Tuesday, September 10, 2013

ಪಿಂಚಣಿ ಅದಾಲತ್ ಗೆ ಚಾಲನೆ

ಮಂಗಳೂರು, ಸೆಪ್ಟೆಂಬರ್.10:ಮಂಗಳೂರಿನ ಉಳ್ಳಾಲ- ತೊಕ್ಕೊಟು ಕಾಪಿಕಾಡ್ ಅಂಬಿಕಾರೋಡ್ ಗಟ್ಟಿ ಸಮಾಜ ಭವನದಲ್ಲಿ ಕಂದಾಯ ಇಲಾಖೆಯ ಮಂಗಳೂರು ತಾಲೂಕು ಬಿ. ಹೋಬಳಿಯ 22 ಗ್ರಾಮಗಳ ಪಿಂಚಣಿ ಅದಾಲತ್ ಕಾರ್ಯಕ್ರಮವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಯು.ಟಿ.ಖಾದರ್ ಉದ್ಘಾಟಿಸಿ 103 ಫಲಾನುಭವಿಗಳಿಗೆ ಪಿಂಚಣಿ ಪತ್ರವನ್ನು ಹಸ್ತಾಂತರ ಮಾಡಿದರು. ಸಹಾಯಕ ಆಯುಕ್ತ ಡಾ. ಪ್ರಶಾಂತ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.
 ಮಂಗಳೂರು ತಾಲೂಕು ತಹಶೀಲ್ದಾರ್ ಕೆ. ಮೋಹನ್ ರಾವ್, ಜಿಲ್ಲಾ ಪಂಚಾಯಿತಿ ಸದಸ್ಯ ಸತೀಶ್ ಕುಂಪಲ,  ತಾಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮುಸ್ತಾಫ, ತಾಲೂಕು ಪಂಚಾಯಿತಿ ಸದಸ್ಯ ಮಹಮ್ಮದ್ ಮೋನು, ಉಳ್ಳಾಲ ಪುರಸಭಾ ಮಾಜಿ ಅಧ್ಯಕ್ಷ ಬಾಝಿಲ್ ಡಿ.ಸೋಜ, ಸದಸ್ಯರಾದ ಗಿರಿಜಾ ಬಾ, ರಝೀಯಾ ಇಬ್ರಾಹಿಂ, ಮಹಮ್ಮದ್ ಮುಕ್ಕಚ್ಚೇರಿ ಹಾಗೂ ವಿವಿಧ ಗ್ರಾಮ ಪಂಚಾಯಿತಿ ಅಧ್ಯಕ್ಷರು ಉಪಸ್ಥಿತರಿದ್ದರು.