ಅವರಿಂದು ಜಿಲ್ಲಾಧಿ ಕಾರಿ ಗಳ ಕಚೇರಿ ಯಲ್ಲಿ ಪ್ರವಾ ಸೋದ್ಯಮ ಇಲಾಖೆ, ಜಿಲ್ಲಾ ಡಳಿತ ಮತ್ತು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಜನತಾ ಬಜಾರ್ ಶಾಖೆ ಸಂಯುಕ್ತ ಆಶ್ರಯ ದಲ್ಲಿ ಆಯೋಜಿ ಸಲಾದ ಪ್ರವಾಸಿ ಟ್ಯಾಕ್ಸಿ ವಿತ ರಣಾ ಸಮಾ ರಂಭ ದಲ್ಲಿ 21 ಪ್ರವಾಸಿ ಟ್ಯಾಕ್ಸಿ ಗಳನ್ನು ಕರ್ನಾ ಟಕ ಪ್ರವಾ ಸೋದ್ಯಮ ಇಲಾಖೆ ಯಿಂದ 2010-11ನೇ ಸಾಲಿನ ಎಸ್ ಸಿ ಪಿ/ ಟಿ ಎಸ್ ಪಿ ಯೋಜನೆ ಯಡಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅರ್ಹ ನಿರುದ್ಯೋಗಿ ಫಲಾನುಭವಿಗಳಿಗೆ ವಿತರಿಸುವ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ಕೆ. ಟಿ. ಶೈಲಜಾ ಭಟ್ ಅವರು ಮಾತನಾಡಿ, ಮಹಿಳಾ ಫಲಾನುಭವಿಗೂ ಕಾರು ನೀಡುವಂತೆ ಬ್ಯಾಂಕಿನವರಿಗೆ ಸೂಚಿಸಿದರಲ್ಲದೆ, ಫಲಾನುಭವಿಗಳಿಗೆ ಶುಭ ಹಾರೈಸಿದರು. ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಬಿ. ನಾಗರಾಜ ಶೆಟ್ಟಿ ಮಾತನಾಡಿ, ಉತ್ತಮ ಯೋಜನೆಗಳನ್ನು ಆರಂಭದಲ್ಲಿಯೇ ಸಕರ್ಾರ ರೂಪಿಸಿದ್ದು ಇಂದು ಫಲ ನೀಡುತ್ತಿದೆ. ಈ ಯೋಜನೆಯಡಿ ಇದುವರೆಗೆ 40 ಕಾರುಗಳನ್ನು ನೀಡಲಾಗಿದೆ ಎಂದರು. ಶಾಸಕ ಂಯು ಟಿ ಖಾದರ್ ಅವರು ಫಲಾನುಭವಿಗಳಿಗೆ ಶುಭ ಹಾರೈಸಿದರು.

ಜಿಲ್ಲಾಧಿಕಾರಿ ಡಾ ಎನ್ ಎಚ್ ಚನ್ನಪ್ಪ ಗೌಡ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು. ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕರಾದ ಎಂ.ಆರ್. ಪ್ರಕಾಶ್ ಅವರು ಸ್ವಾಗತಿಸಿದರು. ಮೀನುಗಾರಿಕೆ ಸಹಾಯಕ ನಿರ್ದೇಶಕರಾದ ಮಹೇಶ್ ಕುಮಾರ್ ವಂದಿಸಿದರು.