Monday, September 23, 2013

ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ: ಸಚಿವ ಅಭಯಚಂದ್ರ ಜೈನ್

ಮಂಗಳೂರು, ಸೆಪ್ಟೆಂಬರ್ 23:- ಮೀನುಗಾರಿಕೆ ಇಲಾಖೆಯಿಂದ ನೀಡಿರುವ ಎಲ್ಲ ಸೌಲಭ್ಯಗಳನ್ನು ಅರ್ಹರಿಗೆ ತಲುಪಿಸಿ. ಇಲಾಖೆಯ ಯೋಜನೆಗಳು ಪ್ರಾಮಾಣಿಕವಾಗಿ ಅನುಷ್ಠಾನಕ್ಕೆ ಬರಲಿ. ದಕ್ಷಿಣ ಕನ್ನಡ ಜಿಲ್ಲೆಯ  ಮೀನುಗಾರಿಕಾ ಬಂದರುಗಳ ಅಭಿವೃದ್ಧಿ ಕಾರ್ಯಗಳು ತಕ್ಷಣದಿಂದ ಆರಂಭವಾಗಲಿ ಎಂದು  ಯುವ ಜನ ಸೇವಾ ಮತ್ತು ಮೀನುಗಾರಿಕೆ ಸಚಿವರಾದ  ಅಭಯಚಂದ್ರ ಜೈನ್ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಚಿವರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಅಧಿಕಾರಿಗಳನ್ನುದ್ದೇಶಿಸಿ ಮಾತನಾಡಿದ ಸಚಿವರು, ಕುಳಾಯಿ ಜೆಟ್ಟಿ ಅಭಿವೃದ್ಧಿಗೆ ಈಗಾಗಲೇ ಸಿಡಬ್ಲುಪಿಆರ್ ಎಸ್ ( ಸೆಂಟ್ರಲ್ ವಾಟರ್ ಪವರ್ ರೀಸರ್ಚ್ ಸ್ಟೇಷನ್) ಸಿಐಇಸಿಎಫ್ (ಸೆಂಟ್ರಲ್ ಇನ್ಸ್ಟಿಟ್ಯೂಟ್ ಆಫ್ ಕೋಸ್ಟಲ್ ಎಕ್ಸಪೀರಿಯನ್ಸ್ ಫಾರ್ ಫಿಶರಿಸ್) ಈಗಾಗಲೇ ಯೋಜನೆಗೆ ಮಂಜೂರಾತಿ ಪಡೆದಿದ್ದು, ಶೀಘ್ರವೇ ಹಳೆ ಯೋಜನೆಯಂತೆ ಕಾಮಗಾರಿ ಆರಂಭಿಸಲು ಸೂಚನೆ ನೀಡಿದರಲ್ಲದೆ ಒಂದು ತಿಂಗಳೊಳಗೆ ವರದಿ ನೀಡಬೇಕೆಂದು ಸಚಿವರು ಆದೇಶಿಸಿದರು.
ಮೀನುಗಾರಿಕಾ ಬಂದರುಗಳ ಮೂರನೇ ಹಂತದ ಕಾಮಗಾರಿ ಕೈಗೊಳ್ಳುವ ಬಗ್ಗೆ ರೂ. 57.60 ಕೋಟಿ ಬಿಡುಗಡೆಯಾಗಿದ್ದು ಕಾಮಗಾರಿ ಪ್ರಗತಿಯಲ್ಲಿದೆ. ಮಂಗಳೂರು ಮೀನುಗಾರಿಕಾ ಬಂದರಿನಲ್ಲಿ ಈಗಾಗಲೇ ಸುಮಾರು 2,000 ದಷ್ಟು ಮೀನುಗಾರಿಕಾ ದೋಣಿಗಳು ತಂಗುತ್ತಿದ್ದು ಈ ದೋಣಿಗಳಿಗೆ ಬಂದರಿನಲ್ಲಿ ಸ್ಥಳಾವಕಾಶ ಕಡಿಮೆ ಇರುವುದರಿಂದ ಕೇಂದ್ರ ಪುರಸ್ಕೃತ ಯೋಜನೆಯಡಿ ಸುಮಾರು ರೂ. 60 ಕೋಟಿ ವೆಚ್ಚದಲ್ಲಿ ಮಂಗಳೂರು ಮೀನುಗಾರಿಕಾ ಬಂದರಿನ ಮೂರನೇ ಹಂತದ ಯೋಜನೆಯಡಿ ವಿಸ್ತರಣೆಯನ್ನು ಮಾಡುವ ಕಾಮಗಾರಿ ಪ್ರಗತಿಯಲ್ಲಿದೆ ಎಂದು ಮೀನುಗಾರಿಕೆ ಉಪನಿರ್ದೇಶಕರು ವಿವರಿಸಿದರು.
ಅಳಿವೆಬಾಗಿಲಿನಲ್ಲಿ ಹಾಗೂ ಚ್ಯಾನಲ್ನಲ್ಲಿ ಹೂಳೆತ್ತುವ ಕೆಲಸವನ್ನು ರೂ. 4.53 ಕೋಟಿ ಮೊತ್ತದಲ್ಲಿ ಮಾಡಲಾಗಿದೆ ಎಂದು ಮೀನುಗಾರಿಕೆ ಉಪನಿದರ್ೇಶಕರಾದ ಎಂ ಡಿ ಪ್ರಸಾದ್ ಅವರು ಸಚಿವರಿಗೆ ಮಾಹಿತಿ ನೀಡಿದರು. ಹೆಜಮಾಡಿ ಕೋಡಿಯಲ್ಲಿ ಜೆಟ್ಟಿ ನಿಮರ್ಾಣಕ್ಕೂ ಚಾಲನೆ ನೀಡಲು ಉಪಸ್ಥಿತರಿದ್ದ ಅಧಿಕಾರಿಗಳಿಗೆ ಸಚಿವರು ಸೂಚಿಸಿದರು.
ಪ್ರಸಕ್ತ ಸಾಲಿನಲ್ಲಿ ಮೀನುಗಾರಿಕಾ ಯಾಂತ್ರೀಕೃತ ದೋಣಿಗಳು ಬಳಸುವ ಡೀಸಿಲ್ ಎಣ್ಣೆಯ ಮೇಲಿನ ರಾಜ್ಯ ಮಾರಾಟಕರವನ್ನು ಸಂಪೂರ್ಣವಾಗಿ ಮಾಫಿ ಮಾಡಲಾಗಿದೆ. ಇದರಿಂದ ಮೀನುಗಾರರು ಪ್ರತೀ ಲೀಟರ್ ಡೀಸಿಲ್ ಮೇಲೆ ರೂ. 7. 00 ರಷ್ಟು ಸಹಾಯಧನ ಪಡೆಯುತ್ತಿದ್ದಾರೆ. ಆಧುನಿಕ ಬಹುದಿನಗಳ ಮೀನುಗಾರಿಕಾ ದೋಣಿಗಳ ನಿಮರ್ಾಣದ ಸಲುವಾಗಿ ಕೇಂದ್ರ ಸಕರ್ಾರ ಘಟಕ ವೆಚ್ಚ ಮೇಲೆ ಶೇಕಡ 10ರಷ್ಟು ಅಂದರೆ ಗರಿಷ್ಠ ರೂ. 6 ಲಕ್ಷ ಸಹಾಯಧನ ನೀಡಲಾಗುತ್ತಿದೆ. ಈ ಯೋಜನೆಯಡಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯಲ್ಲಿ 2011-12 ಸಾಲಿನಿಂದ 200 ಘಟಕಗಳು ಸಹಾಯಧನ ಪಡೆದಿದೆ. ಕೇಂದ್ರ ಪುರಸ್ಕೃತ ಯೋಜನೆಯಡಿ ಮೀನುಗಾರಿಕೆಗೆ ಉಪಯೋಗಿಸುವ ಮಂಜುಗಡ್ಡೆ ಕಾರ್ಖಾನೆಗಳ ನಿಮರ್ಾಣಕ್ಕೆ ಘಟಕ ವೆಚ್ಚ ಗರಿಷ್ಠ ರೂ. ಒಂದು ಕೋಟಿಗೆ ಮಿತಿಗೊಳಿಸಿ ಸಹಾಯಧನ ನೀಡಲಾಗುತ್ತಿದೆ. ಕಳೆದ 5 ವರ್ಷಗಳಿಂದ ದಕ್ಷಿಣ ಕನ್ನಡ ಮತ್ತು ಉಡುಪಿಜಿಲ್ಲೆಯಲ್ಲಿ ಯೋಜನೆಯಡಿ ಈ ತನಕ 45 ಘಟಕಗಳಿಗೆ ಸಹಾಯಧನ ನೀಡಲಾಗಿದೆ. ವಸತಿ ರಹಿತ ಮೀನುಗಾರರಿಗೆ ಮನೆಗಳನ್ನು ನಿಮರ್ಿಸುವ ಯೋಜನೆಯಡಿ ಕಳೆದ 5 ವರ್ಷಗಳಲ್ಲಿ ಕೇಂದ್ರ ಪುರಸ್ಕೃತ ಮತ್ತು ಮತ್ಸ್ಯಾಶ್ರಯ ಯೋಜನೆಯಡಿ ದ.ಕ  ಮತ್ತು ಉಡುಪಿ ಜಿಲ್ಲೆಯ 2837 ಮೀನುಗಾರ ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಲು ಒಟ್ಟು 137.08 ಲಕ್ಷ ಸಹಾಯಧನ ನೀಡಲಾಗಿದೆ. 12-13ನೇ ಸಾಲಿನಲ್ಲಿ ದ.ಕ ಜಿಲ್ಲೆಗೆ 220 ಮತ್ತು ಉಡುಪಿ ಜಿಲ್ಲೆಗೆ 960 ಹೀಗೆ ಒಟ್ಟು 1180 ಮನೆಗಳನ್ನು ಹಂಚಿಕೆ ಮಾಡಲಾಗಿದೆ.
ಮತ್ಸ್ಯ ಮಹಿಳಾ ಸ್ವಾವಲಂಬನಾ ಯೋಜನೆಯನ್ನು ಮೀನುಗಾರ ಮಹಿಳೆಯರಿಗೆ ವಿವಿಧ ಸೌಲಭ್ಯಗಳನ್ನು ವಿತರಿಸಲಾಗುತ್ತಿದೆ. ಮೀನುಗಾರರ ಮೀನುಗಾರಿಕೆ ಮಾಡುವಾಗ ಮೃತರಾದಲ್ಲಿ ಅವರ ವಾರಸುದಾರರಿಗೆ ಸಂಕಷ್ಟ ಪರಿಹಾರ ನಿಧಿಯಡಿ ರೂ. 50.000.00 ವನ್ನು ಪರಿಹಾರ ಧನವಾಗಿ ನೀಡಲಾಗುತ್ತಿದೆ. ಮೀನುಗಾರರಲ್ಲಿ ಉಳಿತಾಯ ಮನೋಭಾವವನ್ನು ಬೆಳೆಸುವ ಸಲುವಾಗಿ ಉಳಿತಾಯ ಮತ್ತು ಪರಿಹಾರ ಯೋಜನೆ ಯನ್ನು ಹಮ್ಮಿಕೊಳ್ಳಲಾಗಿದೆ.
ಕರಾವಳಿ ಮತ್ತು ಒಳನಾಡು ಮೀನುಗಾರರ ಭದ್ರತೆಗಾಗಿ ಹಾಗೂ ಸುರಕ್ಷತೆಯ ಮೀನುಗಾರಿಕೆಗಾಗಿ ಲೈಫ್ ಜಾಕೆಟ್ ಮತ್ತು ಲೈಫ್ ಬಾಯ್ಸ್ ಖರೀದಿಗೆ ಸಹಾಯಧನ ನೀಡಲಾಗುತ್ತದೆ. ಕೇಂದ್ರದ ಮರ್ಚಂಟ್ ಶಿಪ್ಪಿಂಗ್ ಕಾಯಿದೆಯನ್ವಯ ಮೀನುಗಾರಿಕೆಯಲ್ಲಿ ನಿರತವಾಗಿರುವ ಎಲ್ಲ ಯಾಂತ್ರೀಕೃತ ದೋಣಿ, ಮೋಟರೀಕೃತ ದೋಣಿ ಮತ್ತು ಸಾಂಪ್ರಾದಾಯಿಕ ನಾಡದೋಣಿಗಳನ್ನು ಓನ್ ಲೈನ್ ಮೂಲಕ ಮೀನುಗಾರಿಕೆ ಇಲಾಖೆಯಲ್ಲಿ ನೋಂದಾವಣೆ ಮಾಡಲಾಗುತ್ತಿದೆ. ಈ ತನಕ 2120 ಯಾಂತ್ರಿಕೃತ ದೋಣಿಗಳನ್ನು, 4615 ಮೋಟರೀಕೃತ ದೋಣಿಗಳನ್ನು ಹಾಗೂ 1925 ಸಾಂಪ್ರಾದಾಯಿಕ ದೋಣಿಗಳನ್ನು ನೋಂದಾವಣೆ ಮಾಡಲಾಗಿದೆ.
ಅಲ್ಲದೆ ಸಮುದ್ರ ಮೀನುಗಾರಿಕೆಯಲ್ಲಿ ನಿರತವಾಗಿರುವ ಎಲ್ಲ ಮೀನುಗಾರರಿಗೆ ರಾಷ್ಟ್ರೀಯ ಭದ್ರತೆಯ ದೃಷ್ಟಿಯಿಂದ ಗುರುತುಕಾರ್ಡು ನೀಡುವ ಕಾರ್ಯಕ್ರಮವನ್ನು ಮೀನುಗಾರಿಕೆ ಇಲಾಖೆಯಿಂದ ಹಮ್ಮಿಕೊಳ್ಳಲಾಗಿದ್ದು ಈವರೆಗೆ 26,739 ಮೀನುಗಾರರಿಗೆ ಗುರುತು ಚೀಟಿ ನೀಡಲಾಗಿದೆ.
ಕುಂದಾಪುರ ಹೆಜಮಾಡಿ ಬಂದರಿನ ಅಬಿವೃದ್ದಿ ಸಂಬಂಧ ಮಣ್ಣು ಪರೀಕ್ಷೆಗೆ ಕಳುಹಿಸಲಾಗಿದ್ದು ವರದಿ ಬಂದ ತಕ್ಷಣ ಕ್ರಮಕೈಗೊಳ್ಳಲಾಗುವುದು. ಕರಾವಳಿ ಕೊಂಡಿ ರಸ್ತೆಗಳ ನಿರ್ವಹಣೆಗೆ 390 ಲಕ್ಷ ರೂ. ಮೀಸಲಿರಿಸಿದೆ. ಸಭೆಯಲ್ಲಿ ಶಾಸಕರಾದ  ಜೆ ಆರ್ ಲೋಬೋ,  ಮೊಹಿಯುದ್ದಿನ್ ಬಾವಾ, ಜಿಲ್ಲಾಧಿಕಾರಿ ಎನ್ ಪ್ರಕಾಶ್, ಅಪರ ಜಿಲ್ಲಾಧಿಕಾರಿ ದಯಾನಂದ ಕೆ. ಎ., ಕೆ ಎಫ್ ಡಿ ಸಿಯ ವೀರಪ್ಪಗೌಡ, ಸಹಾಯಕ ನಿರ್ದೇಶಕರಾದ ಪಾಶ್ರ್ವನಾಥ್ ಮುಂತಾದ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.