
ಸಮಿತಿಯಲ್ಲಿ ಜಿಲ್ಲಾಧಿಕಾರಿಯವರನ್ನು ಅಧ್ಯಕ್ಷರನ್ನಾಗಿಯೂ,ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಯವರನ್ನು ಸದಸ್ಯ ಕಾರ್ಯದರ್ಶಿಯನ್ನಾಗಿಯೂ ಆಯ್ಕೆ ಮಾಡಲಾಗಿದೆ.
ಸದಸ್ಯರನ್ನಾಗಿ ಜಿಲ್ಲಾ ಪೋಲೀಸ್ ಅಧೀಕ್ಷಕರು, ರಾಜ್ಯ ಗುಪ್ತ ವಾರ್ತೆಯ ಅಧಿಕಾರಿಗಳು, ಜಿಲ್ಲಾ ಅರಣ್ಯಾಧಿಕಾರಿಗಳು, ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕರು, ಜಿಲ್ಲಾ ಪಂಚಾಯತ್ ಕಾರ್ಯ ನಿರ್ವಾಹಕ ಅಭಿಯಂತರರು, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿಗಳು, ಮಹಿಳಾ ಮಕ್ಕಳ ಕಲ್ಯಾಣ ಇಲಾಖೆ, ಸಾರಿಗೆ ನಿಯಂತ್ರಣಾಧಿಕಾರಿ, ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರು, ಮೆಸ್ಕಾಂ ಅಧಿಕಾರಿ, ಕೃಷಿ ಇಲಾಖೆ ಜಂಟಿ ನಿರ್ದೇಶಕರು, ಪಶು ಸಂಗೋಪನೆ ಉಪನಿರ್ದೇಶಕರು, ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕರು, ಸಹಾಯಕ ಕಾರ್ಮಿಕ ಆಯುಕ್ತರು,ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿಗಳು ಆಯ್ಕೆಯಾಗಿರುತ್ತಾರೆಂದು ಸರ್ಕಾರದ ಆದೇಶದಲ್ಲಿ ತಿಳಿಸಿರುತ್ತಾರೆ.
ಈ ಸಮಿತಿಯು ಈಗಾಗಲೇ ಜನಸಂಪರ್ಕ ಸಭೆಯನ್ನು ನಡೆಸಲು ಸೂಚಿಸಿದ್ದು, ನಕ್ಸಲ್ ಬಾಧಿತ ಪ್ರದೇಶ ಹಾಗೂ ಶೋಷಣೆಗೊಳಗೊಂಡ ಸಮುದಾಯಗಳ ಬೇಡಿಕೆ ಈಡೇರಿಸಲು ಜಿಲ್ಲಾಧಿಕಾರಿಗಳು ಕೊಡುವ ಅನುದಾನವನ್ನು ಉಪಯೋಗಿಸಿಕೊಳ್ಳತಕ್ಕದೆಂದು ಆದೇಶದಲ್ಲಿ ತಿಳಿಸಲಾಗಿದೆ.