

ಮಂಗಳೂರು, ಮಾರ್ಚ್ 20: ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮುಖ್ಯ ಮಂತ್ರಿಗಳನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಜೆ.ಕೃಷ್ಣ ಪಾಲೆಮಾರ್, ಮೇಯರ್ ರಜನಿ ದುಗ್ದಣ್ಣ ಅವರು ಸ್ವಾಗತಿಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಬಿ. ನಾಗರಾಜಶೆಟ್ಟಿ, ಉಪಮೇಯರ್ ರಾಜೇಂದ್ರ ,ಪಶ್ಚಿಮ ವಲಯ ಐಜಿಪಿ ಗೋಪಾಲ್ ಹೊಸೂರ್, ನಗರ ಪಾಲಿಕೆ ಆಯುಕ್ತ ಡಾ.ವಿಜಯಪ್ರಕಾಶ್,ಶಾಸಕ ಯೋಗಿಶ್ ಭಟ್, ಅಪರ ಜಿಲ್ಲಾಧಿಕಾರಿ ಪ್ರಭಾಕರ ಶರ್ಮಾ, ಎಸ್ ಪಿ ಡಾ.ಸುಬ್ರಮ ಣ್ಯೇಶ್ವರ ರಾವ್ ಉಪಸ್ಥಿತರಿದ್ದರು.