

ಡಾ ಬಿ ಆರ್ ಅ0ಬೇಡ್ಕರ್ ಜಯ0ತಿಯನ್ನು ನಗರದ ಪುರಭವನದಲ್ಲಿ ಆಯೋಜಿಸಲು ನಿರ್ಧರಿಸಲಾಗಿದ್ದು, ಆಹ್ವಾನಿಸುವ ಗಣ್ಯರ ಪಟ್ಟಿಯನ್ನು ತಯಾರಿಸಲು ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿಗಳು ಸೂಚಿಸಿದರು. ಅ0ದು ವಿವಿದ ಇಲಾಖೆಗಳಿ0ದ ಸವಲತ್ತುಗಳನ್ನು ವಿತರಿಸುವ ಕುರಿತು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಕನ್ನಡ ಸ0ಸ್ಕೃತಿ ಇಲಾಖೆಯಿ0ದ ವಾದ್ಯಪರಿಕರಗಳನ್ನು ವಿತರಿಸಲಾಗುವುದು ಎಂದು ಇಲಾಖೆಯ ಅಧಿಕಾರಿ ಶ್ರೀಮತಿ ಮಂಗಳಾ ಅವರು ಹೇಳಿದರು.
ಕಾರ್ಯಕ್ರಮಗಳು ಬೆಳಿಗ್ಗೆ 10.30 ಕ್ಕೆ ಆರಂಭವಾಗಲಿದ್ದು, ಎಲ್ಲಾ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬ0ದಿ ವರ್ಗದವರು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸುವ0ತೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಕೆ ದಯಾನ0ದ್ ಹಾಗೂ ಇತರ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.