
ಮಂಗಳೂರು, ಜು.19: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಉಡುಪಿಯಲ್ಲಿ ಪ್ರಾಕೃತಿಕ ವಿಕೋಪ ಪೀಡಿತ ಪ್ರದೇಶಗಳ ವೀಕ್ಷಣೆಗೆ ಪೂರ್ವಾಹ್ನ 8.30ಕ್ಕೆ ಬಜಪೆಗೆ ಆಗಮಿಸಬೇಕಿದ್ದ ಮುಖ್ಯಮಂತ್ರಿ ಶ್ರಿ ಬಿ. ಎಸ್. ಯಡಿಯೂರಪ್ಪ ಅವರು ಭಾರೀ ಮಳೆಯಿಂದ ವಿಮಾನ ಇಳಿಯದ ಕಾರಣ ಬೆಂಗಳೂರಿಗೆ ಹಿಂದಿರುಗಿದರು. ಮುಖ್ಯಮಂತ್ರಿಯನ್ನು ಸ್ವಾಗತಿಸಲು ಬಂದಿದ್ದ ಗೃಹಸಚಿವ ವಿ. ಎಸ್ .ಆಚಾರ್ಯ ಅವರು ಪತ್ರಕರ್ತರೊಂದಿಗೆ ಮಾತನಾಡಿ, ಅವಿಭಜಿತ ಜಿಲ್ಲೆಗಳ ಪ್ರಾಕೃತಿಕ ವಿಕೋಪ ಪ್ರದೇಶಗಳಿಗೆ ಭೇಟಿ ನೀಡಿ ಮುಖ್ಯಮಂತ್ರಿಗೆ ಸಮಗ್ರ ವರದಿ ನೀಡುವುದಾಗಿ ಹೇಳಿದರು.