
ಅವರು ಇಂದು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಈ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.ರಾಷ್ಟ್ರೀಯ ಯುವಜನೋತ್ಸವ ಅದ್ದೂರಿ ಆಚರಣೆಗೆ ನಾವು ಯಾವುದೇ ಸಂಘಸಂಸ್ಥೆಗಳಿಂದ ಹಣಕಾಸಿನ ನೆರವನ್ನು ಯಾಚಿಸುತ್ತಿಲ್ಲ ಬದಲಾಗಿ ತಮ್ಮತಮ್ಮ ಶಾಲಾಕಾಲೇಜು ಬ್ಯಾಂಕ್ ಕಟ್ಟಡಗಳನ್ನು ಜನವರಿ 11 ರಿಂದ ವಿದ್ಯುತ್ ದೀಪಗಳಿಂದ ಅಲಂಕಾರ ಮಾಡಿ ಸ್ವಾಗತ ಕಮಾನುಗಳನ್ನು ನಿರ್ಮಿಸುವ ಮೂಲಕ ಮಹೋತ್ಸವ ವಿಜೃಂಭಣೆಯಿಂದ ನಡೆಸಬೇಕೆಂದರು.ಮಂಗಳೂರು ನಗರವನ್ನು ಮದುವಣಗಿತ್ತಿಯಂತೆ ಶೃಂಗರಿಸಲು ಪ್ರಮುಖವೃತ್ತಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಣೆ ಮಾಡಿ ತಳಿರು ತೋರಣಗಳನ್ನು ಕಟ್ಟಬೇಕೆಂದು ಅವರು ತಿಳಿಸಿದರು.

ಸಭೆಯಲ್ಲಿ ವಿಧಾನಸಭೆ ಉಪಾಧ್ಯಕ್ಷರಾದ ಎನ್. ಯೋಗೀಶ್ ಭಟ್,ಶಾಸಕರಾದ ಯು.ಟಿ.ಖಾದರ್ ಸಂಸದರಾದ ನಳಿನ್ ಕುಮಾರ್ ಕಟೀಲ್, ಮೇಯರ್ ಪ್ರವೀಣ್ ಕುಮಾರ್, ನಗರಾಭಿವೃದ್ಧಿ ಪ್ರಾಧಿಕಾರದ ಆದ್ಯಕ್ಷರು,ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ನಾಗರಾಜ ಶೆಟ್ಟಿ, ಜಿಲ್ಲಾಧಿಕಾರಿ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು,ಕಾಲೇಜುಗಳ ಪ್ರಾಂಶುಪಾಲರು,ಬ್ಯಾಂಕ್ ಅಧಿಕಾರಿಗಳು ಮುಂತಾದವರು ಉಪಸ್ಥಿತರಿದ್ದರು.