತ್ತಿರುವ  3108 ವಿದ್ಯಾರ್ಥಿಗಳಿಗೆ ರೂ.65.12 ಲಕ್ಷ ಹಾಗೂ 4368 ಪೋಸ್ಟ್ ಮೆಟ್ರಿಕ್ ವಿದ್ಯಾರ್ಥಿಗಳಿಗೆ  ರೂ.353.62 ಲಕ್ಷ ಪೋಸ್ಟ್ ಮೆಟ್ರಿಕ್ ವೇತನ ಮಂಜೂರು ಮಾಡುವ ಮೂಲಕ ಒಟ್ಟು 18593 ವಿದ್ಯಾರ್ಥಿಗಳಿಗೆ 455.68 ಲಕ್ಷ ರೂ.ಗಳ ವಿದ್ಯಾರ್ಥಿವೇತನ ವಿತರಿಸಲಾಗಿದೆ ಎಂದು ಸಮಾಜ ಕಲ್ಯಾಣಾಧಿಕಾರಿ ಸಭೆಗೆ ತಿಳಿಸಿದರು.
ವಿಶೇಷ ಘಟಕ ಯೋಜನೆಯಡಿ ಜಿಲ್ಲೆಯಲ್ಲಿ ಕೃಷಿ,ಶಿಕ್ಷಣ,ಖಾದಿ ಗ್ರಾಮೋದ್ಯೋಗ,ಸಣ್ಣ ನೀರಾವರಿ,ಪ್ರವಾಸೋದ್ಯಮ,ಲೋಕೋಪಯೋಗಿ ಸೇರಿದಂತೆ ಇತರೆ ಇಲಾಖೆಗಳು ಶೇಕಡಾ 100 ರಷ್ಟು ಪ್ರಗತಿ ಸಾಧಿಸಿರುವ ಬಗ್ಗೆ ಮಾನ್ಯ ಸದಸ್ಯ ಶಿವಣ್ಣನವರು ಪ್ರಶಂಸಿಸಿದರು.
ದಕ್ಷಿಣಕನ್ನಡ ಜಿಲ್ಲೆಯಲ್ಲಿ ಪರಿಶಿಷ್ಟರ ಮೇಲೆ ಅತೀ ಕಡಿಮೆ ದೌರ್ಜನ್ಯ ಮೊಕದ್ದಮೆಗಳು ದಾಖಲಾಗಿದ್ದು, ಜಿಲ್ಲೆಯು ಸುಶಿಕ್ಷಿತರಿಂದ ಕೂಡಿರುವುದೇ ಇದಕ್ಕೆ ಮುಖ್ಯ ಕಾರಣ ಎಂದು  ಶಿವಣ್ಣ ಜಿಲ್ಲೆಯ ಜನತೆಗೆ ಅಭಿನಂದಿಸಿದರು.
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ 946 ಫಲಾನುಭವಿಗಳಿಗೆ ಮಂಜೂರಾಗಿದ್ದ  ಸಾಲವನ್ನು ಮನ್ನಾ ಮಾಡಲಾಗಿದೆ ಎಂದರು. ಸಭೆಯಲ್ಲಿ ರಾಷ್ಟ್ರೀಯ ಪರಿಶಿಷ್ಟ ಜಾತಿ ಆಯೋಗದ ರಾಜ್ಯ ಘಟಕದ ನಿರ್ದೇಶಕಿ ಶ್ರೀಮತಿ.ಪಿ.ಗಿರಿಜಾ , ಸಹಾಯಕ  ನಿರ್ದೇಶಕಿ ಶ್ರೀಮತಿ ಶೀಲಾನಾರಾಯಣಸ್ವಾಮಿ, ಜಿಲ್ಲಾಧಿಕಾರಿ ಎನ್.ಪ್ರಕಾಶ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ, ಜಿಲ್ಲಾ ಪೋಲೀಸ್ ಅಧೀಕ್ಷಕ ಅಭಿಷೇಕ್ ಗೋಯಲ್ ಮುಂತಾದವರು ಹಾಜರಿದ್ದರು.
 

Wednesday, August 21, 2013

ವಾಹನಗಳಲ್ಲಿ ಟಿಂಟ್ ಫಿಲಂ ಅಳವಡಿಸಿದರೆ ದಂಡ


ಮಂಗಳೂರು, ಆಗಸ್ಟ್. 21:-ಸರ್ವೋ ಚ್ಛ ನ್ಯಾಯಾಲಯದ ಆದೇಶದಂತೆ ಸಾರ್ವಜನಿಕರು ತಮ್ಮ ವಾಹನಗಳ ಮುಂಭಾಗ ಹಾಗೂ ಹಿಂಭಾಗದ ವಿಂಡ್ ಸ್ಕ್ರೀನ್ ಗಳನ್ನು ಶೇಕಡಾ 70 ರಷ್ಟು ಪಾರದರ್ಶಕತೆ ಹಾಗೂ ವಾಹನದ ಎರಡು ಬದಿಗಳನ್ನು ಶೇಕಡಾ 50 ರಷ್ಟು ಹೊಂದಿರುವ ಗಾಜುಗಳನ್ನು ಹೊಂದಿರಬಹುದು.ಆದರೆ ಇಷ್ಟೇ ಪ್ರಮಾಣದ ಸನ್ ಫಿಲಂಗಳನ್ನು ಯಾವುದೇ ಅಂಗಡಿ,ಕಾರ್ ಅಕ್ಷೆಸರೀಸ್ ಅಂಗಡಿಗಳಿಂದ ಖರೀದಿಸಿ ಅಳವಡಿಸುವಂತಿಲ್ಲ.ಒಂದು ವೇಳೆ ಈ ನಿಯಮ ಉಲ್ಲಂಘಿಸಿದರೆ ದಂಡ ತೆರಬೇಕಾಗುತ್ತದೆ ಎಂದು ಮಂಗಳೂರು ನಗರ ಪೋಲೀಸ್ ಆಯುಕ್ತರು ತಿಳಿಸಿದ್ದಾರೆ.
ಸರ್ವೋಚ್ಚ ನ್ಯಾಯಾಲಯದ ಸೂಚನೆಗಳನ್ನು ಪಾಲಿಸುವದು ಪ್ರತಿಯೊಬ್ಬ ನಾಗರೀಕನ ಕರ್ತವ್ಯ.ತಪ್ಪಿದಲ್ಲಿ ಕಾನೂನು  ರೀತ್ಯ ಕ್ರಮ ಜರುಗಿಸಲು ಸಂಚಾರಿ ಪೊಲೀಸ್ ಅಧಿಕಾರಿಗಳು ಬದ್ಧರಾಗಿರುತ್ತಾರೆಂದು ಪೋಲೀಸ್ ಆಯುಕ್ತರು ತಿಳಿಸಿರುತ್ತಾರೆ.

Friday, August 16, 2013

ಆರು ತಿಂಗಳೊಳಗೆ ಕಸವಿಭಜನೆ ಮನೆಗಳಿಂದ ಆರಂಭವಾಗಲಿ: ಭರತ್ ಲಾಲ್ ಮೀನ

ಮಂಗಳೂರು, ಆಗಸ್ಟ್.16:- ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ತ್ಯಾಜ್ಯ ವಿಲೇಯನ್ನು ಯಶಸ್ವಿಯಾಗಿಸಲು ಮುಂದಿನ ಆರು ತಿಂಗಳೊಳಗಾಗಿ ಪ್ರತಿಯೊಂದು ಮನೆಯಿಂದ ಕಸವಿಭಜಿಸಿ ಸಂಗ್ರಹ ಆರಂಭವಾಗಬೇಕೆಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಾದ ಭರತ್ ಲಾಲ್ ಮೀನಾ ಅವರು ಸೂಚಿಸಿದರು.
ಆರು ತಿಂಗಳೊಳಗೆ ಶೇ 80 ಪ್ರಗತಿ ದಾಖಲಿಸಬೇಕೆಂದ ಉಸ್ತುವಾರಿ ಕಾರ್ಯದರ್ಶಿಗಳು, ಈ ಸಂಬಂಧ ಪ್ರತೀ ವಾರಕ್ಕೊಮ್ಮೆ ಪ್ರಗತಿಯನ್ನು ತಮಗೆ ಕಳುಹಿಸಿಕೊಡಬೇಕೆಂದು ಮಹಾನಗರಪಾಲಿಕೆ ಆಯುಕ್ತರಿಗೆ ಸೂಚಿಸಿದರು.
ಮೂಡಬಿದ್ರೆಯಲ್ಲಿ ಕಸವಿಭಜಿಸಿ ಸಂಗ್ರಹಿಸುವ ಕಾರ್ಯ ಯಶಸ್ವಿಯಾಗಿದ್ದು, ಈ ಯಶೋಗಾಥೆ ಉಳಿದವರಿಗೆ ಪ್ರೇರಪಣೆ ನೀಡುವಂತೆ ಇಂತಹ ಮಾದರಿಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಬೇಕೆಂದು ಉಸ್ತುವಾರಿ ಕಾರ್ಯದರ್ಶಿ ಹಾಗೂ ಕೃಷಿ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ ಮೀನಾ ಅವರು ಹೇಳಿದರು.
ಪಾಲಿಕೆ ವ್ಯಾಪ್ತಿಯಲ್ಲಿ ಉತ್ತಮ ರಸ್ತೆಗಳಾಗಿದ್ದು, ಒಳಚರಂಡಿ ಮತ್ತು ರಸ್ತೆ ಬದಿಗೆ ಇಂಟರ್ ಲಾಕ್ ಹಾಕುವ ಬಗ್ಗೆ, ಏರ್ಪೋರ್ಟವರೆಗಿನ ರಸ್ತೆಗೆ ಕಾಂಕ್ರೀಟ್ ಹಾಕುವ ಅನುದಾನ ಕುರಿತು ಉಸ್ತುವಾರಿ ಕಾರ್ಯದರ್ಶಿಗಳ ಗಮನಕ್ಕೆ ತರಲಾಯಿತು.
ಅನ್ನಭಾಗ್ಯ ಯೋಜನೆಯಡಿ ಅಕ್ಕಿ ವಿತರಣೆಗೆ ತೊಂದರೆ ಇಲ್ಲ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಉಪನಿರ್ದೇಶಕರು ಸ್ಪಷ್ಟಪಡಿಸಿದರು. ಬಿಪಿಎಲ್ ಕಾರ್ಡ್ ದಾರರು ಅಕ್ಕಿ ಪಡೆದುಕೊಂಡು ಹೊರಗಡೆ ಮಾರಾಟವಾದ ಪ್ರಕರಣಗಳು ಬಂದರೆ ಅಂತಹವರ ಕಾರ್ಡ್ ಗಳನ್ನು ರದ್ದುಪಡಿಸುವುದಲ್ಲದೆ ಕಾನೂನಿನಡಿ ಕ್ರಮಕೈಗೊಳ್ಳಲು ಕಾರ್ಯದರ್ಶಿಗಳು ಸೂಚನೆ ನೀಡಿದರು.  ಹಾಸ್ಟೆಲ್ ಗಳಿಗೆ 381 ಟನ್ ಅಕ್ಕಿ ಪೂರೈಕೆ ಮಾಡಲಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದರು.
ಮುಂದಿನ ಎರಡು ವಾರಗಳೊಳಗಾಗಿ ಕಾರ್ಮಿಕ ಇಲಾಖೆ ಅಧಿಕಾರಿಗಳು ಮಹಾನಗರಪಾಲಿಕೆ ಆಯುಕ್ತರು ಮತ್ತು ಉಪವಿಭಾಗಾಧಿಕಾರಿಗಳ ನೆರವಿನೊಂದಿಗೆ ನಗರದ ಬಹುಮಹಡಿಗಳ ಕಾರ್ಮಿಕರಲ್ಲಿ ಗುರುತು ಪತ್ರ ಇರುವ ಕುರಿತು ಪರಿಶೀಲನೆ ಮತ್ತು ಇಲ್ಲದವರಿಗೆ ಗುರುತುಪತ್ರ ನೀಡುವ ಬಗ್ಗೆ ಆಂದೋಲನ ಮಾದರಿಯಲ್ಲಿ ಕ್ರಮಕೈಗೊಂಡು ಗುರುತುಪತ್ರ ಪೂರೈಸಬೇಕೆಂದು ಸೂಚನೆ ನೀಡಿದರು.
ನೆರೆಹಾವಳಿಯಡಿ ಜಿಲ್ಲೆಗೆ 1.60 ಕೋಟಿ ರೂ.ಅನುದಾನ ಬಿಡುಗಡೆಯಾಗಿದ್ದು ಅರ್ಹರಿಗೆ ಪರಿಹಾರ ತಕ್ಷಣವೇ ನೀಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಶ್ರೀ ಕೆ ಎ ದಯಾನಂದ ಅವರು ಮಾಹಿತಿ ನೀಡಿದರು. ಇದಲ್ಲದೆ ವಿಕೋಪ ಪರಿಹಾರವನ್ನು ಹೆಚ್ಚಿಸಲಾಗಿದ್ದು, ಪಕ್ಕಾ ಮನೆಗೆ 70,000 ರೂ. ಹಾಗೂ ಕೃಷಿ ಬೆಳೆ ಹಾನಿಗೆ ಹೆಕ್ಟೇರ್ ಗೆ 4,500 ರೂ.ಗಳನ್ನು ನೀಡುವ ಸಂಬಂಧ ಹೊಸ ಆದೇಶ ಬಂದಿದೆ ಎಂದು ವಿವರಿಸಿದರು.
ಸಾಮಾಜಿಕ ಭದ್ರತಾ ಯೋಜನೆಯಡಿ 72,110 ಫಲಾನುಭವಿಗಳಿದ್ದಾರೆ ಎಂದು ಅಪರ ಜಿಲ್ಲಾಧಿಕಾರಿಗಳು ನುಡಿದರು. ಜಿಲ್ಲೆಯಲ್ಲಿ ಶೇಕಡ 91 ಬಿತ್ತನೆಯಾಗಿದ್ದು, ರಸಗೊಬ್ಬರ ಪೂರೈಕೆಯಲ್ಲಿ ತೊಂದರೆ ಇಲ್ಲ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದರು.  ಬೆಳೆ ಹಾನಿ ಬಗ್ಗೆ ಸವಿವರ ವರದಿ ಸಿದ್ಧಪಡಿಸಿ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ವ್ಯಾಪ್ತಿಯಡಿ ಬರುವ ಯೋಜನೆಗಳ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಸಿಇಒ ಶ್ರೀಮತಿ ತುಳಸಿ ಮದ್ದಿನೇನಿ ಅವರು ಮಾಹಿತಿ ನೀಡಿ ವಸತಿ ಯೋಜನೆ ಅನುಷ್ಠಾನಕ್ಕೆ ಕ್ರಮಕೈಗೊಳ್ಳಲಾಗುವುದು ಎಂದರು. ಸುವರ್ಣ ಗ್ರಾಮಕ್ಕೆ ಸಂಬಂಧಿಸಿದಂತೆ ಯೋಜನೆ ರೂಪಿಸಲಾಗಿದೆ. ಪಿಎಂಜಿಎಸ್ವೈಯಡಿ 200 ಕಿ.ಮೀ ಒಟ್ಟು ಜಿಲ್ಲೆಗೆ ತಾಲೂಕಿಗೆ 40 ಕಿ.ಮೀ ಹಾಗೆ ರಸ್ತೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಮಹಾತ್ಮಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಕಾಯಿದೆಯಡಿ ರೈತರ ಅನುಕೂಲಕ್ಕೆ ವೈಯಕ್ತಿಕ ಮತ್ತು ಸಾಮೂಹಿಕ ಕಾಮಗಾರಿಗಳ ಸೇರ್ಪಡೆ ಬಗ್ಗೆ ಕಾರ್ಯದರ್ಶಿಗಳು ಸಲಹೆಗಳನ್ನು ನೀಡಿದರು.
ಕ್ಷೀರಭಾಗ್ಯ ಯೋಜನೆಯಡಿ ಹಾಲಿನಪುಡಿಗೆ 3,800 ಕೆ.ಜಿ.ಬೇಡಿಕೆ ಇಡಲಾಗಿದ್ದು, 2345 ಕೆ. ಜಿ  ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿಕಾರಿಗಳು ಹೇಳಿದರು ಸಭೆಯಲ್ಲಿ ಜಿಲ್ಲಾಧಿಕಾರಿ ಎನ್ ಪ್ರಕಾಶ್, ಉಪಸ್ಥಿತರಿದ್ದರು. 

Thursday, August 15, 2013

ದ.ಕ. 67ನೇ ಸ್ವಾತಂತ್ರೋತ್ಸವದ ಸಂಭ್ರಮ

ಮಂಗಳೂರು, ಆಗಸ್ಟ್.15:  67ನೇ ಸ್ವಾತಂತ್ರೋತ್ಸವ ಮಂಗಳೂರಿನಲ್ಲಿಂದು ಸಂಭ್ರಮ ಸಡಗರಗಳಿಂದ ಆಚರಿಸಲಾಯಿತು.ನಗರದ ನೆಹರು ಮೈದಾನಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ರಮಾನಾಥ ಅವರು ಧ್ವಜಾರೋಹಣ ನೆರವೇರಿಸಿ ,ಗೌರವ ವಂದನೆ ಸ್ವೀಕರಿಸಿದರು.
 ಬಳಿಕ ಸ್ವಾತಂತ್ರೋತ್ಸವ ಸಂದೇಶ ನೀಡಿದ ಉಸ್ತುವಾರಿ ಸಚಿವರು, 2014-15ರ ಬಜೆಟ್ ಮಂಡಿಸುವ  ವೇಳೆ ರಾಜ್ಯ ಸರಕಾರವು ನೂತನ ಕೈಗಾರಿಕಾ ನೀತಿ-2013 ಅನ್ನು ಜಾರಿಗೆ ತರಲಿದೆ ಎಂದರು.
ಈ ಬಾರಿಯ ಬಜೆಟ್ನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ ಎಂದು ತಿಳಿಸಿದ ಅವರು, ಬಜೆಟ್ ನಲ್ಲಿ ತಿಳಿಸಿರುವಂತೆ ಮಂಗಳೂರಿನಲ್ಲಿ ಅಬ್ದುಲ್ ನಜೀರ್ ಸಾಬ್ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಪ್ರಾದೇಶಿಕ ತರಬೇತಿ ಕೇಂದ್ರ ಸ್ಥಾಪನೆ ಹಾಗೂ ಮಂಗಳೂರು ಕೇಂದ್ರ ಸ್ಥಾನದಲ್ಲಿ ಪೊಲೀಸ್ ಸಾರ್ವಜನಿಕ ಶಾಲೆಯ ಮಾದರಿಯ ಶಾಲೆಯನ್ನು ಪ್ರಾರಂಭಿಸಲಾಗುವುದು ಎಂದರು.
ಸಮಾಜ ಸುಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರಿನಲ್ಲಿ ಪೀಠ ಸ್ಥಾಪಿಸುವ ಹಿನ್ನಲೆಯಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಅಧ್ಯಯನ ಕೇಂದ್ರ ಸ್ಥಾಪಿಸಲು ಎರಡು ಕೋಟಿ ರೂ. ಅನುದಾನ ಮೀಸಲಿರಿಸಲಾಗಿದೆ. ಮಂಗಳೂರು ವಿಶ್ವವಿದ್ಯಾಲಯದಲ್ಲಿ ಜೈನ ಕವಿ ರತ್ನಾಕರವರ್ಣಿ ಅಧ್ಯಯನ ಪೀಠ ಆರಂಭ ಹಾಗೂ ಮೂಡಬಿದರೆಯಲ್ಲಿ ಜೈನ ಕವಿ ರತ್ನಾಕರ ವಣರ್ಿ ಜಯಂತಿ ಆಚರಣೆಗೆ ಆರ್ಥಿಕ ನೆರವನ್ನು ಸಹ ಈ ಬಾರಿಯ ಬಜೆಟ್ನಲ್ಲಿ ಘೋಷಿಸಲಾಗಿದೆ.  ತುಳು ಮತ್ತು ಬಿಲ್ಲವ ಸಮಾಜದ ಆರಾಧ್ಯ ದೈವವಾದ ಕೋಟಿ ಚನ್ನಯ್ಯನವರ ಜನ್ಮಸ್ಥಳವಾದ ಪುತ್ತೂರು ತಾಲೂಕಿನ ಪಡುಮಲೆಯಲ್ಲಿ ಅವರು ಹುಟ್ಟಿ ಬೆಳೆದ ಕುರುಹುಗಳನ್ನು ಅಭಿವೃದ್ಧಿಪಡಿಸಲು 5 ಕೋಟಿ ರೂ. ನೀಡಲಾಗಿದೆ. ಕರಾವಳಿ ಮೀನುಗಾರಿಕೆಗೆ ಅತೀ ಅಗತ್ಯವಿರುವ ಮೀನುಗಾರಿಕೆ ಬಂದರನ್ನು ಮಂಗಳೂರಿನ ಕುಳಾಯಿಯಲ್ಲಿ ನಿರ್ಮಿಸಲು ಉದ್ದೇಶಿಸಲಾಗಿದೆ. ರಾಜ್ಯದ ಮೀನುಗರಿಕಾ ಇಲಾಖಾ ಕಾರ್ಯಕ್ರಮಕ್ಕಾಗಿ 2013-14ನೇ ಸಾಲಿಗೆ 229 ಕೋಟಿ ರೂ.ಗಳನ್ನು ಒದಗಿಸಲಾಗಿದೆ ಎಂದು ಹೇಳಿದರು. 
ಅನ್ನ ಭಾಗ್ಯ, ಕ್ಷೀರ ಭಾಗ್ಯ, ಹಾಲಿಗೆ ಪೋತ್ಸಾಹ ಧನ, ಅಲ್ಪಸಂಖ್ಯಾತರ ಕಲ್ಯಾಣ ಕೋಶ, ವಿದ್ಯುತ್ ಬಾಕಿ ಮನ್ನಾ, ಸೇರಿದಂತೆ ರೈತರು, ಬಡವರು, ಅಲ್ಪಸಂಖ್ಯಾತರು ಸೇರಿದಂತೆ ಜನಪರ ಯೋಜನೆಗಳು, ಸಹಕಾರಗಳ ಮೂಲಕ ರಾಜ್ಯ ಸರಕಾರ ರಾಜ್ಯವನ್ನು ಗುಡಿಸಲು ರಹಿತ ರಾಜ್ಯವನ್ನಾಗಿ ರೂಪಿಸುವ ಗುರಿಯನ್ನು ಹೊಂದಿದೆ. 2017ರ ಅವಧಿಗೆ ವಿದ್ಯುತ್ ವಲಯದಲ್ಲಿ ಸಂಪೂರ್ಣ ಸ್ವಾವಲಂಬನೆಯನ್ನು ಸಾಧಿಸುವ ಬದ್ಧತೆಯನ್ನು ಸರಕಾರ ಹೊಂದಿದೆ ಎಂದರು. 
ಜನಪರ ನೀತಿ ಮತ್ತು ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಮೂಲಕ ಕನರ್ಾಟಕವನ್ನು  ಪ್ರಗತಿಯ ಪಥಕ್ಕೆ ಕೊಂಡೊಯ್ಯುವ ವಿಶ್ವಾಸ ಸರಕಾರದ್ದಾಗಿದ್ದು, ಕಳೆದ ಎರಡು ತಿಂಗಳ ಅವಧಿಯಲ್ಲಿ ನಾವು ಜಾರಿಗೊಳಿಸಿರುವ ಹಲವಾರು ಜನಪರ ಕಾರ್ಯಕ್ರಮಗಳು ಜನತೆಯ ಸಮಸ್ಯೆಗಳನ್ನು ನಿವಾರಿಸುವಲ್ಲಿ ಸರಕಾರದ ಕಾಳಜಿ ಮತ್ತು ಬದ್ಧತೆಗೆ ದಿಕ್ಸೂಚಿ ಎಂದು ಉಸ್ತುವಾರಿ ಸಚಿವರು ನುಡಿದರು. ದೇಶ ಹಾಗೂ ರಾಜ್ಯದ ಸಾಂಸ್ಕೃತಿಕ ಹಾಗೂ ಪಾರಂಪರಿಕ ಜನಜೀವನದಲ್ಲಿ ಕೊರಗ ಸಮುದಾಯದ ಪಾತ್ರ ಅಮೂಲವಾಗಿರುವ ಹಿನ್ನೆಲೆಯಲ್ಲಿ ಮೂಲ ನಿವಾಸಿಗಳಿಗೆ ಸೂಕ್ತ ಮೂಲಭೂತ ಸೌಲಭ್ಯ ಒದಗಿಸುವುದರೊಂದಿಗೆ ಅವರನ್ನು ರಾಷ್ಟ್ರೀಯ ಮುಖ್ಯವಾಹಿನಿಗೆ ತರುವ ಉದ್ದೇಶದೊಂದಿಗೆ ದ.ಕ. ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವೆಬ್ ಸೈಟ್ www.itdpdk.com  ನ ಅನಾವರಣ ಹಾಗೂ ಕೊರಗ ಸಮುದಾಯದ ನಾಲ್ವರಿಗೆ ಸಾಂಕೇತಿಕವಾಗಿ ಗುರುತಿನ ಚೀಟಿಯನ್ನು ರಾಜ್ಯ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ವಿತರಿಸಿದರು
ಕಾರ್ಯಕ್ರಮದಲ್ಲಿ ಯೆನೆಪೊಯ ಶಾಲೆಯ 3ನೆ ತರಗತಿಯ ಪ್ರತಿಭಾನ್ವಿತ ವಿದ್ಯಾರ್ಥಿ, ರಾಜ್ಯ ಹಾಗೂ ರಾಷ್ಟ್ರ ಮಟ್ಟಗಳಲ್ಲಿ ಹಲವಾರು ಪ್ರಶಸ್ತಿ ಪುರಸ್ಕಾರಗಳನ್ನು ಪಡೆದಿರುವ  ನೇಸರ ಆರ್. ಪೂಜಾರಿ ಅವರನ್ನು ಸಚಿವರು ಸನ್ಮಾನಿಸಿದರು.
ಇದೇ ವೇಳೆ ಪಥಸಂಚಲನದಲ್ಲಿ ಅತ್ಯುತ್ತಮ ನಿರ್ವಹಣೆ ತೋರಿದಕ್ಕಾಗಿ ಎನ್ ಸಿ ಸಿ ಏರ್ ವಿಂಗ್ ಸೀನಿಯರ್ ವಿಭಾಗಕ್ಕೆ ಪ್ರಥಮ ಹಾಗೂ ಅಳಿಕೆ ಶ್ರೀ ಸತ್ಯಸಾಯಿ ಬ್ಯಾಂಡ್ ತಂಡಕ್ಕೆ ದ್ವಿತೀಯ ಬಹುಮಾನ ನೀಡಿ ಗೌರವಿಸಲಾಯಿತು.
ಕಾರ್ಕಳದ ಇಂಡಿಯನ್ ಏರೋ ಮಾಡಲಿಂಗ್ ಸೊಸೈಟಿಯ ರತ್ನಾಕರ ನಾಯಕ್ ಅವರ ಪುಟಾಣಿ ಮಾದರಿ ಹೆಲಿಕಾಪ್ಟರ್ ಗ ಳು ನೆಹರೂ ಮೈದಾನದಲ್ಲಿ ಹಾರಾಟ ನಡೆಸುತ್ತಾ ಅಲ್ಲಿ ಸೇರಿದ್ದ ಶಾಲಾ ಮಕ್ಕಳು ಹಾಗೂ ಪ್ರೇಕ್ಷಕರನ್ನು ರಂಜಿಸಿತು. 
ಬಿಷಪ್ ಡಾ. ಅಲೋಶಿಯಸ್ ಪಾವ್ಲ್ ಡಿಸೋಜಾ, ಸಂಸದ ನಳಿನ್ ಕುಮಾರ್ ಕಟೀಲ್, ಶಾಸಕರಾದ ಮೋನಪ್ಪ ಭಂಡಾರಿ, ಜೆ.ಆರ್. ಲೋಬೋ, ಜಿ.ಪಂ. ಅಧ್ಯಕ್ಷ ಕೊರಗಪ್ಪ ನಾಯ್ಕ, ತಾಲೂಕು ಪಂಚಾಯತ್ ಅಧ್ಯಕ್ಷ ಹರೀಶ್ ಕುಮಾರ್, ಜಿ.ಪಂ. ಜಿಲ್ಲಾಧಿಕಾರಿ ಎನ್. ಪ್ರಕಾಶ್, ಅಪರ ಜಿಲ್ಲಾಧಿಕಾರಿ ದಯಾನಂದ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ತುಳಸಿ ಮದ್ದಿನೇನಿ, ಪಶ್ಚಿಮ ವಲಯ ಐಜಿಪಿ ಪ್ರತಾಪ್ ರೆಡ್ಡಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ಗೋಯಲ್, ಪೊಲೀಸ್ ಆಯುಕ್ತ ಮನೀಶ್ ಕರ್ಬೀಕರ್ ಮೊದಲಾದವರು ಉಪಸ್ಥಿತರಿದ್ದರು. 

ಪಚ್ಚನಾಡಿ ತ್ಯಾಜ್ಯ ಸಮಸ್ಯೆ ಪರಿಹರಿಸಲು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸಭೆ


ಮಂಗಳೂರು,ಆಗಸ್ಟ್ 15: ಒಂದು ವಾರದೊಳಗೆ ಜಿಲ್ಲಾಧಿಕಾರಿಗಳು ಪಚ್ಚನಾಡಿ ಪ್ರದೇಶಕ್ಕೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿಯನ್ನು ಅಧ್ಯಯನ ಮಾಡಿ ತ್ಯಾಜ್ಯ ವಿಲೇ ಸಮಸ್ಯೆಗೆ ವೈಜ್ಞಾನಿಕ ಪರಿಹಾರ ನೀಡಲು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ  ಹಾಗೂ ಜೀವಿಶಾಸ್ತ್ರ ಸಚಿವರು ಆಗಿರುವ  ಬಿ. ರಮಾನಾಥ ರೈ ಅವರು ಸೂಚನೆ ನೀಡಿದರು.
          ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ಈ ಸಂಬಂಧ ಶಾಸಕರು, ಮಹನಗರಪಾಲಿಕೆ ಅಧಿಕಾರಿಗಳು ಮತ್ತು ಸಂಬಂಧಪಟ್ಟ ಪಾಲಿಕೆ ಸದಸ್ಯರೊಂದಿಗೆ ಸಭೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲರ ಸಲಹೆಗಳನ್ನು, ಸಮಸ್ಯೆಗಳನ್ನು ಆಲಿಸಿದ ಬಳಿಕ ಮೇಲಿನ ನಿರ್ಧಾರವನ್ನು ಪ್ರಕಟಿಸಿದರು.
ಮಹಾನಗರಪಾಲಿಕೆ ಆಯುಕ್ತರು ಪ್ರಸಕ್ತ ಅಲ್ಲಿ ತ್ಯಾಜ್ಯ ವಿಲೇಗೆ ಗುತ್ತಿಗೆ ಪಡೆದಿರುವ ಹಾಗೂ ಸಮಸ್ಯೆಗಳ ಇತ್ಯರ್ಥಕ್ಕೆ ಅಗತ್ಯವಿರುವ ಕುಂದುಗಳನ್ನು ನಿವಾರಿಸಬೇಕೆಂದು ಜಿಲ್ಲಾ ಉಸ್ತುವಾರಿ ಸಚಿವರು ನುಡಿದರು. ಮನೆ ಮನೆ ಕಸ ಸಂಗ್ರಹ ಹಾಗೂ ಕಸವಿಭಜನೆಯನ್ನು ಮನೆಯಿಂದಲೇ ಆರಂಭಿಸುವ ಬಗ್ಗೆ ಜನರಲ್ಲಿ ಇನ್ನೂ ಹೆಚ್ಚಿನ ಜಾಗೃತಿ ಮೂಡಿಸಬೇಕೆಂದು ಸಚಿವರು ಹೇಳಿದರು. ಈ ಬಗ್ಗೆ ಮಹಾನಗರಪಾಲಿಕೆ ಆಯುಕ್ತರು ಮಾಧ್ಯಮದವರ ಸಹಕಾರ ಪಡೆಯಬೇಕೆಂದು ಸಚಿವರು ಹೇಳಿದರು. ಅರಣ್ಯ ಇಲಾಖೆಗೆ 4000 ಮರಗಳನ್ನು ಅದರಲ್ಲೂ ಆಮ್ಲಜನಕ ಹೆಚ್ಚಿಗೆ ಉತ್ಪಾದಿಸುವ ಉತ್ತಮ ಮರಗಳನ್ನು ಈ ಪ್ರದೇಶದಲ್ಲಿ ಬೆಳೆಸಲು ಸಚಿವರು ನಿರ್ದೇಶನ ನೀಡಿದ್ದು, ಮಹಾಗಣಿಯಂತಹ ಸಸಿಗಳನ್ನು ಈಗಾಗಲೇ ಅರಣ್ಯ ಇಲಾಖೆ ಬೆಳೆಸಲು ಅಲ್ಲಿ ಆರಂಭಿಸಿದೆ ಎಂದಸುತ್ತಮುತ್ತಲ ಪ್ರದೇಶಗಳ ಜನರಿಗೆ ತ್ಯಾಜ್ಯ ವಿಲೇ ಘಟಕದಿಂದ ಆರೋಗ್ಯಕ್ಕೆ ತೊಂದರೆಯಾದ ಸಂದರ್ಭದಲ್ಲಿ ಪಾಲಿಕೆಯ ಆರೋಗ್ಯ ವಿಭಾಗ ತುತರ್ಾಗಿ ಸ್ಪಂದಿಸಬೇಕು. ಜನರ ಸಮಸ್ಯೆಗಳನ್ನು ಆಲಿಸಿ, ಸೂಕ್ತವಾಗಿ ಸ್ಪಂದಿಸಿ ಎಂದು ಸಚಿವರು ಸೂಚಿಸಿದರು.
ಸುತ್ತಮುತ್ತಲ ಪ್ರದೇಶಗಳು ಕಲುಷಿತಗೊಳ್ಳದಂತೆ ತಡೆಯಲು ಹಾಗೂ ವಾಸನೆಯನ್ನು ತಡೆಯಲು ಬಯೋ ಎನ್ಜೈಮ್ಸ್ ಬಳಕೆ ಅನಿವಾರ್ಯ. ಇನ್ನು ಮುಂದೆಯೂ ಕಸದ ಮೇಲೆ ಮಣ್ಣು ಹಾಕಿ ಮುಚ್ಚುವ ಪ್ರಕ್ರಿಯೆಯನ್ನೇ ಮುಂದುವರಿಸಿದರೆ ಕಸ ಹಾಕಲು ಸ್ಥಳದ ಕೊರತೆ ಉದ್ಭವವಾಗಲಿದೆ. ಪ್ರತಿದಿನಕ್ಕೆ ಇಲ್ಲಿಗೆ 250ರಿಂದ 300 ಟನ್ ಕಸ ಬರುತ್ತಿದ್ದು, ಪ್ರತಿ ಪುರಸಭೆಗಳಲ್ಲಿ ಅಲ್ಲಿನ ಕಸ ಅಲ್ಲೇ ವಿಲೇ ಆಗುವಂತೆ ಕಠಿಣ ಕ್ರಮ ಕೈಗೊಳ್ಳಬೇಕಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲಾಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪರಿಸರ ಅಧಿಕಾರಿಗಳು ತಮ್ಮ ಅಧಿಕಾರವನ್ನು ಉಪಯೋಗಿಸಿ ಸಮಸ್ಯೆಗಳ ಪರಿಹಾರಕ್ಕೆ ಪೂರಕ ನೆರವು ನೀಡಬೇಕೆಂದು ಉಸ್ತುವಾರಿ ಸಚಿವರು ಹೇಳಿದರು. ತ್ಯಾಜ್ಯ ವಿಲೇ ಆಗಲೇಬೇಕು. ಹಾಗಾಗಿ ವೈಜ್ಞಾನಿಕ ತ್ಯಾಜ್ಯ ವಿಲೇಗೆ ಪಚ್ಚನಾಡಿ ಮಾದರಿ ಆಗಲಿ. ಜಿಲ್ಲಾಧಿಕಾರಿಗಳಿಗೆ ಈ ಸಂಬಂಧ ಎಲ್ಲ ನಿರ್ಧಾರ ಕೈಗೊಳ್ಳಲು ಎಲ್ಲ ಅಧಿಕಾರವನ್ನು ನೀಡಲಾಗಿದೆ ಎಂದು ಉಸ್ತುವಾರಿ ಸಚಿವರು ಸ್ಪಷ್ಟಪಡಿಸಿದರು.  ಸಭೆಯಲ್ಲಿ ಶಾಸಕರಾದ ಜೆ ಆರ್ ಲೋಬೋ, ಮೊಹಿಯುದ್ದಿನ್ ಬಾವಾ, ಅಪರ ಜಿಲ್ಲಾಧಿಕಾರಿ ದಯಾನಂದ ಕೆ. ಎ., ಪಾಲಿಕೆ ಆಯುಕ್ತರಾದ ಶಾನಾಡಿ ಅಜಿತ್ ಹೆಗ್ಡೆ, ಡಿಸಿಎಫ್ ಪಾಲಯ್ಯ, ವಲಯ ಅರಣ್ಯ ಸಂರಕ್ಷಣಾಧಿಕಾರಿ ಶಾಂತಪ್ಪ ಮತ್ತು ವಲಯ ಆಯುಕ್ತರಾದ ಶ್ರೀಮತಿ ಪ್ರಮೀಳಾ, ಪರಿಸರ ಅಧಿಕಾರಿಗಳು, ಡಾ. ಸುದರ್ಶನ್, ಪರಿಸರ ಅಧಿಕಾರಿ, ಕಾರ್ಪೋರೇಟರ್ ಗಳು ಪಾಲ್ಗೊಂಡಿದ್ದರು.

Wednesday, August 14, 2013

ಕೃಷಿಕರಿಗೆ ಸೌಲಭ್ಯ ತಲುಪಿಸಿ: ಕೊರಗಪ್ಪ ನಾಯಕ್

ಮಂಗಳೂರು ಆಗಸ್ಟ್ 14 :- ಜಿಲ್ಲೆಯಲ್ಲಿ ಒಟ್ಟು 813 ಕಿಂಡಿ ಅಣೆಕಟ್ಟುಗಳಿದ್ದು 230 ಕಿಂಡಿ ಅಣೆಕಟ್ಟುಗಳು ದುರಸ್ತಿಯಾಗಬೇಕಿವೆ ಎಂದು ಜಿಲ್ಲಾ ಜಲಾನಯನ ಅಧಿಕಾರಿಗಳು ಮಾಹಿತಿ ನೀಡಿದರು.
ಕೃಷಿ ಪ್ರದಾನ ದೇಶ ನಮ್ಮದು. ನಮ್ಮ ಜಿಲ್ಲೆಯಲ್ಲೂ ಕೃಷಿಗೆ ಆದ್ಯತೆ ನೀಡಲಾಗುತ್ತಿದ್ದು, ಕೃಷಿ ಸೌಲಭ್ಯಗಳನ್ನು ಕೃಷಿಕರಿಗೆ ಒದಗಿಸುವ ಬಗ್ಗೆ ಉದಾಸೀನ ಮಾಡದೆ ತಲುಪಿಸುವ ಕೆಲಸಗಳನ್ನು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಮಾಡಬೇಕೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೊರಗಪ್ಪ ನಾಯ್ಕ್ ಅವರು ಆದೇಶಿಸಿದರು.
ಇಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನಲ್ಲಿ ಜರುಗಿದ ಕೆಡಿಪಿ ಮಾಸಿಕ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದ ಅವರು, ಜಲಾನಯನ ಇಲಾಖೆಗಳ ಕಿಂಡಿ ಅಣೆಕಟ್ಟು/ ಚೆಕ್ ಡ್ಯಾಂಗಳು ನಿರ್ವಹಣೆಯಿಲ್ಲದೆ ದುಸ್ತಿತಿಯಲ್ಲಿದ್ದು, ಈ ಯೋಜನೆಗಳ ಸಮರ್ಪಕ ನಿರ್ವಹಣೆಯಿಂದ ನೂರಾರು ಕೃಷಿಕರಿಗೆ ನೆರವಾಗಲಿದೆ. ಹೊಸ ಯೋಜನೆಗಳ ಬದಲು ನಿರ್ವಹಣೆಗೆ ಆದ್ಯತೆ ನೀಡಿ ಎಂದು ಅಧ್ಯಕ್ಷರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮಕ್ಕೆ ಸಂಬಂಧಿಸಿದಂತೆ ಗಂಗಾ ಕಲ್ಯಾಣ ಯೋಜನೆಯಡಿ 11-12 ನೇ ಸಾಲಿನಲ್ಲಿ 66 ಕೊಳವೆ ಬಾವಿಗಳನ್ನು ಕೊರೆಯಲು ಬಾಕಿ ಇದ್ದು, ಇವುಗಳನ್ನು ಅಕ್ಟೋಬರ್ ಅಂತ್ಯದ ವೇಳೆಗೆ ಸಂಪೂರ್ಣಗೊಳಿಸಲಾಗುವುದು. 12-13ನೇ ಸಾಲಿಗೆ ಕೊಳವೆ ಬಾವಿ ಕೊರೆಯಲು ಗುತ್ತಿಗೆದಾರರ ನೇಮಕವಾಗಿದ್ದು, ಶೀಘ್ರವೇ ಕಾಮಗಾರಿ ಆರಂಭವಾಗಲಿದೆ ಎಂದು ಅಧಿಕಾರಿಗಳು ಅಧ್ಯಕ್ಷರಿಗೆ ಮಾಹಿತಿ ನೀಡಿದರು.
ಕಾರ್ಮಿಕ ಇಲಾಖೆ ಅಧಿಕಾರಿಗಳು ಗ್ರಾಮಪಂಚಾಯತ್ನ ಗ್ರಾಮಸಭೆಗೆ ಹಾಜರಾಗುತ್ತಿಲ್ಲ ಎಂಬ ದೂರಿನ ಬಗ್ಗೆ ಅಧ್ಯಕ್ಷರು ಮಾಹಿತಿ ಕೋರಿ, ನಗರದಲ್ಲಿ ಮಾತ್ರ ಇಲಾಖೆಯು ಕರ್ತವ್ಯ ನಿರ್ವಹಿಸದೆ ಗ್ರಾಮೀಣ ಪ್ರದೇಶದ ನಾಗರೀಕರ ಬಗ್ಗೆಯೂ ಇದೇ ಬಗೆಯ ಹಿತಾಸಕ್ತಿಯನ್ನು ವಹಿಸಿಕೊಂಡು ಕಾರ್ಯೋನ್ಮುಖವಾಗಬೇಕೆಂದರು.
ಕೆಳಹಂತದ ಅಧಿಕಾರಿಗಳು ಗ್ರಾಮಸಭೆಗೆ ಹಾಜರಾಗುವುದನ್ನು ಖಾತ್ರಿ ಪಡಿಸಿಕೊಳ್ಳಿ ಎಂದು ಅಧ್ಯಕ್ಷರು ಅಧಿಕಾರಿಗಳಿಗೆ ಹೇಳಿದರು. ಗುರುತು ಚೀಟಿ ಹೊಂದಿರುವ ಕಾರ್ಮಿಕರಿಗೆ ಎಲ್ಲರೂ ಕೆಲಸ ನೀಡುವ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕೆಂದರು. ಕಾರ್ಮಿಕರು ಗುರುತುಚೀಟಿ ಹೊಂದಿರುವುದರಿಂದ ಅವಘಡಗಳು ನಡೆದಾಗ ಪರಿಹಾರ ನೀಡುವುದು ಸುಲಭ ಎಂದರು.
ಕ್ಷಯರೋಗದವರಿಗೆ ವಿಶೇಷ 10 ಹಾಸಿಗೆಗಳ ಸೌಲಭ್ಯ ವೆನ್ ಲಾಕ್ ಆಸ್ಪತ್ರೆಯಲ್ಲಿದ್ದು ಕ್ಷಯರೋಗಿಗಳಿಗೆ ಇಲ್ಲಿ ಶುಶ್ರೂಷೆ ನೀಡಲಾಗುವುದು ಎಂದು ಡಿಎಚ್ ಒ ಶಿವಕುಮಾರ್ ಉತ್ತರಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಪೌಷ್ಠಿಕ ಮಕ್ಕಳ ಬಗ್ಗೆ ಹೆಚ್ಚಿನ ಮುತುವರ್ಜಿ ವಹಿಸಬೇಕು.  ಬಾಲಸಂಜೀವಿನಿ ಯೋಜನೆಯಡಿ ಮಕ್ಕಳಿಗೆ ಚಿಕಿತ್ಸೆ ನೀಡುವ ಬಗ್ಗೆ ಮಾಹಿತಿ ನೀಡಬೇಕು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಲ್ಲ ಅಂಗನವಾಡಿಗಳಲ್ಲಿ ಲೈಟ್ ಮತ್ತು ಫ್ಯಾನ್ ತಿರುಗಿದ ಬಳಿಕವೇ ವಿದ್ಯುತ್ ಸಂಪರ್ಕ ಸಂಪೂರ್ಣ ಎಂಬ ವರದಿ ನೀಡಬೇಕು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಸೂಚಿಸಿದರು.
ಎಲ್ಲ ಶಾಲೆಗಳಲ್ಲಿ ಮಳೆನೀರು ಕೊಯ್ಲು ಕಾಮಗಾರಿ ನಿರ್ವಹಣೆ ಹಾಗೂ ಉಪಯೋಗದ ಬಗ್ಗೆ ಶಿಕ್ಷಣ ಇಲಾಖೆ, ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗದವರು ಸಮೀಕ್ಷೆ ಮಾಡಿ ವರದಿ ನೀಡಬೇಕೆಂದು ಅಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಗ್ರಾಮೀಣ ಪ್ರದೇಶಗಳಾದ ಸುಬ್ರಹ್ಮಣ್ಯ-ಕಡಬ- ಚಾರ್ಮಡಿಗೆ ಶಾಲಾ ವೇಳೆಯಲ್ಲಿ ಹೆಚ್ಚಿಗೆ ಬಸ್ ಹಾಕಬೇಕೆಂದು ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿಸಮಿತಿ ಅಧ್ಯಕ್ಷರಾದ ಶ್ರೀಮತಿ ಆಶಾ ತಿಮ್ಮಪ್ಪ ಗೌಡ ಅವರು ಒತ್ತಾಯಿಸಿದರು. ಶೀಘ್ರದಲ್ಲೇ ಬಸ್ ಗಳನ್ನು ಹಾಕುವುದಾಗಿ ಸಂಸ್ಥೆಯ ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.
ಆಶ್ರಯ ನಿವೇಶನಗಳು, ಬಸವವಸತಿ ಯೋಜನೆ, ಅಂಬೇಡ್ಕರ್ ಯೋಜನೆಗಳನ್ನು ಮುಖ್ಯವಾಹಿನಿಗೆ ತರಲು ಒಂದು ತಿಂಗಳು ವಿಶೇಷ ಗಮನಹರಿಸಿ ಸಮಸ್ಯೆ ನಿವಾರಿಸಲು ಯತ್ನಿಸಲಾಗುವುದು ಎಂದು ಸಿಇಒ ಹೇಳಿದರು. 2009-10ನೇ ಸಾಲಿನವರೆಗಿನ ಯೋಜನೆಗಳ ಬಗ್ಗೆ ನಿರ್ದೇಶನಾಲಯದಿಂದ ಸ್ಷಷ್ಟ ಸುತ್ತೋಲೆ ಬಂದಿದ್ದು ಎಲ್ಲ ಯೋಜನೆಗಳನ್ನು ರದ್ದು ಪಡಿಸಲಾಗುವುದು. ನಂತರದ ಸಾಲಿನ ಮನೆಗಳ ಬಗ್ಗೆ ಪರಿಶೀಲನೆ ನಡೆಸಿ ಕ್ರಮಕೈಗೊಳ್ಳಲಾಗುವುದು ಎಂದು ಸಿಇಒ ಸ್ಪಷ್ಟಪಡಿಸಿದರು.
ಅನ್ನಭಾಗ್ಯ ಯೋಜನೆ ಬಗ್ಗೆ ಜಿಲ್ಲೆಯಲ್ಲಿ 1,87,000 ಫಲಾನುಭವಿಗಳಿದ್ದು, 5,100 ಟನ್ ಅಕ್ಕಿ ಎತ್ತುವರಿಯಾಗಿದೆ. 130ಟನ್ ಗೋಧಿ ವಿತರಣೆಯಾಗಿದೆ ಎಂದು ಆಹಾರ ಮತ್ತು ನಾಗರೀಕ ಪೂರೈಕೆ ಇಲಾಖೆ ಉಪನಿರ್ದೇಶಕರು ಮಾಹಿತಿ ನೀಡಿದರು.
8,000 ಎಪಿಎಲ್ ಮತ್ತು 8,000 ಬಿಪಿಎಲ್ ಪಡಿತರ ಚೀಟಿದಾರರ ಅರ್ಜಿ ಸ್ವೀಕರಿಸಲಾಗಿದೆ. ಬಿಪಿಎಲ್ ಗೆ ಅರ್ಹರಾಗಿರುವ ಪಡಿತರ ಚೀಟಿದಾರರು ಆನ್ ಲೈನ್ ನಲ್ಲಿ ಎಪಿಎಲ್ ಕಾಡ್ರ್  ಒಪ್ಪಿಸಿ ಅರ್ಜಿ ಹಾಕಬಹುದು ಎಂದು ಉಪನಿರ್ದೇಶಕರು ಸ್ಪಷ್ಟಪಡಿಸಿದರು.
ಕೃಷಿ ಇಲಾಖೆ, ಮೀನುಗಾರಿಕೆ ಬಗ್ಗೆ ಸಭೆಯಲ್ಲಿ ಚರ್ಚೆ ನಡೆಯಿತು. ಕೃಷಿ ಕ್ಷೇತ್ರದಲ್ಲಿ ದುಡಿಯುವ ಕಾರ್ಮಿಕರು ಕೂಲಿ ಮಾಡುವಾಗ ಅವಘಡ ಸಂಭವಿಸಿದರೆ ಆ ಭೂಮಿಯ ಆರ್ ಟಿ ಸಿ ಹಾಗೂ ದೃಢೀಕರಣದ ಮೇಲೆ ಅವರಿಗೆ ಪರಿಹಾರ ನೀಡುವ ಬಗ್ಗೆ ಚರ್ಚಿಸಲಾಯಿತು.
ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷ ಫಕೀರ, ಉಪಕಾರ್ಯದರ್ಶಿ ಉಮೇಶ್ ಎನ್ ಆರ್. ಉಪಸ್ಥಿತರಿದ್ದರು.

Tuesday, August 13, 2013

20 ದಿನದೊಳಗೆ ಬೆಳೆ ಹಾನಿ ವರದಿ ನೀಡಿ: ಕೊರಗಪ್ಪ ನಾಯ್ಕ

ಮಂಗಳೂರು,ಆಗಸ್ಟ್.13:- ಕಳೆದ ಮೂರು ತಿಂಗಳಿಂದ ಎಡೆಬಿಡದೆ ಸುರಿದ ಮಳೆಯಿಂದ ಜಿಲ್ಲೆಯಲ್ಲಿ ಅಡಿಕೆ ಬೆಳೆ ಸಂಪೂರ್ಣ ಕೊಳೆರೋಗಕ್ಕೆ ತುತ್ತಾಗಿದ್ದು, ಅಡಿಕೆ ಮತ್ತು ಭತ್ತದ ಬೆಳೆ ಹಾನಿಗೆ ಸಂಬಂಧಿಸಿದಂತೆ ಸಮಗ್ರ ವರದಿಯನ್ನು 20 ದಿನಗಳೊಳಗಾಗಿ ನೀಡುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖಾ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ  ಕೆ .ಕೊರಗಪ್ಪ ನಾಯ್ಕ್ ಅವರು ಸೂಚಿಸಿದರು.
ದ.ಕ. ಜಿಲ್ಲಾ ಪಂಚಾಯತ್  ನೇತ್ರಾವತಿ ಸಭಾಂಗಣದಲ್ಲಿ ಇಂದು ಅಧ್ಯಕ್ಷ ಕೊರಗಪ್ಪ ನಾಯ್ಕ್ ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಪಂಚಾಯತ್ನ 13ನೆ ಸಾಮಾನ್ಯ ಸಭೆಯಲ್ಲಿ ಅಡಿಕೆ ಕೊಳೆರೋಗದಿಂದ ಜಿಲ್ಲೆಯ ರೈತರು ಕಂಗೆಟ್ಟಿರುವ ಬಗ್ಗೆ ಸದಸ್ಯರು ಸಭಾಧ್ಯಕ್ಷರ ಗಮನ ಸೆಳೆದರು. ಅಡಿಕೆಯ ಫಸಲು ಮರದ ಮೇಲಿರದೆ ಅಡಿಕೆ ಗಿಡದ ಬುಡದಲ್ಲಿ ಹೆಕ್ಕುವ ಪರಿಸ್ಥಿತಿ ಬಂದಿದೆ. ಪರಿಹಾರ ನೀಡಲು ಕೇಂದ್ರ ಹಾಗೂ ರಾಜ್ಯ ಸಕರ್ಾರಕ್ಕೆ ಸಮೀಕ್ಷೆ ನಡೆಸಿ ಸಮಗ್ರ ವರದಿ ಸಲ್ಲಿಸಬೇಕು ಎಂದು ಸದಸ್ಯರು ಒತ್ತಾಯಿಸಿದರು.
ಕೃಷಿ ಸಂಶೋಧನಾ ಕೇಂದ್ರಗಳ ತಜ್ಞರ ಸಲಹೆ ರೈತರಿಗೆ ಈ ವೇಳೆಯಲ್ಲಿ ಅಗತ್ಯವಿದೆ. ಈ ನಡುವೆ ಬಯೋಫೈಟ್/ಬಯೊಪಾಟ್/ ಬಯೋಫಿಟ್ಟ್/ ಬಯೋಕ್ಯೂರ್ ಬಳಕೆಯ ಬಗ್ಗೆಯೂ ಹಲವು ಗೊಂದಲಗಳಿವೆ. ಈ ಬಗ್ಗೆ ತನಿಖೆ ನಡೆಸಿ ವರದಿ ನೀಡಲು ಕೃಷಿ ಹಾಗೂ ತೋಟಗಾರಿಕಾ ಇಲಾಖಾಧಿಕಾರಿಗಳಿಗೆ ಅಧ್ಯಕ್ಷರು ಸೂಚಿಸಿದರು.      ಕೃಷಿಕರಿಗೆ ನೆರವು ಹಾಗೂ ಸಮಗ್ರ ಮಾಹಿತಿ ಬೇಕಿದೆ. ಈಗಾಗಲೇ ಸಹಕಾರ ಸಂಘಗಳಿಂದ ರೈತರು ಸಾಲ ಪಡೆದಿದ್ದು, ಬಡ್ಡಿ ಮನ್ನಾ ಹಾಗೂ ಸಾಲ ಪಾವತಿಸಲು ರೈತರಿಗೆ ಕಾಲಾವಕಾಶ ಕೋರಿ ಜಿಲ್ಲಾ ಪಂಚಾಯತ್ನಲ್ಲಿ ನಿರ್ಣಯ ಮಾಡಿ ಸರ್ಕಾರಕ್ಕೆ, ಸಚಿವರುಗಳಿಗೆ ವರದಿ ನೀಡುವ ಬಗ್ಗೆ ಜಿಲ್ಲ ಪಂಚಾಯತ್ನಲ್ಲಿ ನಿರ್ಧರಿಸಲಾಯಿತು.
ರೈತರ ಹೆಸರು, ಎಕರೆ ಮತ್ತು ಎಷ್ಟು ಶೇಕಡ ಮಾದರಿ ವರದಿ ತಯಾರಿಸಿ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಅಧಿಕಾರಿಗಳಿಗೆ ಸೂಚಿಸಿದರು.
ಬಜಪೆ ಕಿನ್ನಿಗೋಳಿ ಸೊಸೈಟಿಗಳಲ್ಲಿ ರೈತರಿಗೆ ಅಗತ್ಯ ಗೊಬ್ಬರ ಲಭ್ಯವಿಲ್ಲ ಎಂಬ ದೂರಿಗೆ ಸ್ಪಂದಿಸಿದ ಸಿಇಒ ಅವರು, ರೈತರಿಗೆ ರಸಗೊಬ್ಬರ ಲಭ್ಯವಾಗಿಸಿ ಎಂದು ರಸ ಗೊಬ್ಬರ ಸರಬರಾಜು ಕಂಪೆನಿಗೆ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರಕ್ಕೆ ನೀಡುವ ಬಗ್ಗೆ ಸದಸ್ಯರ ಅಸಮಾಧಾನವನ್ನು ಗಮನಿಸಿದ ಸಿಇಒ ಅವರು 15 ದಿನಗಳೊಳಗೆ ನಿರ್ಮಿತಿ ಕೇಂದ್ರಕ್ಕೆ ನೀಡಿದ ಕಾಮಗಾರಿಗಳ ಪ್ರಗತಿಪರಿಶೀಲನೆ ನಡೆಸುವುದಾಗಿ ಹೇಳಿದರು. ಆದರೆ ಸದಸ್ಯರು ಅಂಗನವಾಡಿ ಕಾಮಗಾರಿಗಳನ್ನು ನಿರ್ಮಿತಿ ಕೇಂದ್ರದಿಂದ ಹಿಂಪಡೆದು ಜಿಲ್ಲಾ ಪಂಚಾಯತ್ ಇಂಜಿನಿಯರಿಂಗ್ ವಿಭಾಗಕ್ಕೆ ನೀಡಬೇಕೆಂದು ಒತ್ತಾಯಿಸಿದರು.
ಬಜಪೆ ಗ್ರಾಮಪಂಚಾಯತ್ ವ್ಯಾಪ್ತಿಯ ತೊಟ್ಟಿಲಗುರಿಯಲ್ಲಿ ನಿರಾಶ್ರಿತರಾದವರಿಗೆ ನ್ಯಾಯಒದಗಿಸುವ ಬಗ್ಗೆಯೂ ಸಭೆ ನಿರ್ಧರಿಸಿತು.  
ಬಸವ ವಸತಿ ಯೋಜನೆ ಸಂಬಂಧ ನಡೆದ ಸವಿವರ ಚರ್ಚೆಗೆ ಉತ್ತರಿಸಿದ ಸಿಇಒ ಶ್ರೀಮತಿ ತುಳಸಿ ಮದ್ದಿನೇನಿ, ವಸತಿ ಯೋಜನೆಗೆ ಸಂಬಂಧಿಸಿ 2009-10ನೆ ಸಾಲಿನ ಬಾಕಿ ಪ್ರಕರಣಗಳನ್ನು ಪೂರ್ಣಗೊಳಿಸಲು ಅಥವಾ ಅಂತಿಮಗೊಳಿಸಲು ನಿದರ್ೇಶನ ನೀಡಲಾಗಿದೆ. ಈ ಬಗ್ಗೆ ಪ್ರತಿವಾರ ಪ್ರಗತಿ ಪರಿಶೀಲನೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಒಟ್ಟಿನಲ್ಲಿ ವಸತಿ ಯೋಜನೆಗೆ ಸಂಬಂಧಿಸಿದ ಎಲ್ಲಾ ರೀತಿಯ ಗೊಂದಲಗಳನ್ನು ಮುಂದಿನ ಎರಡು ಮೂರು ತಿಂಗಳಲ್ಲಿ ನಿವಾರಿಸುವುದಾಗಿ ಹೇಳಿದರು.
ಡೆಂಗ್ಯು ಬಗ್ಗೆ ನಡೆದ ಚರ್ಚೆಗೆ ಉತ್ತರಿಸಿದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಶಿವಕುಮಾರ್, ದ.ಕ. ಜಿಲ್ಲೆಯಲ್ಲಿ ಡೆಂಗ್ಯುಗೆ ಐದು ಮಂದಿ ಬಲಿಯಾಗಿದ್ದು, 242 ಮಂದಿ ಶಂಕಿತ ಡೆಂಗ್ಯು ರೋಗಕ್ಕೆ ಒಳಗಾಗಿದ್ದರು ಎಂದು ತಿಳಿಸಿದರು. ಮೃತ ಕುಟುಂಬಗಳಿಗೆ ಪರಿಹಾರಕ್ಕಾಗಿ ಜುಲೈ 17ರಂದು ಮುಖ್ಯಮಂತ್ರಿ ಪರಿಹಾರ ನಿಧಿಗೆ ಪತ್ರ ಬರೆಯಲಾಗಿದೆ ಎಂದರು.
ಖಾಸಗಿ ಆಸ್ಪತ್ರೆಗಳಲ್ಲಿ ಡೆಂಗ್ಯುನಿಂದ ಮೃತಪಟ್ಟವರು ಹಾಗೂ ಚಿಕಿತ್ಸೆ ಪಡೆದವರ ಬಗ್ಗೆ ಜಿಲ್ಲಾ ಪಂಚಾಯತ್ನಲ್ಲಿ ಯಾವುದೇ ಮಾಹಿತಿ ಇಲ್ಲ ಎಂದು ಸದಸ್ಯರು ಸಭೆಯಲ್ಲಿ ಆಕ್ಷೇಪ ವ್ಯಕ್ತಪಡಿಸಿದರು. ಮಾತ್ರವಲ್ಲದೆ, ಪ್ರತಿ ತಾಲೂಕಿನ ಆರೋಗ್ಯ ಕೇಂದ್ರಗಳಲ್ಲೂ ಎಲಿಸಾ ಪರೀಕ್ಷಾ ವ್ಯವಸ್ಥೆಗೆ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಸಭೆಯಲ್ಲಿ ವ್ಯಕ್ತವಾಯಿತು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ಬಹುಗ್ರಾಮ ಕುಡಿಯುವ ನೀರಿನ ಯೋಜನೆ ವಿಳಂಬವಾಗುತ್ತಿರುವ ಬಗ್ಗೆ ತೀವ್ರ ಅಸಮಾಧಾನ ಸಭೆಯಲ್ಲಿ ವ್ಯಕ್ತವಾದ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ 20 ಯೋಜನೆಗಳಲ್ಲಿ 14 ಕುಡಿಯುವ ನೀರಿನ ಯೋಜನೆಗಳು ಪ್ರಗತಿಯಲ್ಲಿವೆ. ಕಿನ್ನಿಗೋಳಿ ಕುಡಿಯುವ  ನೀರಿನ ಯೋಜನೆಯನ್ನು ತಾವು ಭೇಟಿ ನೀಡಿ ಪರಿಶೀಲಿಸಿರುವುದಾಗಿ ಹೇಳಿದರಲ್ಲದೆ, ಈ ಯೋಜನೆಯಡಿ ಡಿಸೆಂಬರ್ ನಿಂದ ನೀರು ಪೂರೈಕೆ ಮಾಡಲಾಗುವುದು ಎಂದು ಹೇಳಿದರು.
ವೆನ್ಲಾಕ್ ಆಸ್ಪತ್ರೆ ಸೇರಿದಂತೆ ಸರಕಾರಿ ಆಸ್ಪತ್ರೆಗಳಲ್ಲಿ ಇದಕ್ಕುತ್ತರಿಸಿದ ಡಾ. ಶಿವಕುಮಾರ್, ತುರ್ತು ಸಂದರ್ಭಕ್ಕೆ ಮುಖ್ಯವಾಗಿ ಹಾವು ಹಾಗೂ ಹುಚ್ಚುನಾಯಿ ಕಡಿತದ ಲಸಿಕೆಗಳು ಪ್ರಾಥಮಿಕ ಆರೋಗ್ಯ ಕೇಂದ್ರಗಳಲಿ ಲಸಿಕೆಗಳು ಸದಾ ಲಭ್ಯವಿರುವಂತೆ ಆದೇಶ ನೀಡಲಾಗಿದೆ. ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ರಿತೇಶ್ ಶೆಟ್ಟಿ, ಸ್ಥಾಯಿ ಸಮಿತಿ ಅಧ್ಯಕ್ಷರಾದ ಆಶಾ ತಿಮ್ಮಪ್ಪ ಗೌಡ, ಜಯಶ್ರೀ, ಪಕೀರ ಉಪಸ್ಥಿತರಿದ್ದರು.
 

ರಾಷ್ಟ್ರಧ್ವಜ_ ಜಿಲ್ಲಾಧಿಕಾರಿಗಳ ಸೂಚನೆ

ಮಂಗಳೂರು, ಆಗಸ್ಟ್.13:-ದೇಶದ ಸ್ವಾತಂತ್ರ್ಯದ ಸಂಕೇತವಾದ ತ್ರಿವರ್ಣ ರಾಷ್ಟ್ರ ಧ್ವಜವನ್ನು ಎಲ್ಲೆಂದರಲ್ಲಿ ಮನಬಂದಂತೆ ಹಾರಿಸುತ್ತಿರುವುದು ದಕ್ಷಿಣಕನ್ನಡ  ಜಿಲ್ಲಾಧಿಕಾರಿಗಳ ಗಮನಕ್ಕೆ ಬಂದಿರುತ್ತದೆ. ದಿನಾಂಕ 26-1-2002 ರಂದು ಜಾರಿಗೆ ಬಂದಿರುವ  ನಿಯಮಗಳಂತೆ ರಾಷ್ಟ್ರಧ್ವಜವನ್ನು ಹಾರಿಸಲು ಎಲ್ಲಾ ಭಾರತೀಯರಿಗೆ, ಖಾಸಗಿ ಸಂಘ ಸಂಸ್ಥೆಗಳಿಗೆ.ಶಿಕ್ಷಣ ಸಂಸ್ಥೆಗಳಿಗೆ ಅವಕಾಶ ನೀಡಲಾಗಿದೆ. ಆದರೂ ಸಹ ರಾಷ್ಟ್ರಧ್ವಜಕ್ಕೆ ನೀಡಬೇಕಾದ ಗೌರವವನ್ನು ನೀಡಿ ಪಾವಿತ್ರ್ಯತೆಯನ್ನು ಕಾಪಾಡಬೇಕೆಂದು ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳು ಸೂಚಿಸಿರುತ್ತಾರೆ. ಅವರ ಸೂಚನೆಯಂತೆ ದಿನಾಂಕ 15-8-13 ರಂದು ಸೂರ್ಯೋದಯದ ನಂತರ ಹಾರಿಸಿದ ರಾಷ್ಟ್ರ ಧ್ವಜವನ್ನು ಸೂರ್ಯಾಸ್ತದ ಮೊದಲೇ ಇಳಿಸತಕ್ಕದ್ದು. ಹರಿದುಹೋದ,ಮಾಸಿದ,ಬಣ್ಣಹೋದ,ಕೊಳೆಯಾಗಿ ಸುಕ್ಕುಸುಕ್ಕಾದ ರಾಷ್ಟ್ರಧ್ವಜವನ್ನು ಹಾರಿಸಬಾರದು. ರಾಷ್ಟ್ರಧ್ವಜವನ್ನು ಸಾಮಾನ್ಯ ಬಟ್ಟೆಯೆಂದು ಬೇರೆ ಯಾವುದೇ ಉದ್ದೇಶಕ್ಕೆ  ಬಳಸಿದರೆ ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದಂತಾಗುತ್ತದೆ ಮತ್ತು ಅವರು ದಂಡನೆಗೆ ಅರ್ಹರಾಗುತ್ತಾರೆ.  ಪ್ಲಾಸ್ಟಿಕ್ ಧ್ವಜವನ್ನು ಬಳಸಬಾರದು. ಹಾರಿಸಿದ ರಾಷ್ಟ್ರಧ್ವಜವು ಸ್ಪಷ್ಟವಾಗಿ ಕಾಣುವಂತಿರಬೇಕು. ರಾಷ್ಟ್ರಧ್ವಜವನ್ನು ನೆಲಕ್ಕೆ ತಾಗಿಸಬಾರದು,ನೀರಿನಲ್ಲಿ ಬೀಳಿಸಬಾರದು.ಕರವಸ್ತ್ರ,ಟವೆಲ್,ಪ್ಯಾಕಿಂಗ್ ಸಾಮಾಗ್ರಿ ಮುಂತಾದ ಬಟ್ಟೆಗಳಲ್ಲಿ ರಾಷ್ಟ್ರಧ್ವಜವನ್ನು ಮುದ್ರಿಸಬಾರದು. ರಾಷ್ಟ್ರಧ್ವಜಕ್ಕೆ ಅವಮಾನ ಮಾಡಿದರೆ ಕಠಿಣ ಸಜೆ ವಿಧಿಸಲಾಗುತ್ತದೆ. ಜಿಲ್ಲೆಯಲ್ಲಿ ರಾಷ್ಟ್ರಧ್ವಜಕ್ಕೆ ಅವಮಾನ ಆಗುತ್ತಿರುವುದನ್ನು  ಕಂಡುಬಂದರೆ, ಸಾರ್ವಜನಿಕರು ಕೂಡಲೇ ಹತ್ತಿರದ ಪೋಲೀಸ್ ಠಾಣೆಗೆ,ತಾಲೂಕು ಕಚೇರಿಗೆ, ಸಹಾಯಕ ಕಮೀಷನರ್ ಕಚೇರಿಗೆ ಮತ್ತು ಜಿಲ್ಲಾಧಿಕಾರಿಗಳ ಕಚೇರಿಗೆ ಮಾಹಿತಿ ನೀಡಲು ಟಾಲ್ಫ್ರೀ ದೂರವಾಣಿ ಸಂಖ್ಯೆ 1077 ಕ್ಕೆ ಕರೆಮಾಡಿ ತಿಳಿಸಬಹುದಾಗಿದೆಯೆಂದು ಜಿಲ್ಲಾಧಿಕಾರಿಗಳು ತಿಳಿಸಿರುತ್ತಾರೆ.

Monday, August 12, 2013

ಅಡಿಕೆ ಕೊಳೆರೋಗ ಪರಿಹಾರಕ್ಕೆ ಕ್ರಮ: ರಮಾನಾಥ ರೈ

ಮಂಗಳೂರು, ಆಗಸ್ಟ್ 12:-ಕೃಷಿ ಪ್ರದಾನ ದೇಶ ನಮ್ಮದು. ಕೃಷಿ ಅಭಿವೃದ್ಧಿಯಿಂದ ರೈತರ ಅಭಿವೃದ್ಧಿ ಹಾಗೂ ದೇಶದ ಅಭಿವೃದ್ಧಿ. ಪ್ರಸಕ್ತ ಸಾಲಿನಲ್ಲಿ ಕೃಷಿ ಚಟುವಟಿಕೆಗಳಿಗೆ ಪೂರಕವಾಗಿ ಉತ್ತಮ ಮಳೆಯಾಗಿದ್ದು, ಉತ್ತಮ ಬೆಳೆಯಾಗಲಿ ಎಂದು ರಾಜ್ಯ ಅರಣ್ಯ,ಪರಿಸರ ಮತ್ತು ಜೀವೀಶಾಸ್ತ್ರ ಸಚಿವರು ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ.ರಮಾನಾಥ ರೈ ಅವರು ಹೇಳಿದರು.
ಅವರಿಂದು ದಕ್ಷಿಣಕನ್ನಡ ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ದಕ್ಷಿಣಕನ್ನಡ ಜಿಲ್ಲೆ ವತಿಯಿಂದ ತೋಟಗಾರಿಕೆ ಪಿತಾಮಹ ಡಾ.ಎಂ.ಹೆಚ್.ಮರಿಗೌಡರ ಜನ್ಮ ದಿನಾಚರಣೆ ಪ್ರಯುಕ್ತ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿಯಲ್ಲಿ ಹಮ್ಮಿಕೊಂಡ ಗೇರು ಬೆಳೆ ಪುನಶ್ಚೇತನ ಹಾಗೂ ಜೇನು ಕೃಷಿ ತರಬೇತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡುತ್ತಿದ್ದರು.
ಕರಾವಳಿ ಜಿಲ್ಲೆಯಲ್ಲಿ ಭತ್ತ ಪ್ರಮುಖ ಬೆಳೆಯಾಗಿತ್ತು. ಆದರೆ ವಾಣಿಜ್ಯ ಬೆಳೆಗಳು ಜನಪ್ರಿಯವಾದ ಹಿನ್ನಲೆಯಲ್ಲಿ ರೈತರು ಭತ್ತ ಬೆಳೆಯುವುದನ್ನು ನಿಲ್ಲಿಸಿ, ಅಡಿಕೆ, ಗೇರು, ತೆಂಗು ರಬ್ಬರ್, ಏಲಕ್ಕಿ, ಕೊಕ್ಕೋ ವೆನಿಲಾದಂತಹ ಬೆಳೆಗಳನ್ನು ಬೆಳೆಯಲಾರಂಭಿಸಿದರು. ವಿವಿಧ ಕಾರಣಗಳಿಂದ ರೈತರಿಗೆ ಇದು ಅನಿವಾರ್ಯವಾಗಿತ್ತು ಎಂದು ಸಚಿವರು ಹೇಳಿದರು.
ಆದರೆ ಇಂದು ಕೊಳೆರೋಗ ಅಡಿಕೆ ಬೆಳೆಗಾರರನ್ನು ಕಾಡುತ್ತಿದ್ದು, ಈ ನಿಟ್ಟಿನಲ್ಲಿ ರೈತರಿಗೆ ಪರಿಹಾರ ನೀಡಲು ತಮ್ಮ ಸರ್ಕಾರ ಕಾರ್ಯೋನ್ಮುಖವಾಗಿದೆ ಎಂದು ಸಚಿವರು ಭರವಸೆ ನೀಡಿದರು. ಅಡಿಕೆಗೆ ಧಾರಣೆ ಉತ್ತಮವಿದೆ, ಆದರೆ ರೋಗಬಾಧೆಯಿಂದ ರೈತರು ಕಂಗೆಟ್ಟಿರುವುದು ತಮ್ಮ ಗಮನಕ್ಕೆ ಬಂದಿದೆ. ರೈತರು ತಮ್ಮ ಸಮಸ್ಯೆಗಳ ಪರಿಹಾರಕ್ಕೆ ಇತರರನ್ನು ಆಶ್ರಯಿಸದೆ ತಾವೇ ಪರಿಹಾರ ಕಂಡುಕೊಳ್ಳಲು ಸಮರ್ಥರಾಗಬೇಕೆಂದು ಅವರು ನುಡಿದರು.
ಕೃಷಿಯ ಜೊತೆ ಅರಣ್ಯ ಸಂರಕ್ಷಣೆ, ಕಾಡು ಉಳಿಸುವುದು ನಮ್ಮ ಆದ್ಯ ಕರ್ತವ್ಯಗಳಲ್ಲೊಂದಾಗಬೇಕು; ಅಳಿದ ಸಸ್ಯ ಸಂಕುಲಗಳು, ಪ್ರಾಣಿ ಸಂಕುಲಗಳಿಂದ ಪ್ರಾಕೃತಿಕ ಸಮತೋಲನ ತಾಳತಪ್ಪಲಿದೆ. ಹಾಗಾಗಿ ಪರಿಸರವಿದ್ದರೆ ನಾವು ಎಂಬುದನ್ನು ಮನಗಂಡು ಪರಿಸರಸ್ನೇಹಿ ಬದುಕು ಬದುಕಿ ಎಂದು ಉಸ್ತುವಾರಿ ಸಚಿವರು ಸಲಹೆ ಮಾಡಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ತುಳಸಿ ಮದ್ದಿನೇನಿ, ಈ ವರ್ಷ ಮಹಾತ್ಮಗಾಂಧಿ ಉದ್ಯೋಗ ಖಾತ್ರಿ ಯೋಜನೆಯಡಿ ಉದ್ಯೋಗ ಚೀಟಿ ಹೊಂದಿರುವ 15ರಿಂದ 20 ಮಂದಿಯ `ಕಾಯಕ ಸಂಘ' ರಚಿಸಿ ಗ್ರಾಮ ಸಭೆಗಳಲ್ಲಿ ಅನುಮೋದನೆ ಪಡೆದು ಕೃಷಿ ಕಾರ್ಯಗಳಿಗೆ ಒತ್ತು ನೀಡಲು ಕಾರ್ಯಕ್ರಮ ರೂಪಿಸಲಾಗಿದೆ ಎಂದು ಹೇಳಿದರು.
ತೋಟಗಾರಿಕಾ ಇಲಾಖೆಯಡಿ ಅಡಿಕೆ, ತೆಂಗು, ಮಲ್ಲಿಗೆ, ಹೂವಿನ ಕೃಷಿಗೆ ಹೆಚ್ಚಿನ ಒತ್ತು ನೀಡಲಾಗುವುದು. ಮಾತ್ರವಲ್ಲದೆ, ಶಾಲೆ ಹಾಗೂ ಅಂಗನವಾಡಿ ವಠಾರಗಳಲ್ಲಿ ಹಣ್ಣಿನ ಗಿಡ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
              ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕರಾದ  ಜೆ.ಆರ್.ಲೋಬೋ ಮಾತನಾಡಿ ಗೇರು ಕೃಷಿಯ ಬಗ್ಗೆ ಜಿಲ್ಲೆಯಲ್ಲಿ ಕಳೆದ ಸುಮಾರು 70 ವರ್ಷಗಳಿಂದ ಉತ್ತೇಜನ ನೀಡುವ ಕೆಲಸ ಮಾಡಲಾಗುತ್ತಿದೆ. ಕಡಿಮೆ ಜನರನ್ನು ಬಳಸಿ ಅಧಿಕ ಇಳುವರಿ ಪಡೆಯುವುದು ಗೇರು ಕೃಷಿಯಿಂದ ಸಾಧ್ಯ. ಈ ಬಗ್ಗೆ ಸೂಕ್ತ ಮಾಹಿತಿ ನೀಡಿ ಕೃಷಿಕರನ್ನು ಉತ್ತೇಜಿಸುವ ಕೆಲಸ ಆಗಬೇಕು ಎಂದರು.
ಇದೇ ಸಂದರ್ಭದಲ್ಲಿ ಹಾರ್ಟಿ ಕ್ಲಿನಿಕ್- ತೋಟದ ಸೊಗಡು ಕೃಷಿ ಸಂಬಂಧಿತ ಪ್ರಕಟಣೆಗಳನ್ನು ಜಿಲ್ಲಾ ಪಂಚಾಯತ್ ಉಪಾಧ್ಯಕ್ಷರಾಧ ರಿತೇಶ್ ಕುಮಾರ್ ಶೆಟ್ಟಿ ಬಿಡುಗಡೆ ಮಾಡಿದರು. ಕೃಷಿ ಮತ್ತುಕೈಗಾರಿಕೆ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಜಯಶ್ರೀ, ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಶ್ರೀಮತಿ ಆಶಾ ತಿಮ್ಮಪ್ಪಗೌಡ ಇಲಾಖಾ ಕೈಪಿಡಿ, ತೋಟಗಾರಿಕಾ ಮಿಷನರ್, ಸಾವಯವ ತೋಟಗಾರಿಕೆ ಅಭಿವೃದ್ಧಿ ಕುರಿತ ಪ್ರಕಟಣೆಗಳನ್ನು ಬಿಡುಗಡೆ ಮಾಡಿದರು. ಸಂಪನ್ಮೂಲ ವ್ಯಕ್ತಿಗಳಾದ ಡಾ ಗಂಗಾಧರ ನಾಯಕ್ ಉಪಸ್ಥಿತರಿದ್ದರು.
ತೋಟಗಾರಿಕೆ ಇಲಾಖೆ ಉಪನಿರ್ದೇಶಕರಾದ ಯೋಗೇಶ ಹೆಚ್ ಆರ್ ಸ್ವಾಗತಿಸಿದರು. ಸಹಾಯಕ ನಿರ್ದೇಶಕರಾದ ಸಂಜೀವ್ ನಾಯಕ್ ಕಾರ್ಯಕ್ರಮ ನಿರ್ವಹಿಸಿದರು.   

ಶಾಲೆ ಬಿಟ್ಟ ಮಕ್ಕಳನ್ನು ಕೂಡಲೇ ಶಾಲೆಗೆ ಸೇರುವಂತೆ ಪ್ರೇರೇಪಿಸಿ-ಅಪರ ಜಿಲ್ಲಾಧಿಕಾರಿ

ಮಂಗಳೂರು ಆಗಸ್ಟ್ 12 :ಶಾಲೆಗಳಲ್ಲಿ 14 ವರ್ಷದ ಕೆಳಗಿನ ಮಕ್ಕಳು ಶಾಲೆ ಬಿಟ್ಟಿದ್ದರೆ,ಅವರನ್ನು ಹುಡುಕಿ ಕೂಡಲೇ ಶಾಲೆಗೆ ಸೇರುವಂತೆ ಪ್ರೇರೇಪಿಸಿ, ಶಾಲೆಗೆ ಬರುವಂತೆ ಮಾಡಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಅಪರ ಜಿಲ್ಲಾಧಿಕಾರಿಗಳಾದ  ದಯಾನಂದ ಅವರು ಸೂಚಿಸಿದ್ದಾರೆ. ಅವರು ಜಿಲ್ಲಾಧಿಕಾರಿಗಳ ಕಚೇರಿಯ ಕೋರ್ಟ್  ಹಾಲ್ ನಲ್ಲಿ ಚೈಲ್ಡ್ ಲೈನ್ ಎಡ್ವೈಸರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡುತ್ತಿದ್ದರು.
ಮಾನಸಿಕ ಅಸ್ವಸ್ಥತೆಯ ಮಕ್ಕಳು ಮತ್ತು ಅಲ್ಕೋಹಾಲ್ ಉಪಯೋಗಿಸುತ್ತಿರುವ ಮಕ್ಕಳ  ವಾಸ್ತವ್ಯಕ್ಕೆ ಬೇಕಾದ ವ್ಯವಸ್ಥೆ ಬಗ್ಗೆ ಸಭೆಯಲ್ಲಿ ಚರ್ಚಿಸಲಾಯಿತು. ಭಿಕ್ಷೆ ಬೇಡುತ್ತಿರುವ ಮಕ್ಕಳ ರಕ್ಷಣೆ ಮಾಡುವುದು ಮತ್ತು ಅವರಿಗೆ ವಸತಿ ಕಲ್ಪಿಸುವ ವಿಚಾರ ಇಂದಿನ ಅಗತ್ಯವೆಂದು ಹೇಳಿದರು. ಸರಕಾರಿ ವಿದ್ಯಾರ್ಥಿ ನಿಲಯಗಳಲ್ಲಿ ಬಾಲ್ಯ ವಿವಾಹ ಮತ್ತು ಲೈಂಗಿಕ  ಶಿಕ್ಷಣದ ಬಗ್ಗೆ ಅರಿವು ಮೂಡಿಸಬೇಕಿದೆ.  ಮಕ್ಕಳ ರಕ್ಷಣೆ ಬಗ್ಗೆ ಹೆದ್ದಾರಿ ಫಲಕಗಳನ್ನು ಅಳವಡಿಸಿ ಸಾರ್ವಜನಿಕರಿಗೆ ಅರಿವು ಮೂಡಿಸುವಂತೆ ತಿಳಿಸಿದರು.ಎಲ್ಲಾ ಶಾಲೆಗಳಲ್ಲಿ ಮಕ್ಕಳ ರಕ್ಷಣೆ ಬಗ್ಗೆ ಸಂದೇಶಗಳ ಬೋರ್ಡುಗಳನ್ನು ಅಳವಡಿಸುವಂತೆ ಚರ್ಚಿಸಲಾಯಿತು.ಮಕ್ಕಳ ಬಗ್ಗೆ ಏನಾದರೂ ದೂರುಗಳಿದ್ದಲ್ಲಿ ದಿನದ 24 ಗಂಟೆಯೂ  1098 ದೂರವಾಣಿಗೆ ಕರೆ ಮಾಡಿ ತಿಳಿಸಬಹುದಾಗಿದೆ.
ಮಕ್ಕಳ ರಕ್ಷಣಾ ಘಟಕದ ವತಿಯಿಂದ ನಡೆದ ಸಭೆಯಲ್ಲಿ ಮಕ್ಕಳ  ಹಕ್ಕುಗಳ ಬಗ್ಗೆ ,ಮಕ್ಕಳ ರಕ್ಷಣೆ, ಮಕ್ಕಳ ಸೌಲಭ್ಯ, ಮಕ್ಕಳ ಆರೋಗ್ಯ,ಮಕ್ಕಳ ಪಾಲ್ಗೊಳ್ಳುವಿಕೆ, ಅಂಕಿ ಅಂಶಗಳ ಬಗ್ಗೆ ಚರ್ಚಿಸಲಾಯಿತು. ಎಲ್ಲಾ ತಾಲೂಕುಗಳಲ್ಲಿ ನಡೆಯುತ್ತಿರುವ ಸಭೆಗಳಲ್ಲಿ ಶಾಲೆಗಳ ಪ್ರತಿನಿಧಿಗಳನ್ನು ಗುಂಪು ಚರ್ಚೆ ಕಾರ್ಯಕ್ರಮಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಬಹುದಾದ ಬಗ್ಗೆ ಚರ್ಚೆ ನಡೆಯಿತು.
 ಸಭೆಯಲ್ಲಿ ಶ್ರೀಮತಿ ಆಶಾನಾಯ್ಕ್,ಅಧ್ಯಕ್ಷರು ,ಚೈಲ್ಡ್ ವೆಲ್ಫೇರ್ ಕಮಿಟಿ, ಶ್ರೀಮತಿ ಗ್ರೇಸಿ ಗೊನ್ಸಾಲೀಸ್, ಮುಂತಾದವರು ಉಪಸ್ಥಿತರಿದ್ದರು. ಸಭೆಯ ಆರಂಭದಲ್ಲಿ  ಡಾ.ಸೋಫಿಯಾ ಎನ್.ಫೆರ್ನಾಂಡೀಸ್ ,ಚೈಲ್ಡ್ ಲೈನ್ ಡೈರೆಕ್ಟರ್ ಎಲ್ಲರನ್ನು ಸ್ವಾಗತಿಸಿದರು.

 

Friday, August 9, 2013

ಮನೆಯಲ್ಲೇ ಕಸವಿಭಜನೆಯಿಂದ ತ್ಯಾಜ್ಯ ವಿಲೇ ಸುಲಲಿತ: ಸಿಇಒ


ಮಂಗಳೂರು, ಆಗಸ್ಟ್,09:- ಸುಶಿಕ್ಷಿತ ಜಿಲ್ಲೆ ದಕ್ಷಿಣ ಕನ್ನಡ; ಇಲ್ಲಿನ ಸುಶಿಕ್ಷಿತರಿಗೆ ಕಸವಿಭಜನೆ ಮೂಲಕ ಕಸ ವಿಲೇ ಹಾಗೂ ತ್ಯಾಜ್ಯದ ಬಳಕೆ ಬಗ್ಗೆ ಅರಿವು ಮೂಡಿಸುವ ಕೆಲಸವಾಗಬೇಕಿದೆ. ಅರಿವಿನ ಶಿಕ್ಷಣ ಶಾಲೆಯ ಮೂಲಕವೇ ಆರಂಭವಾಗಲಿ ಎಂದು ದಕ್ಷಿಣ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀಮತಿ ತುಳಸಿ ಮದ್ದಿನೇನಿ ಹೇಳಿದರು.
                ಗುರು ವಾರ ಸಂಜೆ  ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆಯ ಅಧ್ಯ ಕ್ಷತೆ ವಹಿಸಿ ಮಾತ ನಾಡಿದ ಅವರು, ಹಿಂದಿನ ಸಭೆಯ ಅನು ಪಾಲನಾ ವರದಿ ಪರಿ ಶೀಲಿ ಸಿದರು. ಸ್ವಚ್ಛತೆಗಾಗಿ ಸಾಕಷ್ಟು ಬಹುಮಾನ ಪಡೆದಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಘನತ್ಯಾಜ್ಯ ವಿಲೇ ಸವಾಲುಗುತ್ತಿರುವ ಬಗ್ಗೆ ಅಚ್ಚರಿ ವ್ಯಕ್ತಪಡಿಸಿದ ಅವರು, ಈ ಬಗ್ಗೆ ಶಿಕ್ಷಣ ನೀಡುವ ಕಾರ್ಯವಾಗಬೇಕು. ಪ್ರಸಕ್ತ ದಿನಗಳಲ್ಲಿ ಪ್ರತಿಯೊಂದು ಬೆಲೆಬಾಳುವ ಸಾಧನಗಳಾಗಿದ್ದು, ಕಸಕ್ಕೂ ಬೆಲೆಯಿದೆ; ಕಸವನ್ನು ಬೇಕಾಬಿಟ್ಟಿ ನಮ್ಮ ಪರಿಸರಗಳಲ್ಲಿ ಬಿಸಾಡುವುದರಿಂದ ನಮಗೆ ಹಾಗೂ ನಮ್ಮ ಸಮಾಜಕ್ಕೆ ತೊಂದರೆಯಾಗಲಿದೆ ಎಂದರು.
ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಸ ವಿಲೇಗೆ ಇನ್ನಷ್ಟು ಸಮಗ್ರ ಕೆಲಸವಾಗಬೇಕಿದೆ. ಕಾರ್ಯನಿರ್ವಹಣಾಧಿಕಾರಿಗಳು ಮತ್ತು ಇಂಜಿನಿಯರ ಗಳು ಯೋಜನೆ ಅನುಷ್ಠಾನದಲ್ಲಿ ಆಸಕ್ತಿ ವಹಿಸಬೇಕು ಹಾಗೂ ನಿರಂತರತೆಯನ್ನು ಕಾಯ್ದುಕೊಳ್ಳಬೇಕೆಂದು ಜಿಲ್ಲಾ ಪಂಚಾಯತ್ ಸಿಇಒ ಹೇಳಿದರು.
ಶಾಲೆ, ಅಂಗನವಾಡಿ ಬಳಿಕ ಸ್ಥಳೀಯ ಜನಪ್ರತಿನಿಧಿಗಳಿಗೆ, ಗ್ರಾಮ ಮಟ್ಟದ ಅಧಿಕಾರಿಗಳಿಗೆ ಮಾಹಿತಿ ಕಾರ್ಯಕ್ರಮ ನೀಡುವ ಬಗ್ಗೆ, ಜಿಲ್ಲೆಯನ್ನು ಪರಿಪೂರ್ಣ ನಿರ್ಮಲ ನಗರವಾಗಿ ಪರಿವರ್ತಿಸಬೇಕೆಂದು ಹೇಳಿದರು.
ಜಿಲ್ಲೆಯ 6304 ಮಂದಿ ಫಲಾನುಭವಿಗಳು ಶೌಚಾಲಯ ನಿರ್ಮಿಸಲು ಬಾಕಿ ಇದ್ದು, ಸುಳ್ಯ, ಸುಬ್ರಹ್ಮಣ್ಯ ಪಂಚಾಯತ್ನಲ್ಲಿ, ಗುಂಡ್ಯದಲ್ಲಿ ಶೌಚಾಲಯ ನಿರ್ಮಾಣದ ಬಗ್ಗೆ ಚರ್ಚಿಸಲಾಯಿತು.

Wednesday, August 7, 2013

ಪ್ರವಾಸೋದ್ಯಮ ಅಭಿವೃದ್ಧಿಗೆ ಮುನ್ನುಡಿ

ಮಂಗಳೂರು, ಆಗಸ್ಟ್,07:- ಗೋವಾ ಹಾಗೂ ಕೇರಳ ರಾಜ್ಯಗಳಲ್ಲಿ ಸಿ ಆರ್ ಝಡ್ ಪ್ರದೇಶ ವ್ಯಾಪ್ತಿಯ 200 ಮೀಟರ್ ನಿಂದ ದೂರ ಇರುವ ಪ್ರದೇಶಗಳಲ್ಲಿ ತಾತ್ಕಾಲಿಕ ನಿರ್ಮಾಣಕ್ಕೆ ಸೆಪ್ಟೆಂಬರ್ ನಿಂದ ಮೇ ತಿಂಗಳವರೆಗೆ ಅವಕಾಶ ಮಾಡಿಕೊಟ್ಟು ಪ್ರವಾಸೋದ್ಯಮ ಅಭಿವೃದ್ಧಿಗೆ ಪ್ರೋತ್ಸಾಹ ನೀಡಲಾಗಿದೆ. ಅದೇ ಮಾದರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಅವಕಾಶ ಮಾಡಿಕೊಡುವಂತೆ ನೀತಿ ನಿರೂಪಿಸಲು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸುವ ಬಗ್ಗೆ ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ನಿರ್ಧರಿಸಿತು.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಫುಲ ಅವಕಾಶವಿದ್ದು, ಸಿ ಆರ್ ಝಡ್ ನಿಯಮಾವಳಿ ಯೊಳಗೆ ಸಣ್ಣ ತಿದ್ದುಪಡಿ ತರುವುದರಿಂದ ಬಹಳ ಅನಕೂಲವಾಗಲಿದೆ ಎಂದು ಜಿಲ್ಲೆಯಲ್ಲಿ ಪ್ರವಾಸೋದ್ಯಮ ಚಟುವಟಿಕೆಗಳಲ್ಲಿ ಪಾಲ್ಗೊಂಡಿರುವ ವಿವಿಧ ಸಂಘಟನೆಗಳ ಮುಖ್ಯಸ್ಥರು ಅಭಿಪ್ರಾಯಪಟ್ಟರು.
ಸಭೆಯನ್ನುದ್ದೇಶಿಸಿ ಮಾತನಾಡಿದ ಜಿಲ್ಲಾಧಿಕಾರಿ  ಎನ್ ಪ್ರಕಾಶ್ ಅವರು, ಪ್ರವಾಸೋದ್ಯಮ ಸಚಿವರಾದ  ಆರ್ ವಿ ದೇಶಪಾಂಡೆ ಅವರು ರಾಜ್ಯವನ್ನು ಪ್ರವಾಸೋದ್ಯಮದಲ್ಲಿ ಮುಂಚೂಣಿಗೆ ತರಲು ಉತ್ಸುಕರಾಗಿದ್ದು, ಈ ಸಂಬಂಧ ರಾಜ್ಯ ಮಟ್ಟದಲ್ಲಿ ಸಭೆ ಕರೆದಿದ್ದು, ನಮ್ಮಿಂದ ನಿರ್ದಿಷ್ಟ ಮತ್ತು ಸಮಗ್ರ ಪ್ರಸ್ತಾವನೆಗಳು ಸಲ್ಲಿಕೆಯಾದರೆ ಫಲಪ್ರದವಾಗಲು ಸಾಧ್ಯ ಎಂದರು.
ಸಭೆಯಲ್ಲಿ ಪ್ರಸ್ತಾಪವಾದಂತೆ ಅತಿ ಮುಖ್ಯವಾಗಿ ಪ್ರವಾಸಿಗರ ಅನುಕೂಲಕ್ಕೆ ಸಣ್ಣ ಸ್ಥಳಗಳ ನಕ್ಷೆಯೊಂದಿಗೆ ಮಾಹಿತಿ ಕೈಪಿಡಿ ಹಾಗೂ ನಗರದ ಪ್ರಮುಖ ಪ್ರದೇಶಗಳಲ್ಲಿ ಮಾಹಿತಿ ಫಲಕಗಳನ್ನು ಅಳವಡಿಸುವ ಬಗ್ಗೆಯೂ ಪ್ರವಾಸೋದ್ಯಮ ಇಲಾಖೆಗೆ ಸೂಕ್ತ ನಿರ್ದೇಶನಗಳನ್ನು ಜಿಲ್ಲಾಧಿಕಾರಿಗಳು ನೀಡಿದರು.
ಪ್ರವಾಸೋದ್ಯಮದಲ್ಲಿ ಸ್ಥಳೀಯರ ಸಹಭಾಗಿತ್ವ, ಜಿಲ್ಲೆಗಳ ಹೊಟೆಲ್ ಗಳವರ ಸಹಕಾರ ತೆಗೆದುಕೊಳ್ಳುವ ಬಗ್ಗೆಯೂ ಸಭೆ ಚರ್ಚಿಸಿತು.
ಇದರ ಜೊತೆಗೆ ವಿಮಾನನಿಲ್ದಾಣ, ಕೆ ಎಸ್ ಆರ್ ಟಿಸಿ, ರೈಲು ನಿಲ್ದಾಣಗಳಲ್ಲಿ ಸಣ್ಣ ಮಾಹಿತಿ ಕೈಪಿಡಿಗಳನ್ನು ಪ್ರವಾಸಿಗರಿಗೆ ಲಭ್ಯವಾಗಿಸುವ ಸಲಹೆಯನ್ನು ಸಭೆ ಪರಿಗಣಿಸಿತು. ಸಭೆಯಲ್ಲಿ ಉಪಸ್ಥಿತರಿದ್ದ ಬಂದರು ಅಧಿಕಾರಿಗಳು ಅಭಿಪ್ರಾಯ ವ್ಯಕ್ತಪಡಿಸಿ, ಪ್ರವಾಸಕ್ಕೆ ಸಂಬಂಧಿಸಿದಂತೆ ಬೋಟಿಂಗ್ ನಡೆಸುವವರು ಬಂದರು ಇಲಾಖೆಯಿಂದ ಅಗತ್ಯ ಪರವಾನಿಗೆ ಪಡೆಯುವುದು ಅಗತ್ಯ ಎಂದರು. ಸಿ ಆರ್ ಝಡ್ ಅಧಿಕಾರಿ ಮಹೇಶ್ ಅವರು ಸಿ ಆರ್ ಝಡ್ ಕಾನೂನನ್ನು ಪ್ರವಾಸೋದ್ಯಮದಲ್ಲಿ ನಿರತರಾಗಿರುವವರಿಗೆ ತಿಳಿಸುವಂತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. 

ಶೀಘ್ರದಲ್ಲಿ 8,500 ಪೋಲೀಸರ ನೇಮಕ-ಎಂ.ಎನ್.ರೆಡ್ಡಿ

ಮಂಗಳೂರು, ಆಗಸ್ಟ್.07:-ಕರ್ನಾಟಕ ರಾಜ್ಯದಲ್ಲಿ ಸಿಬ್ಬಂದಿ ಕೊರತೆ ನೀಗಿಸಲು ಸರ್ಕಾರ ತನ್ನ ಬಜೆಟ್ನಲ್ಲಿ ಪ್ರಸ್ತಾಪಿಸಿದ್ದು,ಅದರಂತೆ 8,500 ಪೋಲೀಸರನ್ನು ನೇಮಕ ಮಾಡುವ  ಪ್ರಕ್ರಿಯೆ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ರಾಜ್ಯ ಕಾನೂನು ಮತ್ತು ಸುವ್ಯವಸ್ಥೆ ಹೆಚ್ಚುವರಿ ಪೋಲೀಸ್ ಮಹಾನಿರ್ದೇಶಕ  ಎಂ.ಎನ್.ರೆಡ್ಡಿ ಅವರು ತಿಳಿಸಿದ್ದಾರೆ.
ಅವರು ಇಂದು ನಗ ರದ ಪೋಲೀಸ್ ಆಯು ಕ್ತರ ಕಚೇ ರಿಯಲ್ಲಿ ಮಾಧ್ಯ ಮದ ವರೊಂ ದಿಗೆ ಮಾತ ನಾಡುತ್ತಾ ಈ ವಿಷಯ ತಿಳಿ ಸಿದರು.
ರಾಜ್ಯದಲ್ಲಿ ಒಟ್ಟು 18000 ಪೋಲೀಸ್ ಕಾನ್ಸ್ ಟೇಬಲ್ ಗಳ ಹುದ್ದೆ ಖಾಲಿ ಇದೆ.ಇರುವ ಸಿಬ್ಬಂದಿಯಿಂದಲೇ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲಾಗುತ್ತಿದೆ. ತಾವು ಹೆಚ್ಚುವರಿ ಪೋಲೀಸ್ ಮಹಾ ನಿರ್ದೇಶಕ ಹುದ್ದೆಗೆ ಬಡ್ತಿ ಹೊಂದಿದ್ದು,ರಾಜ್ಯದ ಎಲ್ಲಾ ಜಿಲ್ಲಾ ಕೇಂದ್ರಗಳಿಗೆ ತೆರಳಿ ಅಲ್ಲಿ ಕಾನೂನು ಸುವ್ಯವಸ್ಥೆ ಬಗ್ಗೆ ಪರಿಶೀಲಿಸುತ್ತಿರುವುದಾಗಿ ತಿಳಿಸಿದರು.
ಜನರು ಎಂತಹ ಸಂದರ್ಭ ಬಂದರೂ ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳದೆ ಪೋಲೀಸರಿಗೆ ಮಾಹಿತಿ ನೀಡಿದಲ್ಲಿ ರಾಜ್ಯದಲ್ಲಿ ಶಾಂತಿ ಕಾಪಾಡಲು, ಸಾರ್ವಜನಿಕ ಪ್ರಾಣ,ಮಾನ,ಆಸ್ತಿಪಾಸ್ತಿಗಳ ರಕ್ಷಣೆ ಸುಲಭವಾಗಲಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಪಶ್ಚಿಮ ವಲಯ ಡಿಐಜಿ ಪ್ರತಾಪ್ ರೆಡ್ಡಿ, ಮಂಗಳೂರು ನಗರ ಪೋಲೀಸ್ ಆಯುಕ್ತ ಮನೀಶ್ ಕರ್ಬಿಕರ್ ಉಪಸ್ಥಿತರಿದ್ದರು.

ಶಾಲೆಯಿಂದ ಹೊರಗುಳಿದ ಮಕ್ಕಳ ಪತ್ತೆಕಾರ್ಯ

ಮಂಗಳೂರು, ಆಗಸ್ಟ್.07:-ದಿನಾಂಕ 02-08-2013ರಂದು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್.ಸಿ ರವರ ನೇತೃತ್ವದಲ್ಲಿ ಶಾಲೆಯಿಂದ ಹೊರಗುಳಿದ, ಭಿಕ್ಷೆ ಬೇಡುವ ಅಜಯ್, ಲಲಿತಾ, ಖಾದಲಿನ್ ಮತ್ತು ರಾಕೇಶ್ ಎಂಬ 14 ವರ್ಷದೊಳಗಿನ 4 ಮಕ್ಕಳನ್ನು ಗುರುತಿಸಿ, ಸರ್ವ ಶಿಕ್ಷಣ ಅಭಿಯಾನದಿಂದ ನಡೆಸಲ್ಪಡುವ ಚಿಣ್ಣರ ತಂಗುಧಾಮ ಕಾಪಿಕಾಡು ಇಲ್ಲಿಗೆ ಸೇರಿಸಲಾಯಿತು.
    ದಾಳಿ ಸಮಯದಲ್ಲಿಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ  ಪೀತಾಂಬರ.ಕೆ ನೋಡೆಲ್ಅಧಿಕಾರಿ ದಯಾನಂದ ಪಾಟಾಳಿ.ಕೆ, ಬಿ.ಆರ್.ಪಿಗಳಾದ ಗ್ರೇಸಿ ಡೇಸಾ, ಮ್ಯಾಗ್ದಲಿನ್ ಡಿಸೋಜ, ಸಿ.ಆರ್.ಪಿಗಳಾದ ಜಗದೀಶ್ ನಾವಡ, ಜೋಯ್ಸ್ಡಿಸೋಜ ಮತ್ತು ಮಕ್ಕಳ ರಕ್ಷಣಾಘಟಕದ ಜಿಲ್ಲಾಧಿಕಾರಿ ಗ್ರೇಸಿ ಗೊನ್ಸಾಲಿಸ್,ಚೈಲ್ಡ್ ಲೈನ್ ಮತ್ತು ಕಾಪಿಕಾಡು ಚಿಣ್ಣರ ತಂಗುಧಾಮದ ಸಿಬ್ಬಂದಿಗಳು ಹಾಜರಿದ್ದರು. ಬಂದರು ಪೊಲೀಸ್ಠಾಣೆಯ ಸಿಬ್ಬಂದಿ ಹಾಗೂ ಟ್ರಾಫಿಕ್ ಪೊಲೀಸ್ ಎ.ಎಸ್.ಐರೋಸಮ್ಮ ದಾಳಿಯ ಸಮಯದಲ್ಲಿ ಸಹಕರಿಸಿದರು.
    ರಾಜಸ್ಥಾನ ಹಾಗೂ ಉತ್ತರ ಭಾರತದ ವಿವಿಧ ರಾಜ್ಯಗಳಿಂದ ಬಲೂನ್ ಹಾಗೂ ಇತರ ಆಟಿಕೆಗಳನ್ನು ಮಾರಾಟ ಮಾಡಲು ಬಂದ ಪೋಷಕರೊಂದಿಗಿನ ಮಕ್ಕಳು ಮಂಗಳೂರು ನಗರದಲ್ಲಿ  ಭಿಕ್ಷಾಟಣೆಯಲ್ಲಿ ನಿರತರಾಗಿದ್ದು, ಈ ಮಕ್ಕಳನ್ನು ಶಾಲೆಗೆ ಸೇರಿಸಲುಸರ್ವ ಶಿಕ್ಷಣ ಅಭಿಯಾನಯೋಜನೆಯ ಸಹಕಾರದೊಂದಿಗೆ ಚಿಣ್ಣರ ತಂಗುಧಾಮಕ್ಕೆ ನಿರಂತರಕ್ರಮ ಕೈಗೊಳ್ಳಲಾಗುತ್ತಿದೆ.

Saturday, August 3, 2013

ಅರಣ್ಯ ರಕ್ಷಣೆ ದೃಷ್ಟಿಕೋನ ವಿಸ್ತಾರವಾಗಲಿ: ಸಚಿವ ರಮಾನಾಥ ರೈ

ಮಂಗಳೂರು,ಅಗೋಸ್ತು.03 :- ಪ್ರಾಕೃತಿಕ ಸಮತೋಲನ ಕಾಯ್ದು ಕೊಳ್ಳುವ ಹೊಣೆ ಪ್ರತಿಯೊಬ್ಬರದ್ದು. ಪರಿಸರವಿಲ್ಲದೆ ಜೀವರಾಶಿ ಇಲ್ಲ ಎಂಬ ಸತ್ಯವನ್ನು ಅರಿತು ಮರಗಿಡಗಳನ್ನು ಬೆಳೆಸುವ ಹೊಣೆ ಎಲ್ಲರದ್ದು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ ಬಿ. ರಮಾನಾಥ ರೈ ಅವರು ಹೇಳಿದರು.
ಅವ ರಿಂದು ನಗ ರದ ಪುರ ಭವ ನದಲ್ಲಿ ಆಯೋ ಜಿಸ ಲಾದ ರಾಜ್ಯ ಮಟ್ಟದ 'ಲಕ್ಷ ವೃಕ್ಷ' ಅಭಿ ಯಾನ ಉದ್ಘಾ ಟಿಸಿ ಮಾತ ನಾಡು ತ್ತಿದ್ದರು. ಪರಿ ಸರ ಸಂರ ಕ್ಷಣೆ, ಅರಣ್ಯ ನಿರ್ಮಾಣ ಕೇವಲ ಅರಣ್ಯ ಇಲಾ ಖೆಯ ಹೊಣೆ ಯಲ್ಲ; ಜನ ರಲ್ಲಿ ಈ ಬಗ್ಗೆ ಜಾಗೃತಿ ಮೂಡ ಬೇಕು. ಅರಣ್ಯ ನಿರ್ಮಾ ಣದ ದೃಷ್ಟಿ ಕೋನ ವಿಸ್ತಾರ ವಾಗ ಬೇಕು. ಇದು ಒಂದು ನಗರ, ಜಿಲ್ಲೆಗೆ ಸೀಮಿತವಾದ ವಿಷಯವಲ್ಲ. ಪರಿಸರವಿಲ್ಲದೆ ನಾವಿಲ್ಲ ಎಂದ ಸಚಿವರು, ಪಶ್ಚಿಮ ಘಟ್ಟ ಸಂರಕ್ಷಣೆಯ ಜೊತೆಗೆ ಬಯಲು ಸೀಮೆಯಲ್ಲಿ ಕೂಡ ಗಿಡ ಬೆಳೆಸುವ ಕಾರ್ಯವಾಗಬೇಕು. ಇದಕ್ಕೆ  ತಿರುಪತಿಯ ಗುಡ್ಡ ಮಾದರಿ ಎಂದರು. ಇಂದಿನ ಕಾರ್ಯಕ್ರಮ ನಿರಂತರ ಪ್ರಕೃತಿ ಸಂರಕ್ಷಣೆಗೆ ಪ್ರೇರಪಣೆಯಾಗಲಿ, ಪೂರಕವಾಗಲಿ ಎಂದು ಸಚಿವರು ಹೇಳಿದರು.
ವಿರೋಧಪಕ್ಷದ ನಾಯಕ, ಕರ್ನಾಟಕ ವಿಧಾನಪರಿಷತ್ ಹಾಗೂ ಮಾಜಿ ಮುಖ್ಯಮಂತ್ರಿ  ಡಿ ವಿ ಸದಾನಂದಗೌಡ ಅವರು ಪಾಕೃತಿಕ ಅಸಮತೋಲನದಿಂದಾಗುವ ಅನಾಹುತಗಳು ಹಾಗೂ ಕಾಡಿನ ಸಂರಕ್ಷಣೆಯ ಕುರಿತು ಮಾತನಾಡಿದರು.
ಸಭಾಧ್ಯಕ್ಷತೆ ವಹಿಸಿದ್ದ ಶಾಸಕರು,ಮಂಗಳೂರು ದಕ್ಷಿಣ ವಿಧಾನಸಭಾ ಕ್ಷೇತ್ರ  ಜೆ ಆರ್ ಲೋಬೋ ಅವರು, ಇರುವ ಪರಿಸರ ಸಂರಕ್ಷಣೆಯ ಜೊತೆಗೆ ಅಭಿವೃದ್ಧಿ ಕಾಮಗಾರಿಗಳ ವೇಳೆ ಪರಿಸರ ನಾಶ ಕಡಿಮೆ ಮಾಡುವ ಚಿಂತನೆಯಾಗಬೇಕೆಂದರು. ವಿಧಾನಪರಿಷತ್ ಶಾಸಕ ಮೋನಪ್ಪ ಭಂಡಾರಿ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ (ಅಭಿವೃದ್ಧಿ)  ಬಿ ಶಿವನಗೌಡ, ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಶಿವಪ್ರಕಾಶ್, ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಎಂ.ಡಿ, ನಾಗರಾಜ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶಾಂತಪ್ಪ, ನವಮಂಗಳೂರು ಬಂದರು ಮಂಡಳಿಯ ಉಪಾಧ್ಯಕ್ಷರಾದ  ಟಿ ಎಸ್, ಎನ್ ಮೂರ್ತಿ, ಜಿಲ್ಲಾಧಿಕಾರಿ ಎನ್ ಪ್ರಕಾಶ್, ಉಪಅರಣ್ಯ ಸಂರಕ್ಷಣಾಧಿಕಾರಿ ಓ ಪಾಲಯ್ಯ, ಉಪಸ್ಥಿತರಿದ್ದರು. ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶಾಂತಪ್ಪ ಸ್ವಾಗತಿಸಿದರು. ಪರಿಸರ ಅಧಿಕಾರಿ  ಎನ್ ಲಕ್ಷ್ಮಣ್ ವಂದಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಸುಮಾರು 1,500 ಮಕ್ಕಳು ಪುರಭವನದಿಂದ ಸ್ಟೇಟ್ ಬ್ಯಾಂಕ್ ಮುಖಾಂತರ ಮೆರವಣಿಗೆ ಮೂಲಕ ಪರಿಸರ ಸ್ನೇಹಿ ಸಂದೇಶಗಳೊಂದಿಗೆ ಜಾಥಾ ನಡೆಸಿದರು. ಬಳಿಕ  ಗೋವಿಂದದಾಸ್ ಕಾಲೇಜು ಮಕ್ಕಳಿಂದ ಅರಣ್ಯದ ಬಗ್ಗೆ ಕಿರು ನಾಟಕ ಆಯೋಜಿಸಲಾಗಿತ್ತು. ಅರಣ್ಯ ಮಿತ್ರ ಪ್ರಶಸ್ತಿ ವಿತರಣೆಯೂ ನಡೆಯಿತು. ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ ಸಸಿ ವಿತರಿಸಲಾಯಿತು. ಉದ್ಘಾಟಕರು ಪುರಭವನದಲ್ಲಿ ಸಸಿಗಳನ್ನು ನೆಟ್ಟರು. ಲಕ್ಷ ವೃಕ್ಷ ಕಾರ್ಯಕ್ರಮದ ಸಂದೇಶ 'ವೃಕ್ಷಗಳ ಮೇಲೆ ಲಕ್ಷ್ಯವಿಡಿ' ಅರ್ಥಪೂರ್ಣವಾಗಿ ಆಚರಿಸಲ್ಪಟ್ಟಿತು.
ಅರಣ್ಯ ಇಲಾಖೆ ಖಾಲಿ ಹುದ್ದೆ ಭರ್ತಿ ಪ್ರಕ್ರಿಯೆ ಆರಂಭ-: ಅರಣ್ಯ ಇಲಾಖೆಯಲ್ಲಿನ ಅಧಿಕಾರಿಗಳು, ಸಿಬ್ಬಂದಿಗಳು ಸೇರಿದಂತೆ ಖಾಲಿ ಹುದ್ದೆಗಳ ಭರ್ತಿಗೆ ಈಗಾಗಲೇ ಸರಕಾರದಿಂದ ಅನುಮೋದನೆ ದೊರಕಿದ್ದು, ಪ್ರಕ್ರಿಯೆ ಆರಂಭಗೊಂಡಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಸಚಿವ ಬಿ. ರಮಾನಾಥ ರೈ ತಿಳಿಸಿದ್ದಾರೆ.
ನಗರದ ಅಳಪೆ ಪಡೀಲ್ ಬಳಿ ಅಂದಾಜು 79 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮಂಗಳೂರು ವೃತ್ತ ಕಚೇರಿಯ ಉದ್ಘಾಟನೆ ನೆರವೇರಿಸಿದ ಸಂದರ್ಭ ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಅವರು ಉತ್ತರಿಸಿದರು. ಈ ಸಂದರ್ಭ ಅವರು ಕಚೇರಿಯ ಆವರಣದಲ್ಲಿ ಗಿಡವೊಂದನ್ನು ನೆಟ್ಟರು.    
ಈ ಸಂದರ್ಭ ಶಾಸಕ ಜೆ.ಆರ್. ಲೋಬೋ, ಮಾಜಿ ಮೇಯರ್ ಶಶಿಧರ ಹೆಗ್ಡೆ,  ಅಪರ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಬಿ. ಶಿವನಗೌಡ, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಎಸ್. ಶಾಂತಪ್ಪ, ಉಪ ಅರಣ್ಯ ಸಂರಕ್ಷಣಾಧಿಕಾರಿ ಓ. ಪಾಲಯ್ಯ ಮೊದಲಾದವರು ಉಪಸ್ಥಿತರಿದ್ದರು.

ವಕ್ಫ್ ಆಸ್ತಿ ಸಂರಕ್ಷಣೆಗೆ ಸೂಕ್ತ ಕ್ರಮ: ಅನಿಲ್ ಕುಮಾರ್

ಮಂಗಳೂರು, ಆಗಸ್ಟ್,03:- ವಕ್ಫ್ ಆಸ್ತಿಗಳನ್ನು ಗುರುತಿಸಿ ಸರ್ವೇಯರ್ ಅವರಿಂದ ಸಮೀಕ್ಷೆ ಮಾಡಿಸಿ ಸಂರಕ್ಷಣೆ ಮಾಡಿ ಎಂದು ವಕ್ಫ್, ಹಜ್, ಅಲ್ಪಸಂಖ್ಯಾತರ ಇಲಾಖೆ ಪ್ರಧಾನ ಕಾರ್ಯದರ್ಶಿಗಳಾದ  ಅನಿಲ್ ಕುಮಾರ್ ಇಂದು ನಿರ್ದೇಶನ ನೀಡಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಬಂಧ ಪಟ್ಟ ಇಲಾಖೆ ಮತ್ತು ವಕ್ಫ್ ಬೋರ್ಡ್ ನ ಅಧಿಕಾರಿಗಳ ಜೊತೆ ಸಮಾಲೋಚನೆ ನಡೆಸಿದ ಬಳಿಕ ಮುಖ್ಯಮಂತ್ರಿಗಳು ಸಮಯಮಿತಿಯೊಳಗೆ ಸರ್ವೇ ಕಾರ್ಯ ನಡೆಸಲು ಸೂಚಿಸಿದ್ದು, ಜಿಲ್ಲೆಯಿಂದ ಈ ಸಂಬಂಧ ಸಮಯಮಿತಿಯೊಳಗೆ ಮಾಹಿತಿ ಬೇಕು ಎಂದರು.
ಬಂಟ್ವಾಳ, ಮಂಗಳೂರಿನಲ್ಲಿ ಆಸ್ತಿ ಸರ್ವೇ ಬಾಕಿ ಇದೆ ಎಂದ ಅವರು ಸಮುದಾಯಭವನ, ಹಜ್ಘರ್ ನಿರ್ಮಾಣಗಳ ಪ್ರಗತಿ ಪರಿಶೀಲಿಸಿದರು. 
ಜಿಲ್ಲೆಯಲ್ಲಿ ಅಲ್ಪಸಂಖ್ಯಾತರಿಗೆ ಹಾಗೂ ಹಿಂದುಳಿದವರಿಗೆ  ಇರುವ ಹಾಸ್ಟೆಲ್,ಸೌಕರ್ಯ ಹಾಗೂ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದ ಕಾರ್ಯದರ್ಶಿಗಳು ಇಲಾಖಾಧಿಕಾರಿಗಳ ಸಮಸ್ಯೆಗಳನ್ನು ಪರಿಹರಿಸುವುದಾಗಿ ನುಡಿದರು. ಹಾಸ್ಟೆಲ್ ಗಳಲ್ಲಿ ವಾರ್ಡನ್ ಗಳ ಕೊರತೆ ಇದೆ. ಮಕ್ಕಳ ಸಂಖ್ಯೆ ಹೆಚ್ಚಿದ್ದು, ಕೆಲಸದವರ ಅನುಪಾತ ಕಡಿಮೆಯಿದೆ ಎಂದು ಅಧಿಕಾರಿಗಳು ಜಿಲ್ಲೆಯ ಸಮಸ್ಯೆಗಳನ್ನು ನಿರ್ದೇಶಕರ ಮುಂದಿಟ್ಟರು.
ಜಿಲ್ಲಾಧಿಕಾರಿ ಎನ್ ಪ್ರಕಾಶ್ ಅವರು ಮಾತನಾಡಿ, ದಕ್ಷಿಣ ಕನ್ನಡ ಜಿಲ್ಲೆಯ ಸಮಸ್ಯೆಗಳು ಉಳಿದೆಡೆಗಳಿಗಿಂತ ಭಿನ್ನವಾಗಿದ್ದು, ಈ ಜಿಲ್ಲೆಯ ಸಮಸ್ಯೆ ಪರಿಹಾರಕ್ಕೆ ವಿಶೇಷ ಸೌಲಭ್ಯಗಳನ್ನು ರೂಪಿಸುವ ಬಗ್ಗೆ ನಿರ್ದೇಶಕರ ಗಮನ ಸೆಳೆದರು. ದಕ್ಷಿಣ ಕನ್ನಡ ಜಿಲ್ಲೆಗೆ ಹೆಚ್ಚಿನ ಅನುದಾನ ಒದಗಿಸಿ ಎಂದು ಜಿಲ್ಲಾಧಿಕಾರಿಗಳು ಹೇಳಿದರು.
ಸಮಾಜ ಕಲ್ಯಾಣ ಇಲಾಖಾಧಿಕಾರಿ  ಅರುಣ್ ಫುರ್ಟಾಡೋ ಅವರು ಹಾಸ್ಟೆಲ್ ಗಳಲ್ಲಿ ಇರುವ ಸಮಸ್ಯೆಗಳನ್ನು ನಿದರ್ೇಶಕರಿಗೆ ಮನನ ಮಾಡಿದರು. ಸಭೆಯಲ್ಲಿ ಆರ್ ಅಬ್ದುಲ್ ರಿಯಾಝ್ ಖಾನ್ ಅಧ್ಯಕ್ಷರು ಕರ್ನಾಟಕ ರಾಜ್ಯ ವಕ್ಫ್ ಮಂಡಳಿ, ಜಿಲ್ಲಾ ಅಧ್ಯಕ್ಷರು ಉಸ್ಮಾನ್ ಹಾಜಿ ಉಪಸ್ಥಿತರಿದ್ದರು. ಅಪರ ಜಿಲ್ಲಾಧಿಕಾರಿ ದಯಾನಂದ ಕೆ.ಎ. ಮಂಗಳೂರು ಸಹಾಯಕ ಆಯುಕ್ತರಾದ ಸದಾಶಿವ ಪ್ರಭು, ಪುತ್ತೂರು ಸಹಾಯಕ ಆಯುಕ್ತರಾದ ಪ್ರಸನ್ನ, ಡಿಡಿಎಲ್ಆರ್ ಕುಸುಮಾಧರ ಅವರು ಸಭೆಯಲ್ಲಿದ್ದರು.

Friday, August 2, 2013

'ಲಕ್ಷ ವೃಕ್ಷ' ಅಭಿಯಾನ: ಸಸಿಗಳು ಇಲ್ಲಿ ಲಭ್ಯ


ಮಂಗಳೂರು, ಆಗಸ್ಟ್.02 :- ಕರ್ನಾಟಕ ಅರಣ್ಯ ಇಲಾಖೆ ಮಂಗಳೂರು ವಿಭಾಗ, ಕರ್ನಾಟಕ ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಸಹಭಾಗಿತ್ವದಲ್ಲಿ ರಾಜ್ಯ ಮಟ್ಟದ ಲಕ್ಷ ವೃಕ್ಷ ಅಭಿಯಾನಕ್ಕೆ ನಾಳೆ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ,  ಪರಿಸರ ಮತ್ತು ಜೀವಿಶಾಸ್ತ್ರ ಸಚಿವರು ಚಾಲನೆ ನೀಡಲಿದ್ದಾರೆ.
ಈಗಾಗಲೇ ಜಿಲ್ಲಾಡಳಿತ, ಶಾಲಾ ಕಾಲೇಜು ವಿದ್ಯಾರ್ಥಿಗಳು, ವಿವಿಧ ಇಲಾಖೆಗಳು ಹಾಗೂ ಸಂಘಸಂಸ್ಥೆಗಳು ಪರಿಸರಪ್ರೇಮಿಗಳ ನೆರವಿನಿಂದ ಸಾವಿರಾರು ಗಿಡಗಳನ್ನು ಮಂಗಳೂರು ನಗರ ಹಾಗೂ ಇತರೆಡೆಗಳಲ್ಲಿ ನೆಡಲಾಗಿದ್ದು, ಮಾಲಿನ್ಯ ರಹಿತ ಪರಿಸರ ಇಲಾಖೆಯ ಉದ್ದೇಶವಾಗಿದೆ.
ಪರಿಸರ ಹಸುರೀಕರಣಕ್ಕೆ ಪೂರಕವಾಗಿ ಮಂಗಳೂರು 0824 2425167, ಪುತ್ತೂರು 08251 230704, ಉಪ್ಪಿನಂಗಡಿ 08251 251121, ಬೆಳ್ತಂಗಡಿ 08256 232146, ಪಂಜದ 08257-278294, ಬಂಟ್ವಾಳದ 08255 232300, ಸುಳ್ಯ 08257 230716, ಸುಬ್ರಹ್ಮಣ್ಯ 08257 281259 ಇಲ್ಲಿ ಸಸಿಗಳು ಲಭ್ಯವಿದೆ.
ಕೃಷಿ ಅರಣ್ಯ ಪ್ರೋತ್ಸಾಹ ಯೋಜನೆಯಡಿ ಎಲ್ಲ ಆಸಕ್ತ ರೈತರು, ಸಾರ್ವಜನಿಕರು ರಿಯಾಯಿಯಿತಿ ರೂ. 1,3 ಮತ್ತು 5 ರೂ. ದರದಲ್ಲಿ ಸಸಿ ವಿತರಿಸಿ ನೆಟ್ಟ ನಂತರ ಬದುಕುಳಿದ ಸಸಿ ಒಂದಕ್ಕೆ ಒಂದನೇ ವರ್ಷ ರೂ. 10, ಎರಡನೇ ವರ್ಷ 15ರೂ., ಮೂರನೇ ವರ್ಷ 20 ರೂ. ಗಳ ಪ್ರೋತ್ಸಾಹ ಧನ ನೀಡಲಾಗುವುದು ಎಂದು ಅರಣ್ಯ ಇಲಾಖೆ ಪ್ರಕಟಣೆ ತಿಳಿಸಿದೆ.               

ಮದ್ಯ ಮಾರಾಟ ನಿಷೇಧ

ಮಂಗಳೂರು, ಅಗೋಸ್ತು.02:- ದಕ್ಷಿಣಕನ್ನಡ ಜಿಲ್ಲೆಯ ಗ್ರಾಮ ಪಂಚಾಯತ್ ಉಪ ಚುನಾವಣೆ 2013 ರ ಮತದಾನ ನಡೆಯುವ ಪ್ರಯುಕ್ತ ದಿನಾಂಕ 3-8-13 ರ ಪೂರ್ವಾಹ್ನ 7 ಗಂಟೆಯಿಂದ 4-8-13 ರ ರಾತ್ರಿ 12 ಗಂಟೆ ವರೆಗೆ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಗ್ರಾಮ ಪಂಚಾಯತ್ ಉಪ ಚುನಾವಣೆ ನಡೆಯುವ ಪ್ರದೇಶಗಳಾದ ಅರಿ ಯಡ್ಕ, ದೋ ಲ್ಪಾಡಿ, ಸವ ಣೂರು, ಕಬಕ, ಕನ್ಯಾನ,ಉಜಿರೆ, ನಾವೂರು,ಸೋಣಂ ದೂರು,ಐವರ್ನಾಡು, ವಿಟ್ಲ, ಪಾಲಡ್ಕ, ಪಡು ಕೋಣಾಜೆ, ಮೆನ್ನಬೆಟ್ಟು, , ಚೇಳಾಯೂರು,  ಬಜಪೆ,ಬೊಂಡಂತಿಲ,ಬೊಳಿಯೂರು, ಕೋಣಾಜೆ,ಬೆಳ್ಮ,ಸೋಮೇಶ್ವರ ಮತ್ತು 7-8-13 ರಂದು ಬೆಳಿಗ್ಗೆ 6 ಗಂಟೆಯಿಂದ ರಾತ್ರಿ 12 ಗಂಟೆಯ ತನಕ ಮತ ಎಣಿಕೆ ನಡೆಯುವ ಪ್ರದೇಶವಾದ ಜಿಲ್ಲೆಯ ಎಲ್ಲಾ ತಾಲೂಕು ಕೇಂದ್ರಗಳ 3 ಕಿಲೋ ಮೀಟರ್ ವ್ಯಾಪ್ತಿ ಪ್ರದೇಶಗಳನ್ನು ಮದ್ಯ ಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಿ ಈ ದಿನಗಳಲ್ಲಿ ಎಲ್ಲಾ  ಮದ್ಯದಂಗಡಿಗಳನ್ನು ಮತ್ತು ಇನ್ನುಳಿದ ಯಾವುದೇ ವಿಧದ ಮದ್ಯ ಮಾರಾಟ ಪರವಾನಿಗೆ ಇರುವಂತಹ ಅಂಗಡಿಗಳನ್ನು ಮತ್ತು ಮಾರಾಟ ಕೇಂದ್ರಗಳನ್ನು ಮುಚ್ಚಲು ದಕ್ಷಿಣಕನ್ನಡ ಜಿಲ್ಲಾಧಿಕಾರಿಗಳಾದ ಎನ್.ಪ್ರಕಾಶ್ ಆದೇಶಿಸಿರುತ್ತಾರೆ.

ಶಿಶು ಜನನದ ಅರ್ಧ ಗಂಟೆಯಲ್ಲೇ ಸ್ತನ್ಯ ಪಾನ ಮಾಡಿಸಿ

ಮಂಗಳೂರು, ಅಗೋಸ್ತು.02 :- ಶಿಶು ಜನನದ ಅರ್ಧ ಗಂಟೆಯಲ್ಲೇ ಮಗುವಿಗೆ ತಾಯಿಯ ಕಿಣ್ವಭರಿತ ಎದೆ ಹಾಲುಣಿಸಿದರೆ ಮಗುವಿಗೆ ರೋಗ ನಿರೋಧಕ ಶಕ್ತಿ ಹೆಚ್ಚಿ ಮಗು ತಾಯಿಯ ಅನುಬಂಧ ಹೆಚ್ಚಾಗಲಿದೆ ಎಂದು ತ್ರಿವೆಂಡ್ರಮ್ನ ಆಹಾರ ಮತ್ತು ಪೌಷ್ಠಿಕ ಮಂಡಳಿ ಸಹಾಯಕ ತಾಂತ್ರಿಕ ಸಲಹೆಗಾರ  ಪ್ರಭಾತ್ ತಿಳಿಸಿದ್ದಾರೆ.
ಅವರು ಇಂದು ನಗರದ ಕುಂಟಿಕಾನದಲ್ಲಿರುವ ಎಜೆ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆಯಲ್ಲಿ ಭಾರತ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಮಂತ್ರಾಲಯದ ಆಹಾರ ಮತ್ತು ಪೌಷ್ಠಿಕ ಮಂಡಳಿ,ಮಂಗಳೂರು ಹಾಗೂ ಎಜೆ ಆಸ್ಪತ್ರೆಯ ವೈದ್ಯಕೀಯ ಸಂಸ್ಥೆ ಸಹಯೋಗದಲ್ಲಿ ಏರ್ಪಡಿಸಿದ್ದ ವಿಶ್ವ ಸ್ತನ್ಯಪಾನ ಸಪ್ತಾಹವನ್ನು ಹಾಗೂ ಸ್ತನ್ಯಪಾನದಿಂದ ಮಗು ತಾಯಿಯ ಬಂಧಕ್ಕೆ ಪೂರಕವೆಂಬ ವಿಷಯ ಕುರಿತ ವಿಚಾರಸಂಕಿರಣದಲ್ಲಿ ಮುಖ್ಯ ಭಾಷಣಕಾರರಾಗಿ ಮಾತನಾಡಿದರು.
ಕಳೆದ ಒಂದು ದಶಕದಿಂದ ಸ್ತನ್ಯಪಾನ ವೃದ್ಧಿಯಾಗಿಲ್ಲ, ವಿಶ್ವದ 117 ರಾಷ್ಟ್ರಗಳು ಸ್ತನ್ಯಪಾನವನ್ನು ಶಿಶುಗಳಿಗೆ ನೀಡುವ ಬಗ್ಗೆ ಅರಿವು ಮೂಡಿಸುತ್ತಿದ್ದಾರೆ,ಭಾರತದಲ್ಲಿ ಶೇಕಡಾ 24 ಮಕ್ಕಳಿಗೆ ಸ್ತನ್ಯಪಾನ ದೊರಕುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸಿದ ಪ್ರಭಾತ್ರವರು, ಮಗು ಜನನದ ಅರ್ಧ ಗಂಟೆಯೊಳಗೆ ಮಗುವಿಗೆ ಸ್ತನ್ಯಪಾನ ಮಾಡಿಸಬೇಕು ಎಂದು ತಿಳಿಸಿ 6 ತಿಂಗಳವರೆಗೂ ಸ್ತನ್ಯಪಾನವಲ್ಲದೆ ಬೇರೆ ಯಾವುದೇ ಆಹಾರವನ್ನಾಗಲೀ, ಮೇವಿನ ಹಾಲನ್ನಾಗಲೀ ಮಗುವಿಗೆ ನೀಡದೇ ಕೇವಲ ಸ್ತನ್ಯಪಾನವನ್ನು ಮಾತ್ರ ನೀಡಿದಲ್ಲಿ ಅಂತಹ ಮಕ್ಕಳ ಬುದ್ಧಿಮತ್ತೆ (ಐಕ್ಯೂ)ಹೆಚ್ಚಿ ಮಕ್ಕಳು ಹೆಚ್ಚು ಬುದ್ದಿವಂತರು ಹಾಗೂ ಆರೋಗ್ಯಪೂರ್ಣವಂತರಾಗಿರುತ್ತಾರೆಂದು  ತಿಳಿಸಿದರು.
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಗಟ್ರೂಡ್ ವೇಗಸ್ ಅವರು ಮಾತನಾಡಿ, ಗರ್ಭಾವಸ್ಥೆಯಲ್ಲೇ ಇರುವಾಗ ಮಹಿಳೆಯರಲ್ಲಿ ಸ್ತನ್ಯಪಾನದ ಮಹತ್ವ ತಿಳಿಸುವುದರಿಂದ ಶಿಶುಗಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿ, ಮಗುವಿನ ಸರ್ವತೋಮುಖ ಬೆಳವಣಿಗೆಗೆ ನೆರವಾಗಲಿದೆ. ಮಗುವಿಗೆ 6 ತಿಂಗಳಿಗಿಂತ ಮುಂಚೆ ಯಾವುದೇ ರೀತಿಯ ಪೇಯಗಳನ್ನು ಅಥವಾ ಅಂಗಡಿಯಲ್ಲಿ ದೊರಕುವ ಪ್ಯಾಕ್ಡ್ ಆಹಾರಗಳನ್ನು ಕಡ್ಡಾಯವಾಗಿ ನೀಡಬಾರದಾಗಿ ತಿಳಿಸಿ,ಮಗುವಿಗೆ 6 ತಿಂಗಳ ನಂತರ ಆರೋಗ್ಯ ಸಹಾಯಕಿಯರ ಹಾಗೂ ಅಂಗನವಾಡಿ ಕಾರ್ಯಕರ್ತೆಯರ ಶಿಫಾರಸ್ಸಿನಂತೆ ಪೌಷ್ಠಿಕ ಆಹಾರವನ್ನು ಮನೆಯಲ್ಲೇ ಶುಭ್ರವಾಗಿ ತಯಾರಿಸಿ ನೀಡಬೇಕೆಂದು ಅವರು ತಿಳಿಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಎಲ್ಎಂಇಟಿ  ಅಧ್ಯಕ್ಷರಾದ ಎ.ಜೆ ಶೆಟ್ಟಿ ವಹಿಸಿದ್ದರು. ಡಾ.ರಮೇಶ್ ಪೈ ,ಪ್ರಶಾಂತ್ ಶೆಟ್ಟಿ ಪ್ರಶಾಂತ್ ಮರಿಯಾ ಅವರುಗಳು ಉಪಸ್ಥಿತರಿದ್ದರು. ಉದ್ಘಾಟನಾ ಸಮಾರಂಭದ ಬಳಿಕ ಸ್ತನ್ಯಪಾನದ ಬಗ್ಗೆ ತಾಂತ್ರಿಕ ಸಮಾವೇಶವನ್ನು ಆಯೋಜಿಸಲಾಗಿತ್ತು.

ಆಹಾರದಷ್ಟೇ ಪರಿಸರದ ಸಂರಕ್ಷಣೆ ಮುಖ್ಯ-ರಮಾನಾಥ ರೈ

ಮಂಗಳೂರು, ಅಗೋಸ್ತು.02: ಆಹಾರದಷ್ಟೆ ಶುದ್ದ ಗಾಳಿ ಮನುಷ್ಯರಿಗೆ ಮುಖ್ಯ. ಮಾನವರು ತಮ್ಮ  ಸುತ್ತಲ ಪರಿಸರದ ಮರಗಿಡ,ನದಿತೊರೆ ಕಡಲುಸಾಗರಗಳನ್ನು ಸಂರಕ್ಷಿಸಬೇಕು.ಪರಿಸರ ಕಲುಷಿತಗೊಂಡರೆ ಪ್ರಾಣಿ ಪಕ್ಷಿಗಳ ಜೀವನವೇ ಬರಡಾಗಲಿದೆ ಎಂದು ಕರ್ನಾಟಕ ರಾಜ್ಯ ಅರಣ್ಯ,ಪರಿಸರ,ಜೀವಿಶಾಸ್ತ್ರ ಹಾಗೂ ದಕ್ಷಿಣಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ರಮಾನಾಥ ರೈ ತಿಳಿಸಿದ್ದಾರೆ.
ಅವರು ಇಂದು  ನಗರದ ಕದ್ರಿ ಉದ್ಯಾನದಲ್ಲಿ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಅರಣ್ಯ ಇಲಾಖೆಯೊಂದಿಗೆ ಹಮ್ಮಿಕೊಂಡಿದ್ದ, 3ನೇ ವರ್ಷದ ವನಮಹೋತ್ಸವ ಕಾರ್ಯಕ್ರಮವನ್ನು ಗಿಡನೆಡುವ ಮೂಲಕ ಉದ್ಘಾಟಿಸಿ ಮಾತನಾಡಿದರು.
ಕರ್ನಾಟಕದ ಅರಣ್ಯ ಸಂಪತ್ತನ್ನು ವೃದ್ಧಿಸುವ ನಿಟ್ಟಿನಲ್ಲಿ ಸರ್ಕಾರ ಲಕ್ಷವೃಕ್ಷ ಬೃಹತ್ ಕಾರ್ಯಕ್ರಮವನ್ನು  ಹಮ್ಮಿಕೊಂಡಿದೆ. ಈ ಕಾರ್ಯಕ್ರಮಕ್ಕೆ ಇತರೆ ಇಲಾಖೆಗಳು,ಸ್ವಯಂಸೇವಾ ಸಂಘಸಂಸ್ಥೆಗಳ ಪೂರ್ಣ ಸಹಕಾರ ಅಗತ್ಯವೆಂದು ಸಚಿವರು ತಿಳಿಸಿದರು.ಸಚಿವರೊಂದಿಗೆ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ಹರೀಶ್ ರೈ, ನಗರ ಪಾಲಿಕೆ  ಸದಸ್ಯರಾದ ಶಶಿಧರ ಹೆಗ್ಡೆ, ಡಿಸಿಎಫ್ ಓ ಪಾಲಯ್ಯ,ವಲಯ ಸಂರಕ್ಷಣಾಧಿಕಾರಿ ಕ್ಲಿಫರ್ಡ್ ಲೋಬೋ ಅವರನ್ನೊಳಗೊಂಡಂತೆ ಗಣ್ಯರು, ಪತ್ರಕರ್ತರು ಹಾಜರಿದ್ದರು.  

Thursday, August 1, 2013

ಜಿಲ್ಲಾ ಉಸ್ತುವಾರಿ ಸಚಿವರಿಂದ ಕ್ಷೀರಭಾಗ್ಯಕ್ಕೆ ಚಾಲನೆ

ಮಂಗಳೂರು,ಆಗಸ್ಟ್.01 :- ಮಗುವಿನ ಸಮಗ್ರ ಬೆಳವಣಿಗೆಗೆ ಹಾಲು ಪೂರಕ. ಸಾಮಾಜಿಕ ನ್ಯಾಯ ಹಾಗೂ ಕುಪೋಷಣೆ ವಿರುದ್ಧ ನಮ್ಮ ಸರ್ಕಾರ ಸಮರ ಸಾರಿದ್ದು, ಸಮಗ್ರ ಪೌಷ್ಠಿಕಾಂಶಗಳನ್ನೊಳಗೊಂಡ ಹಾಲನ್ನು ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಇದಕ್ಕೆ ಪೂರಕ ಪ್ರೇರಣೆ ನೀಡಿದವರಿಗೆ ತಾನು ಕೃತಜ್ಞ ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅರಣ್ಯ ಪರಿಸರ ಮತ್ತು ಜೀವಿಶಾಸ್ತ್ರ ಸಚಿವರಾದ  ಬಿ. ರಮಾನಾಥ ರೈ ಅವರು ಹೇಳಿದರು.
      ಅವರಿಂದು ನಗರದ ಗಾಂಧಿ ನಗರ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಾರ್ವಜನಿಕ ಶಿಕ್ಷಣ ಇಲಾಖೆ, ಅಕ್ಷರ ದಾಸೋಹ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಸಹಯೋಗದೊಂದಿಗೆ ಅಂಗನವಾಡಿ ಮತ್ತು ಶಾಲಾ ಮಕ್ಕಳಿಗೆ ಹಾಲು ವಿತರಣೆ ಸಮಾರಂಭ ಉದ್ಘಾಟಿಸಿ ಮಾತನಾಡುತ್ತಿದ್ದರು.
   ಅಪೌಷ್ಟಿಕತೆ ನಿವಾರಣೆ ಹಾಗೂ ದುರ್ಬಲವರ್ಗದವರಿಗೆ ಸಾಮಾಜಿಕ ನ್ಯಾಯ ಒದಗಿಸಿಕೊಡುವ ದೃಷ್ಟಿಯಿಂದ ಆರಂಭಿಸಲಾದ ಕಾರ್ಯಕ್ರಮದಿಂದ ಬಡ ಮಕ್ಕಳು ಬುದ್ದಿವಂತರಾಗಿ, ಶಕ್ತಿವಂತರಾಗಿ ಅರಳಲು ಸಾಧ್ಯ ಎಂದರು. ಅನ್ನ ದಾಸೋಹದೊಂದಿಗೆ ಕ್ಷೀರ ದಾಸೋಹ ಮಕ್ಕಳ ಬಲವರ್ಧನೆ ಕೇಂದ್ರ ಮತ್ತು ರಾಜ್ಯ ಸರ್ಕಾರದ ದೃಢ ಸಂಕಲ್ಪ ಎಂದರು.
ಯೋಜನೆಗಳು ಆರಂಭದ ಅನುಷ್ಠಾನ ಹಂತದಲ್ಲಿ ಕೆಲವೊಂದು ಸಮಸ್ಯೆಗಳು ಉದ್ಬವವಾಗುವುದು ಸಹಜ; ಆದರೆ ನಮ್ಮ ಇಲಾಖೆಗಳಿಗೆ ಈ ಎಲ್ಲ ಸಮಸ್ಯೆಗಳನ್ನು ನಿವಾರಿಸಿ ನಿಲ್ಲಲು ಸಾಧ್ಯವಿದೆ ಎಂದರು. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು. ಯೋಜನೆಗಳ ಸಾಧಕಗಳನ್ನು ಚಿಂತಿಸಲಿ ಎಂದ ಅವರು, ಸಮಾಜ ನಿರ್ಮಾಣದಲ್ಲಿ ಶಿಕ್ಷಕರ, ಅಂಗನವಾಡಿ ಕಾರ್ಯಕರ್ತೆಯರ ಹೊಣೆ ಹಾಗೂ ಪಾತ್ರವನ್ನು ವಿಶ್ಲೇಷಿಸಿದರು.
ಸಮಾಜದಲ್ಲಿ ಅರ್ಹರಿಗೆ ಹಾಲು, ಅನ್ನ ನೀಡುವುದು ಒಂದು ಸದವಕಾಶ. ನಮ್ಮ ಜಿಲ್ಲೆಯು ಶೈಕ್ಷಣಿಕ ಪ್ರಗತಿಯನ್ನು ದಾಖಲಿಸಿದ್ದು, ಬುದ್ದಿವಂತರ ಜಿಲ್ಲೆಯೆಂಬ ಹೆಗ್ಗಳಿಕೆ ಪಡೆದಿದೆ. ಅಂಗನವಾಡಿ ಕಾರ್ಯಕತರ್ೆಯರು ನೀಡುವ ಸಾಮಾಜಿಕ ಕೊಡುಗೆಯ ಬಗ್ಗೆ ನಮಗೆ ಹೆಮ್ಮೆಯಿದೆ ಎಂದು ಸಚಿವರು ಪ್ರಶಂಸಿಸಿದರು. ಮಕ್ಕಳ ಸಮಗ್ರ ಬೆಳವಣಿಗೆಯಲ್ಲಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ ಎಂದರು.
ನಮ್ಮ ಬಂಟ್ವಾಳ ತಾಲೂಕಿನಲ್ಲಿ ಸಮಗ್ರ ಬಾಲವಿಕಾಸ ಯೋಜನೆಯಡಿ ಹೆಚ್ಚಿನ ಸಂಖ್ಯೆಯ ಅಂಗನ ವಾಡಿಗಳು ಅಸ್ತಿತ್ವದಲ್ಲಿವೆ. ದೇಶದಲ್ಲೆ ಎರಡನೇ ಸ್ಥಾನ ಬಂಟ್ವಾಳಕ್ಕೆ ಎಂದರು. ಶಿಶು ಮರಣ ಸಂಖ್ಯೆ, ತಾಯಿ ಮರಣ ಸಂಖ್ಯೆ ಜಿಲ್ಲೆಯಲ್ಲಿ ಕಡಿಮೆಯಿದೆ.
ರಾಜ್ಯದ ಅಂಗನವಾಡಿ ಮತ್ತು ಶಾಲಾ ಮಕ್ಕಳ ಹಾಲು ವಿತರಣಾ ಕಾರ್ಯಕ್ರಮ ಎಲ್ಲ ಅಂಗನವಾಡಿ, ಸಕರ್ಾರಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಮಕ್ಕಳಿಗೆ ವಾರಕ್ಕೆ ಮೂರು ದಿನ ಉಚಿತ ಹಾಲು ನೀಡುವ ಯೋಜನೆ ಹಮ್ಮಿಕೊಂಡಿದೆ.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟದ ಅಧ್ಯಕ್ಷ ರವಿರಾಜ್ ಹೆಗ್ಡೆ ಅವರು ಮಾತನಾಡಿ, ಸರ್ಕಾರದ ಯೋಜನೆಗೆ ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ಸಂಪೂರ್ಣ ಸಹಕಾರ ನೀಡಲಿದ್ದು, ಹಾಲಿನ ಪುಡಿ ವಿತರಣಾ ಜವಾಬ್ದಾರಿಯನ್ನು ಹೊಂದಿದೆ. ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 2488 ಶಾಲೆಗಳ 316845 ಮಕ್ಕಳಿಗೆ 47,526 ಲೀಟರ್ ಹಾಲು ಸರಬರಾಜು ಮಾಡಲು ಪ್ರತಿನಿತ್ಯ 5,795 ಕೆ ಜಿ ಕೆನೆಭರಿತ ಹಾಲಿನ ಪುಡಿ ನೀಡುತ್ತಿದೆ. ಅಲ್ಲದೆ 3,248 ಅಂಗನವಾಡಿ ಕೇಂದ್ರಗಳಲ್ಲಿರುವ 1,42,981 ಮಕ್ಕಳಿಗೆ 21,447 ಲೀಟರ್ ಹಾಲು ತಯಾರಿಸಲು ಪ್ರತಿನಿತ್ಯ 2041 ಕೆ ಜಿ ಕೆನೆರಹಿತ ಹಾಲಿನ ಪುಡಿಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ (ಸಿಡಿಪಿಒ) ಕಚೇರಿಗೆ ತಲುಪಿಸುತ್ತಿದೆ.
ಹಾಲಿನ ಪುಡಿಯಿಂದ ಹಾಲನ್ನು ತಯಾರಿಸುವ ಕ್ರಮ ತಿಳಿಸಲು ಪ್ರಚಾರ ಸಾಮಗ್ರಿಗಳನ್ನು ಉಚಿತವಾಗಿ ಎಲ್ಲ ಅಂಗನವಾಡಿ ಮತ್ತು ಶಾಲೆಗಳಿಗೆ ನೀಡುತ್ತಿದೆ ಎಂದು ಹೇಳಿದರು. ಒಂದು ಕಾಲದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಾಲು ಪೂರೈಸಲು ಮಹಾರಾಷ್ಟ್ರದಿಂದ ಆಮದು ಮಾಡಿಕೊಳ್ಳಲಾಗುತ್ತಿತ್ತು. ಆದರೆ ಇಂದು ಜಿಲ್ಲೆಯ ಸ್ವಾವಲಂಬಿಯಾಗಿದೆ.
ಸಮಾರಂಭದಲ್ಲಿ ಜಿಲ್ಲಾಧಿಕಾರಿ ಎನ್ ಪ್ರಕಾಶ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಟಿ.ಎನ್. ಶಶಿಧರ, ಕಾರ್ಪೋರೇಟರ್ ಶಶಿಧರ್ ಹೆಗ್ಡೆ ಮತ್ತಿತರು  ಉಪಸ್ಥಿತರಿದ್ದರು.