
ವಲಯದ ಪ್ರತಿ ಕೇ0ದ್ರಕ್ಕೆ ಒಬ್ಬರ0ತೆ ಪ್ರೌಡ ಶಾಲಾ ಮುಖ್ಯ ಶಿಕ್ಷಕರು/ಹಿರಿಯ ಸಹಾಯಕ ಶಿಕ್ಷಕರನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ನೇಮಕ ಮಾಡಿ ಸ್ಥಾನಿಕ ಜಾಗೃತ ದಳ ರಚಿಸಲಾಗಿದೆ. ಈ ಸಂಬಂಧ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆಗಳು ನಡೆದಿದ್ದು, ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಯಾವುದೇ ಗೊಂದಲ ಅಥವಾ ಸಮಸ್ಯೆಗಳಿಗೆ ಅವಕಾಶ ನೀಡದೆ ವಿದ್ಯಾರ್ಥಿ ಸ್ನೇಹಿ ಕ್ರಮಗಳನ್ನು ಕೈಗೊಳ್ಳಲಾಗಿದ್ದು, ನಿರ್ಭೀತಿಯಿಂದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಬಹುದಾಗಿದೆ. ಪರೀಕ್ಷಾ ಕೇಂದ್ರಕ್ಕೆ ಅರ್ಧಗಂಟೆ ಮೊದಲೇ ಆಗಮಿಸಲು ಸೂಚಿಸಲಾಗಿದೆ.
ಮೌಲ್ಯಮಾಪನಕ್ಕೆ ಸಂಬಂಧಿಸಿದಂತೆ ಮ0ಗಳೂರು ನಗರದ 6 ಸುಸಜ್ಜಿತವಾದ ಹಾಗೂ ಮೂಲಭೂತ ಸೌಕರ್ಯ ಹೊ0ದಿರುವ ಪ್ರೌಢಶಾಲೆಗಳಲ್ಲಿ ಮೌಲ್ಯಮಾಪನ ಕೇ0ದ್ರಗಳನ್ನು ರಚಿಸಲಾಗಿದೆ. ಜಿಲ್ಲಾ ಹ0ತದಲ್ಲಿ ಶಿಕ್ಷಣ ಇಲಾಖೆಯ ವತಿಯಿ0ದ ಪ್ರತ್ಯೇಕವಾಗಿ ಎರಡು ಜಾಗೃತ ದಳದ ರಚನೆ ಮಾಡಲಾಗಿದೆ ಎಂದು ವಿದ್ಯಾ0ಗ ಉಪನಿರ್ದೇಶಕರಾದ ಮೋಸೆಸ್ ಜಯಶೇಖರ್ ತಿಳಿಸಿರುತ್ತಾರೆ.