
10.15 ಗಂಟೆಗೆ ಮಂಗಳೂರು ವಿಶ್ವವಿದ್ಯಾನಿಲಯದ ವಿಜ್ಞಾನ ಸಂಕೀರ್ಣ ಆವರಣದಲ್ಲಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ನಾಲ್ಕನೇ ಸಮ್ಮೇಳನ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸುವರು.11.45 ಗಂಟೆಗೆ ಕಾವೂರು ಬಿಜೆಎಸ್ ಶಾಲಾ ಹಿಂಭಾಗದ ಅಭಿಮಾನ್ ಗ್ರೀನ್ ಲಾನ್ಸ್ನಲ್ಲಿ ಪರಮ ಪೂಜ್ಯ ಜಗದ್ಗುರು ಪದ್ಮಭೂಷಣ ಶ್ರೀಶ್ರೀಶ್ರೀ ಡಾ.ಬಾಲಗಂಗಾಧರನಾಥ ಮಹಾಸ್ವಾಮಿಗಳವರ 68ನೇ ವರ್ಧಂತ್ಯುತ್ಸವ ಹಾಗೂ ಬಿಜಿಎಸ್ ವಿದ್ಯಾರ್ಥಿ ನಿಲಯದ ಉದ್ಘಾಟನೆ ಮತ್ತು ಬಿಜಿಎಸ್ ಪಿ.ಯು.ಕಾಲೇಜು ಕಟ್ಟಡದ ಶಂಕುಸ್ಥಾಪನೆ ನೆರವೇರಿಸುವರು.
ಮಧ್ಯಾಹ್ನ 1,30 ಗಂಟೆಗೆ ಹೆಲಿಕಾಪ್ಟರ್ ಮೂಲಕ ಕಾರ್ಕಳಕ್ಕೆ ತೆರಳುವರು.

ಸಂಜೆ 5.25 ಗಂಟೆಗೆ ಹೆಲಿಪ್ಯಾಡ್ನಿಂದ ಪಂಜ ಹೆಲಿಪ್ಯಾಡಿಗೆ ತೆರಳುವರು.ಸಂಜೆ 7 ಗಂಟೆಗೆ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ನವೀಕರಣ ಪುನ: ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶ ಮಹೋತ್ಸವ,ನಾಗಮಂಡಲ ಮತ್ತು ವರ್ಷಾವಧಿ ಜಾತ್ರೋತ್ಸವ ಸಮಾರಂಭದಲ್ಲಿ ಪಾಲ್ಗೊಳ್ಳುವರು.
ರಾತ್ರಿ 8.50 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ಮಾಡುವರು. 9.45 ಗಂಟೆಗೆ ನೆಟ್ಟಣ ರೈಲು ನಿಲ್ದಾಣಕ್ಕೆ ತೆರಳಿ ರೈಲಿನ ಮೂಲಕ ಬೆಂಗಳೂರಿಗೆ ತೆರಳುವರು.