

ಮಂಗಳೂರು, ಜ.25: ಗ್ರಾಮೀಣ ಗುಡಿ ಕೈಗಾರಿಕೆ ಗಳಿಂದ ಗ್ರಾಮಾಂತ ರದ ಜನರಿಗೆ ಉದ್ಯೋಗ ಹಾಗೂ ರಾಷ್ಟ್ರಪಿತ ಗಾಂಧೀಜಿ ಕನಸನ್ನು ನನಸು ಮಾಡಿದಂತೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಜೆ.ಕೃಷ್ಣ ಪಾಲೇಮಾರ್ ಅವರು ಹೇಳಿದರು. ಮಹಿಳಾ ಸಂಘಟನೆಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು; ಸರ್ಕಾರ ಸರ್ವ ರೀತಿಯಲ್ಲಿ ಪ್ರತಿಯೊಬ್ಬರಿಗೂ ಕೆಲಸ ನೀಡುವ ಯೋಜನೆಗಳನ್ನು ಹಮ್ಮಿಕೊಂಡಿದೆ. ಅಭಿವೃದ್ಧಿಗೆ ಪ್ರೋತ್ಸಾಹ ಕೊಡುವ ಕೆಲಸಗಳನ್ನು ಮಾಡುತ್ತಿದೆ ಎಂದರು. ಸಮಾರಂಭದಲ್ಲಿ ಶಾಸಕ ಯೋಗೀಶ್ ಭಟ್, ಜಿ.ಪಂ. ಅಧ್ಯಕ್ಷ ಸಂತೋಷ್ ಕುಮಾರ್ ಭಂಡಾರಿ ಉಪಸ್ಥಿತರಿದ್ದರು.