Friday, April 17, 2009

ಮದ್ಯಮುಕ್ತ ದಿನ ಘೋಷಣೆ

ಮಂಗಳೂರು, ಏಪ್ರಿಲ್ 17: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಏಪ್ರಿಲ್ 30ರಂದು ಲೋಕಸಭಾ ಅಭ್ಯರ್ಥಿಆಯ್ಕೆಗೆ ಮತದಾನ ನಡೆಯಲಿದ್ದು, ಚುನಾವಣೆ ಮುಕ್ತ ಹಾಗೂ ನ್ಯಾಯಸಮ್ಮತ, ಶಾಂತಿಯುತವಾಗಿ ನಡೆಯಲು ಮದ್ಯ ಮತ್ತು ಅಮಲು ಪದಾರ್ಥ ಮಾರಾಟ ನಿಷೇಧಿಸಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ ಜಿಲ್ಲಾಧಿಕಾರಿ ಶ್ರೀ ವಿ. ಪೊನ್ನುರಾಜ್ ಆದೇಶಿಸಿದ್ದಾರೆ.
ಏಪ್ರಿಲ್ 28ರ ಸಂಜೆ 5 ರಿಂದ 30ರ ಸಂಜೆ 5 ಗಂಟೆಯವರೆಗೆ ಅವಧಿಯನ್ನು ಮದ್ಯ ಮುಕ್ತ ದಿನಗಳೆಂದು (ಡ್ರೈಡೇಸ್) ಘೋಷಿಸಿ ಈ ದಿನಗಳಲ್ಲಿ ಎಲ್ಲಿಯೂ ಮದ್ಯ ಮಾರಾಟ ಸಲ್ಲದು ಎಂದು ಆದೇಶದಲ್ಲಿ ಸೂಚಿಸಲಾಗಿದೆ.